32.6 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

ಕಲ್ಮಂಜ : ಕಲ್ಮಂಜ ಪ್ರೌಢಶಾಲೆಯ ಹತ್ತನೆಯ ತರಗತಿಯ ಪೋಷಕರ ಸಭೆಯಲ್ಲಿ ವೇಣೂರು ಪ್ರೌಢಶಾಲೆಯ ಕನ್ನಡ ಅಧ್ಯಾಪಕರು ಹಾಗೂ ಸಂಪನ್ಮೂಲ ವ್ಯಕ್ತಿಗಳಾದ ರವೀಂದ್ರರವರು ಮಾತನಾಡುತ್ತಾ “ಆಸಕ್ತಿ ಮತ್ತು ಆತ್ಮವಿಶ್ವಾಸವಿದ್ದರೆ ಜಗತ್ತನ್ನೇ ಗೆಲ್ಲಬಹುದು” ಹಾಗೂ ಹಲವಾರು ಉದಾಹರಣೆಗಳ ಮೂಲಕ ಸಾಧಕರ ಕತೆಗಳನ್ನು ಹೇಳಿ ಆಸಕ್ತಿಯಿಂದ ಹಾಗೂ ಆತ್ಮವಿಶ್ವಾಸದಿಂದ ಪ್ರಯತ್ನಿಸಿ ಮಕ್ಕಳೆˌಖಂಡಿತಾ ನೀವು ಸಾಧಿಸಬಲ್ಲರಿ.ಹಲವಾರು ಕೊರತೆಗಳಿದ್ದರೂ ಲೆಕ್ಕಿಸದೆ ತನ್ನ ಪ್ರಯತ್ನದ ಮೂಲಕ ಸಾಧನೆ ಮಾಡಿದಂತಹ ವ್ಯಕ್ತಿಗಳು ನಮ್ಮ ಕಣ್ಣೆದುರೇ ಇರುವಾಗ ಎಲ್ಲಾ ರೀತೀಯ ಸೌಲಭ್ಯ ಹೊಂದಿರುವ ನೀವು ಯಶಸ್ಸನ್ನು ಪಡೆಯುವುದು ಕಷ್ಟವಲ್ಲ ಆದರೆ ನಿರಂತರ ಪ್ರಯತ್ನ ಅಗತ್ಯ ಎಂದು ಕಿವಿಮಾತು ಹೇಳಿದರು.


ಶಿಕ್ಷಕಿ ಸವಿತಾರವರು ನಿರೂಪಿಸಿದ ಕಾರ್ಯಕ್ರಮದಲ್ಲಿ ಸಾವಿತ್ರಿ ಸಿ ಡಿ ಸ್ವಾಗತಿಸಿ ಮುಖ್ಯ ಶಿಕ್ಷಕಿ ಪೂರ್ಣಿಮಾರವರು ಪ್ರಸ್ತಾವಿಸಿದರು.

ಈ ಸಂದರ್ಭದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು. ಎಸ್ ಡಿ ಎಂ ಸಿ ಕಾರ್ಯಾಧ್ಯಕ್ಷ ಮಂಜುನಾಥ ಶೆಟ್ಟರು ಉಪಸ್ಥಿತರಿದ್ದರು. ಶಿಕ್ಷಕಿಯರಾದ ಮಾಲಿನಿ ಹೆಗಡೆ ಹೇಮಲತಾ ˌಪ್ರೇಮಲತಾ ಸುಧೀಂದ್ರ ಹಾಗೂ ಪ್ರೇಮಾ ಯಚ್ ವಿ ಸಹಕರಿಸಿದರು

Related posts

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರ ಪತ್ತೆಗಾಗಿ ಪೊಲೀಸರ ಮನವಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸುರಕ್ಷಾ ಚೆಕ್ ವಿತರಣೆ

Suddi Udaya

ಕಾಂಗ್ರೇಸ್‌ ಆಡಳಿತ ಸರಕಾರ ರೈತಾಪಿ ವರ್ಗವನ್ನು ನಿರ್ಲಕ್ಷಿಸಿದೆ: ಬಿಜೆಪಿ ಸರಕಾರ ತಂದಿದ್ದ ಹಲವಾರು ರೈತ ಕಲ್ಯಾಣ ಯೋಜನೆಗಳನ್ನು ಕೈ ಬಿಟ್ಟಿರುವುದು ಖಂಡನೀಯ: ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐ.ಟಿ.ಐ.ಯಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya

ಕಳಿಯ : ಬಾಕಿಮಾರು ಮನೆಯ ಸುರೇಶ್ ಗೌಡ ನಿಧನ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
error: Content is protected !!