22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಲಂತಿಲ ಗ್ರಾ.ಪಂ. ನಲ್ಲಿ ವಿಕಲ ಚೇತನ ವಿಶೇಷ ಗ್ರಾಮ ಸಭೆ

ಇಲಂತಿಲ: 2024 -25ನೇ ಸಾಲಿನ ವಿಕಲ ಚೇತನ ವಿಶೇಷ ಗ್ರಾಮ ಸಭೆಯು ಸರ್ಕಾರದ ಆದೇಶದಂತೆ ಜ. 30 ರಂದು ಇಲಂತಿಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ಅಧ್ಯಕ್ಷ ತಿಮ್ಮಪ್ಪ ಗೌಡ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಪಂಚಾಯತ್ ಅಧ್ಯಕ್ಷರು ಹಾಗೂ ವೇದಿಕೆಯಲ್ಲಿರುವ ಎಲ್ಲಾ ಗಣ್ಯರುಗಳ ಸಮ್ಮುಖದಲ್ಲಿ ಸಭೆಯನ್ನು ದೀಪ ಬೆಳಗಿಸುವುದರ ಮೂಲಕ ಉದ್ಗಾಟಿಸಲಾಯಿತು. 2024-25ನೇ ಸಾಲಿನ ವಿಕಲಚೇತನರ ವಾರ್ಷಿಕ ವರದಿಯನ್ನು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ರಾಧಿಕಾ ವಾಚಿಸಿದರು.


ವಿಕಲಚೇತನರಿಗೆ ವಿಕಲಚೇತನ ಇಲಾಖೆ ಹಾಗೂ ಎಲ್ಲಾ ಇಲಾಖೆಗಳಿಂದ ಸಿಗುವ ಸರಕಾರದ ಸೌಲಭ್ಯದ ಸಮಗ್ರ ಮಾಹಿತಿಯನ್ನು ತಾಲೂಕು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತ ಜೋನ್‌ ಬ್ಯಾಪ್ಟಿಸ್ಟ್ ಡಿಸೋಜ‌ ನೀಡಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಪಂಚಾಯತಿಯಿಂದ ವಿಕಲಚೇತನರಿಗೆ ಸಿಗುವ ಸೌಲಭ್ಯಗಳ ಮಾಹಿತಿ ನೀಡಿದರು. ಪ್ರಸಕ್ತ ಸಾಲಿನಲ್ಲಿ ಐದು ಜನ ವಿಕಲಚೇತನರಿಗೆ ವೈದ್ಯಕೀಯ ವೆಚ್ಚದ ಸಹಾಯಧನದ ಚೆಕ್ಕನ್ನು ಹಸ್ತಂತರಿಸಲಾಯಿತು,


ಎರಡು ಜನ ವಿಕಲಚೇತನರಿಗೆ ಕುಡಿಯುವ ನೀರಿನ ಟ್ಯಾಂಕ್ ಖರೀದಿಗೆ ಸಹಾಯಧನದ ಚೆಕ್ ವಿತರಿಸಲಾಯಿತು ಹಾಗೂ ಒಬ್ಬರಿಗೆ ವಿಶೇಷ ಶೌಚಾಲಯ ನಿರ್ಮಾಣಕ್ಕೆ ಸಹಾಯಧನದ ಚೆಕ್‌ ಹಸ್ತಾಂತರಿಸಲಾಯಿತು.


ಪಂಚಾಯತ್ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿ ಹೆಚ್ ಒ ಶ್ರೀಮತಿ ಮಧುಶ್ರೀ ಇವರು ವಿಕಲಚೇತನರಿಗೆ ಹಾಗೂ ಎಂಡೋಪೀಡಿತರಿಗೆ ಆರೋಗ್ಯ ಇಲಾಖೆಯಲ್ಲಿ ಇರುವ ಸೇವೆಯ ಬಗ್ಗೆ ಮಾಹಿತಿಯನ್ನು ನೀಡಿದರು.


ಸಭೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಆರೋಗ್ಯ ಇಲಾಖೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ನಡೆಸಲಾಯಿತು.
ಪಂಚಾಯತ್ ಕಾರ್ಯದರ್ಶಿ ಸ್ವಾಗತಿಸಿ, ಧನ್ಯವಾದ ಸಲ್ಲಿಸಿದರು.

Related posts

ಮೇ 17: ಶಾಸಕ ಹರೀಶ್ ಪೂಂಜರ ಸಹಕಾರದಲ್ಲಿ ಉಜಿರೆಯಲ್ಲಿ ಸಂಭ್ರಮದ ಕೇರಳ ಸಾಂಪ್ರದಾಯಿಕ “ವಿಷುಕಣಿ” ಆಚರಣೆ:ಕೇರಳದ ಸಾಂಪ್ರದಾಯಿಕ ಶೈಲಿಯ ಊಟೋಪಚಾರ,ಕೇರಳ ಚೆಂಡೆ ಪ್ರದರ್ಶನ,ಪೂಕಳಂ, ಅಂತರರಾಜ್ಯ ಕಲಾವಿದರಿಂದ ಸಾಂಸ್ಕೃತಿಕ ವೈಭವ

Suddi Udaya

ಜ.14-20: ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಶಿಶಿಲ: ಬರ್ಗುಳ ಕಿಂಡಿ ಅಣೆಕಟ್ಟು ಬಳಿ ಸಾವಿರಾರು ಮೀನುಗಳ ಮಾರಣ ಹೋಮ: ಮೈಲುತುತ್ತು ಬಳಸಿ ಮೀನು ಹಿಡಿಯಲು ಯತ್ನಿಸಿದ ಕಿಡಿಗೇಡಿಗಳು

Suddi Udaya

ಸ್ಪಂದನ ಬಂಟರ ಸೇವಾ ತಂಡದ 50ನೇ ಯೋಜನೆಯಾಗಿ ಮನೆ ನಿರ್ಮಾಣ

Suddi Udaya

ಬಳಂಜ: ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶ್ರೀ ಗುರು ಪೂಜಾ

Suddi Udaya

ಬಳಂಜ : ಬೋಂಟ್ರೊಟ್ಟುಗುತ್ತು ದೈವಸ್ಥಾನದಲ್ಲಿ ಮಹಾ ಚಂಡಿಕಾಯಾಗ: ವಿಧಾನಪರಿಷತ್ ಶಾಸಕ ಕೆ.ಹರೀಶ್ ಕುಮಾರ್ ಸಹಿತ ನೂರಾರು ಭಕ್ತರು ಭಾಗಿ

Suddi Udaya
error: Content is protected !!