23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

ಕಲ್ಮಂಜ : ಕಲ್ಮಂಜ ಪ್ರೌಢಶಾಲೆಯ ಹತ್ತನೆಯ ತರಗತಿಯ ಪೋಷಕರ ಸಭೆಯಲ್ಲಿ ವೇಣೂರು ಪ್ರೌಢಶಾಲೆಯ ಕನ್ನಡ ಅಧ್ಯಾಪಕರು ಹಾಗೂ ಸಂಪನ್ಮೂಲ ವ್ಯಕ್ತಿಗಳಾದ ರವೀಂದ್ರರವರು ಮಾತನಾಡುತ್ತಾ “ಆಸಕ್ತಿ ಮತ್ತು ಆತ್ಮವಿಶ್ವಾಸವಿದ್ದರೆ ಜಗತ್ತನ್ನೇ ಗೆಲ್ಲಬಹುದು” ಹಾಗೂ ಹಲವಾರು ಉದಾಹರಣೆಗಳ ಮೂಲಕ ಸಾಧಕರ ಕತೆಗಳನ್ನು ಹೇಳಿ ಆಸಕ್ತಿಯಿಂದ ಹಾಗೂ ಆತ್ಮವಿಶ್ವಾಸದಿಂದ ಪ್ರಯತ್ನಿಸಿ ಮಕ್ಕಳೆˌಖಂಡಿತಾ ನೀವು ಸಾಧಿಸಬಲ್ಲರಿ.ಹಲವಾರು ಕೊರತೆಗಳಿದ್ದರೂ ಲೆಕ್ಕಿಸದೆ ತನ್ನ ಪ್ರಯತ್ನದ ಮೂಲಕ ಸಾಧನೆ ಮಾಡಿದಂತಹ ವ್ಯಕ್ತಿಗಳು ನಮ್ಮ ಕಣ್ಣೆದುರೇ ಇರುವಾಗ ಎಲ್ಲಾ ರೀತೀಯ ಸೌಲಭ್ಯ ಹೊಂದಿರುವ ನೀವು ಯಶಸ್ಸನ್ನು ಪಡೆಯುವುದು ಕಷ್ಟವಲ್ಲ ಆದರೆ ನಿರಂತರ ಪ್ರಯತ್ನ ಅಗತ್ಯ ಎಂದು ಕಿವಿಮಾತು ಹೇಳಿದರು.


ಶಿಕ್ಷಕಿ ಸವಿತಾರವರು ನಿರೂಪಿಸಿದ ಕಾರ್ಯಕ್ರಮದಲ್ಲಿ ಸಾವಿತ್ರಿ ಸಿ ಡಿ ಸ್ವಾಗತಿಸಿ ಮುಖ್ಯ ಶಿಕ್ಷಕಿ ಪೂರ್ಣಿಮಾರವರು ಪ್ರಸ್ತಾವಿಸಿದರು.

ಈ ಸಂದರ್ಭದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು. ಎಸ್ ಡಿ ಎಂ ಸಿ ಕಾರ್ಯಾಧ್ಯಕ್ಷ ಮಂಜುನಾಥ ಶೆಟ್ಟರು ಉಪಸ್ಥಿತರಿದ್ದರು. ಶಿಕ್ಷಕಿಯರಾದ ಮಾಲಿನಿ ಹೆಗಡೆ ಹೇಮಲತಾ ˌಪ್ರೇಮಲತಾ ಸುಧೀಂದ್ರ ಹಾಗೂ ಪ್ರೇಮಾ ಯಚ್ ವಿ ಸಹಕರಿಸಿದರು

Related posts

ಮುಂಡಾಜೆ ಚಿತ್ಪಾವನ ಸಂಘಟನೆಯ ವಾರ್ಷಿಕೋತ್ಸವ: ಪದಗ್ರಹಣ ಸಮಾರಂಭ

Suddi Udaya

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಚೆನ್ನೆಮಣೆ ಗೊಬ್ಬು ಪಂಥೊ ಮತ್ತು ಸಂಧಿ ಪಾರ್ದನ ಸುಗಿಪ್ಪು ಪಂಥೊದ ಸಮಾರೋಪ ಸಮಾರಂಭ

Suddi Udaya

ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್ ದಾಖಲೆ ಸಾಧಿಸಿದ ಪಟ್ರಮೆಯ ಯುವ ಸಂಶೋಧಕ ದೀಪಕ್ ಎ.ಎಸ್.

Suddi Udaya

ಧರ್ಮಸ್ಥಳ ಅಶೋಕನಗರದಲ್ಲಿ 75 ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಎಸ್‌ಜಿಎಫ್‌ಐ (SGFI) ರಾಷ್ಟ್ರೀಯ ಕಬಡ್ಡಿ ಪಂದ್ಯಾಟ : ಉಜಿರೆಯ ಎಸ್.ಡಿ.ಎಂ ತಂಡ ಭಾಗಿ

Suddi Udaya
error: Content is protected !!