July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

ಕಲ್ಮಂಜ : ಕಲ್ಮಂಜ ಪ್ರೌಢಶಾಲೆಯ ಹತ್ತನೆಯ ತರಗತಿಯ ಪೋಷಕರ ಸಭೆಯಲ್ಲಿ ವೇಣೂರು ಪ್ರೌಢಶಾಲೆಯ ಕನ್ನಡ ಅಧ್ಯಾಪಕರು ಹಾಗೂ ಸಂಪನ್ಮೂಲ ವ್ಯಕ್ತಿಗಳಾದ ರವೀಂದ್ರರವರು ಮಾತನಾಡುತ್ತಾ “ಆಸಕ್ತಿ ಮತ್ತು ಆತ್ಮವಿಶ್ವಾಸವಿದ್ದರೆ ಜಗತ್ತನ್ನೇ ಗೆಲ್ಲಬಹುದು” ಹಾಗೂ ಹಲವಾರು ಉದಾಹರಣೆಗಳ ಮೂಲಕ ಸಾಧಕರ ಕತೆಗಳನ್ನು ಹೇಳಿ ಆಸಕ್ತಿಯಿಂದ ಹಾಗೂ ಆತ್ಮವಿಶ್ವಾಸದಿಂದ ಪ್ರಯತ್ನಿಸಿ ಮಕ್ಕಳೆˌಖಂಡಿತಾ ನೀವು ಸಾಧಿಸಬಲ್ಲರಿ.ಹಲವಾರು ಕೊರತೆಗಳಿದ್ದರೂ ಲೆಕ್ಕಿಸದೆ ತನ್ನ ಪ್ರಯತ್ನದ ಮೂಲಕ ಸಾಧನೆ ಮಾಡಿದಂತಹ ವ್ಯಕ್ತಿಗಳು ನಮ್ಮ ಕಣ್ಣೆದುರೇ ಇರುವಾಗ ಎಲ್ಲಾ ರೀತೀಯ ಸೌಲಭ್ಯ ಹೊಂದಿರುವ ನೀವು ಯಶಸ್ಸನ್ನು ಪಡೆಯುವುದು ಕಷ್ಟವಲ್ಲ ಆದರೆ ನಿರಂತರ ಪ್ರಯತ್ನ ಅಗತ್ಯ ಎಂದು ಕಿವಿಮಾತು ಹೇಳಿದರು.


ಶಿಕ್ಷಕಿ ಸವಿತಾರವರು ನಿರೂಪಿಸಿದ ಕಾರ್ಯಕ್ರಮದಲ್ಲಿ ಸಾವಿತ್ರಿ ಸಿ ಡಿ ಸ್ವಾಗತಿಸಿ ಮುಖ್ಯ ಶಿಕ್ಷಕಿ ಪೂರ್ಣಿಮಾರವರು ಪ್ರಸ್ತಾವಿಸಿದರು.

ಈ ಸಂದರ್ಭದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು. ಎಸ್ ಡಿ ಎಂ ಸಿ ಕಾರ್ಯಾಧ್ಯಕ್ಷ ಮಂಜುನಾಥ ಶೆಟ್ಟರು ಉಪಸ್ಥಿತರಿದ್ದರು. ಶಿಕ್ಷಕಿಯರಾದ ಮಾಲಿನಿ ಹೆಗಡೆ ಹೇಮಲತಾ ˌಪ್ರೇಮಲತಾ ಸುಧೀಂದ್ರ ಹಾಗೂ ಪ್ರೇಮಾ ಯಚ್ ವಿ ಸಹಕರಿಸಿದರು

Related posts

ವೇಣೂರು-ಪೆರ್ಮುಡ ಹೊನಲು ಬೆಳಕಿನ 33ನೇ ವರ್ಷದ ಸೂರ್ಯ-ಚಂದ್ರ ಜೋಡುಕರೆ ಬಯಲು ಕಂಬಳ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ನೇತ್ರಾ ತಪಾಸಣಾ ಶಿಬಿರ

Suddi Udaya

ಕೈಲಾರು ರಾಜಗೋಪಾಲ್ ಭಟ್ ರಿಂದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರಿಗೆ ವಾಸ್ತು ಗಿಡ ಸಮರ್ಪಣೆ

Suddi Udaya

ಕೊಕ್ಕಡದಲ್ಲಿ ಸತ್ಯ ಸುದ್ದಿ ನ್ಯೂಸ್ ಕಛೇರಿ ಮತ್ತು ವೆಬ್ ಸೈಟ್ ಲೋಕಾರ್ಪಣೆ

Suddi Udaya

ಹುಣ್ಸೆಕಟ್ಟೆ ಪಲ್ಕೆ ನಿವಾಸಿ ನಾರಾಯಣ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮೂಲ ಕೋಟೆ ತರವಾಡು ವತಿಯಿಂದ ಡಾ. ರವೀಶ್ ಪಡುಮಲೆಗೆ ಸನ್ಮಾನ

Suddi Udaya
error: Content is protected !!