23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಲಂತಿಲ ಗ್ರಾ.ಪಂ. ನಲ್ಲಿ ವಿಕಲ ಚೇತನ ವಿಶೇಷ ಗ್ರಾಮ ಸಭೆ

ಇಲಂತಿಲ: 2024 -25ನೇ ಸಾಲಿನ ವಿಕಲ ಚೇತನ ವಿಶೇಷ ಗ್ರಾಮ ಸಭೆಯು ಸರ್ಕಾರದ ಆದೇಶದಂತೆ ಜ. 30 ರಂದು ಇಲಂತಿಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ಅಧ್ಯಕ್ಷ ತಿಮ್ಮಪ್ಪ ಗೌಡ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಪಂಚಾಯತ್ ಅಧ್ಯಕ್ಷರು ಹಾಗೂ ವೇದಿಕೆಯಲ್ಲಿರುವ ಎಲ್ಲಾ ಗಣ್ಯರುಗಳ ಸಮ್ಮುಖದಲ್ಲಿ ಸಭೆಯನ್ನು ದೀಪ ಬೆಳಗಿಸುವುದರ ಮೂಲಕ ಉದ್ಗಾಟಿಸಲಾಯಿತು. 2024-25ನೇ ಸಾಲಿನ ವಿಕಲಚೇತನರ ವಾರ್ಷಿಕ ವರದಿಯನ್ನು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ರಾಧಿಕಾ ವಾಚಿಸಿದರು.


ವಿಕಲಚೇತನರಿಗೆ ವಿಕಲಚೇತನ ಇಲಾಖೆ ಹಾಗೂ ಎಲ್ಲಾ ಇಲಾಖೆಗಳಿಂದ ಸಿಗುವ ಸರಕಾರದ ಸೌಲಭ್ಯದ ಸಮಗ್ರ ಮಾಹಿತಿಯನ್ನು ತಾಲೂಕು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತ ಜೋನ್‌ ಬ್ಯಾಪ್ಟಿಸ್ಟ್ ಡಿಸೋಜ‌ ನೀಡಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಪಂಚಾಯತಿಯಿಂದ ವಿಕಲಚೇತನರಿಗೆ ಸಿಗುವ ಸೌಲಭ್ಯಗಳ ಮಾಹಿತಿ ನೀಡಿದರು. ಪ್ರಸಕ್ತ ಸಾಲಿನಲ್ಲಿ ಐದು ಜನ ವಿಕಲಚೇತನರಿಗೆ ವೈದ್ಯಕೀಯ ವೆಚ್ಚದ ಸಹಾಯಧನದ ಚೆಕ್ಕನ್ನು ಹಸ್ತಂತರಿಸಲಾಯಿತು,


ಎರಡು ಜನ ವಿಕಲಚೇತನರಿಗೆ ಕುಡಿಯುವ ನೀರಿನ ಟ್ಯಾಂಕ್ ಖರೀದಿಗೆ ಸಹಾಯಧನದ ಚೆಕ್ ವಿತರಿಸಲಾಯಿತು ಹಾಗೂ ಒಬ್ಬರಿಗೆ ವಿಶೇಷ ಶೌಚಾಲಯ ನಿರ್ಮಾಣಕ್ಕೆ ಸಹಾಯಧನದ ಚೆಕ್‌ ಹಸ್ತಾಂತರಿಸಲಾಯಿತು.


ಪಂಚಾಯತ್ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿ ಹೆಚ್ ಒ ಶ್ರೀಮತಿ ಮಧುಶ್ರೀ ಇವರು ವಿಕಲಚೇತನರಿಗೆ ಹಾಗೂ ಎಂಡೋಪೀಡಿತರಿಗೆ ಆರೋಗ್ಯ ಇಲಾಖೆಯಲ್ಲಿ ಇರುವ ಸೇವೆಯ ಬಗ್ಗೆ ಮಾಹಿತಿಯನ್ನು ನೀಡಿದರು.


ಸಭೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಆರೋಗ್ಯ ಇಲಾಖೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ನಡೆಸಲಾಯಿತು.
ಪಂಚಾಯತ್ ಕಾರ್ಯದರ್ಶಿ ಸ್ವಾಗತಿಸಿ, ಧನ್ಯವಾದ ಸಲ್ಲಿಸಿದರು.

Related posts

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಭಗವದ್ಗೀತಾ ತರಗತಿ ಪ್ರಾರಂಭ

Suddi Udaya

ಕೊಕ್ಕಡ: ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ ಪ್ರಯುಕ್ತ ಗಣಹೋಮ

Suddi Udaya

ಅರಸಿನಮಕ್ಕಿ: ಪಡ್ಡಾಯಿಬೆಟ್ಟು ನಿವಾಸಿ ನಿವೃತ್ತ ಶಿಕ್ಷಕ ತಿರುಮಲೇಶ್ವರ ಭಟ್ ಹೃದಯಾಘಾತದಿಂದ ನಿಧನ

Suddi Udaya

ತಣ್ಣೀರುಪಂತ ವಲಯದ ರುದ್ರಗಿರಿ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ: 13ನೇ ವರ್ಷದ ಪಾದಯಾತ್ರೆ ಸಂಪನ್ನ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಶೀಘ್ರದಲ್ಲೇ ನಸಿ೯ಂಗ್‌ ಕಾಲೇಜು ಹಾಗೂ ಕೃಷಿ ಕಾಲೇಜು ಆರಂಭಿಸಲು ಯೋಜನೆ: ಡಾ.ಹೆಗ್ಗಡೆ

Suddi Udaya

ಸೌಜನ್ಯರವರ ಅತ್ಯಾಚಾರ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಒಕ್ಕಲಿಗರ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಧರಣಿ

Suddi Udaya
error: Content is protected !!