23.2 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಲಂತಿಲ ಗ್ರಾ.ಪಂ. ನಲ್ಲಿ ವಿಕಲ ಚೇತನ ವಿಶೇಷ ಗ್ರಾಮ ಸಭೆ

ಇಲಂತಿಲ: 2024 -25ನೇ ಸಾಲಿನ ವಿಕಲ ಚೇತನ ವಿಶೇಷ ಗ್ರಾಮ ಸಭೆಯು ಸರ್ಕಾರದ ಆದೇಶದಂತೆ ಜ. 30 ರಂದು ಇಲಂತಿಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ಅಧ್ಯಕ್ಷ ತಿಮ್ಮಪ್ಪ ಗೌಡ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಪಂಚಾಯತ್ ಅಧ್ಯಕ್ಷರು ಹಾಗೂ ವೇದಿಕೆಯಲ್ಲಿರುವ ಎಲ್ಲಾ ಗಣ್ಯರುಗಳ ಸಮ್ಮುಖದಲ್ಲಿ ಸಭೆಯನ್ನು ದೀಪ ಬೆಳಗಿಸುವುದರ ಮೂಲಕ ಉದ್ಗಾಟಿಸಲಾಯಿತು. 2024-25ನೇ ಸಾಲಿನ ವಿಕಲಚೇತನರ ವಾರ್ಷಿಕ ವರದಿಯನ್ನು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ರಾಧಿಕಾ ವಾಚಿಸಿದರು.


ವಿಕಲಚೇತನರಿಗೆ ವಿಕಲಚೇತನ ಇಲಾಖೆ ಹಾಗೂ ಎಲ್ಲಾ ಇಲಾಖೆಗಳಿಂದ ಸಿಗುವ ಸರಕಾರದ ಸೌಲಭ್ಯದ ಸಮಗ್ರ ಮಾಹಿತಿಯನ್ನು ತಾಲೂಕು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತ ಜೋನ್‌ ಬ್ಯಾಪ್ಟಿಸ್ಟ್ ಡಿಸೋಜ‌ ನೀಡಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಪಂಚಾಯತಿಯಿಂದ ವಿಕಲಚೇತನರಿಗೆ ಸಿಗುವ ಸೌಲಭ್ಯಗಳ ಮಾಹಿತಿ ನೀಡಿದರು. ಪ್ರಸಕ್ತ ಸಾಲಿನಲ್ಲಿ ಐದು ಜನ ವಿಕಲಚೇತನರಿಗೆ ವೈದ್ಯಕೀಯ ವೆಚ್ಚದ ಸಹಾಯಧನದ ಚೆಕ್ಕನ್ನು ಹಸ್ತಂತರಿಸಲಾಯಿತು,


ಎರಡು ಜನ ವಿಕಲಚೇತನರಿಗೆ ಕುಡಿಯುವ ನೀರಿನ ಟ್ಯಾಂಕ್ ಖರೀದಿಗೆ ಸಹಾಯಧನದ ಚೆಕ್ ವಿತರಿಸಲಾಯಿತು ಹಾಗೂ ಒಬ್ಬರಿಗೆ ವಿಶೇಷ ಶೌಚಾಲಯ ನಿರ್ಮಾಣಕ್ಕೆ ಸಹಾಯಧನದ ಚೆಕ್‌ ಹಸ್ತಾಂತರಿಸಲಾಯಿತು.


ಪಂಚಾಯತ್ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿ ಹೆಚ್ ಒ ಶ್ರೀಮತಿ ಮಧುಶ್ರೀ ಇವರು ವಿಕಲಚೇತನರಿಗೆ ಹಾಗೂ ಎಂಡೋಪೀಡಿತರಿಗೆ ಆರೋಗ್ಯ ಇಲಾಖೆಯಲ್ಲಿ ಇರುವ ಸೇವೆಯ ಬಗ್ಗೆ ಮಾಹಿತಿಯನ್ನು ನೀಡಿದರು.


ಸಭೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಆರೋಗ್ಯ ಇಲಾಖೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ನಡೆಸಲಾಯಿತು.
ಪಂಚಾಯತ್ ಕಾರ್ಯದರ್ಶಿ ಸ್ವಾಗತಿಸಿ, ಧನ್ಯವಾದ ಸಲ್ಲಿಸಿದರು.

Related posts

ಬಿಜೆಪಿ ಕೊಕ್ಕಡ 237ನೇ ಬೂತು ಸಮಿತಿಯ ಅಧ್ಯಕ್ಷರಾಗಿ ಶಶಿಕುಮಾರ್, ಕಾರ್ಯದರ್ಶಿಯಾಗಿ ಶ್ರೀಧರ್ ಆಯ್ಕೆ

Suddi Udaya

ಕೊಯ್ಯೂರು ರಸ್ತೆಗೆ ಉರುಳಿದ ಹೆಮ್ಮರ : ಸ್ಥಳೀಯರ ಸಹಕಾರದಲ್ಲಿ ಇಲಾಖೆಯಿಂದ ತೆರವು

Suddi Udaya

ಗುರುವಾಯನಕೆರೆ ಪ್ರಾ.ಕೃ.ಪ. ಸಹಕಾರಿ ಸಂಘದ ಅಧ್ಯಕ್ಷರಾಗಿ ಮುಗುಳಿ ನಾರಾಯಣ ಭಟ್, ಉಪಾಧ್ಯಕ್ಷರಾಗಿ ವಡಿವೇಲು

Suddi Udaya

ಬಾರ್ಯ ಗ್ರಾ.ಪಂ. ಘನ ತ್ಯಾಜ್ಯ ಘಟಕದ ಉದ್ಘಾಟನೆ ಮತ್ತು ಗ್ರಂಥಪಾಲಕರ ದಿನಾಚರಣೆ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ” ನ್ಯಾಷನಲ್ ಮಾಥ್ಸ್ ಡೇ “ಮತ್ತು ವಿಜ್ಞಾನ ವಸ್ತು ಪ್ರದರ್ಶನ

Suddi Udaya

ಇಂದಬೆಟ್ಟು : ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!