23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಪಂಚದುರ್ಗ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

ಕೊಯ್ಯೂರು : ಕೊಯ್ಯೂರು ಪಂಚದುರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಇದರ 2023 – 24 ನೇ ಸಾಲಿನ ವಾರ್ಷಿಕ ಮಹಾಸಭೆಯನ್ನು ಗ್ರಾಮ ಪಂಚಾಯತ್ ಆವರಣದಲ್ಲಿ ಜ.30 ರಂದು ನಡೆಯಿತು.

ಪಂಚಾಯತ್ ಅಧ್ಯಕ್ಷೆ ದಯಾಮಣಿ‌, ಒಕ್ಕೂಟದ ಅಧ್ಯಕ್ಷೆ ಪ್ರಮೀಳಾ ಪಿ , ಪಂಚಾಯತ್ ಅಭಿವೃದ್ಧಿ ‌ಅಧಿಕಾರಿ ಪ್ರಕಾಶ್ ಎಸ್ , ಪಂಚಾಯತ್ ಉಪಾಧ್ಯಕ್ಷ ಹರೀಶ್ ರವರು ದೀಪವನ್ನು ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಎಮ್ ಬಿಕೆ ಶುಭಲಕ್ಷ್ಮಿ ವಾರ್ಷಿಕ ವರದಿ ಹಾಗೂ ಜಮಾ ಖರ್ಚಿನ ವರದಿಯನ್ನು ಮಂಡಿಸಿ, ಅನುಮೋದನೆಯನ್ನು ಪಡೆಯಲಾಯಿತು. ವಲಯ ಮೇಲ್ವಿಚಾರಕ ಜಯಾನಂದ್ ವಾರ್ಷಿಕ ಮಹಾಸಭೆಯ ಉದ್ದೇಶ ಮತ್ತು ಜವಾಬ್ದಾರಿಗಳ ಕುರಿತು ಮಾಹಿತಿಯನ್ನು ನೀಡಿದರು. ಒಕ್ಕೂಟದ ಬೆಳಕು‌ ಸಂಜೀವಿನಿ‌ ಸಂಘದ ಸದಸ್ಯೆ ಶ್ರೀಮತಿ ಪುಷ್ಪಾವತಿ ಇವರ ಕಲ್ಪಾಮ್ರತ ಕೊಬ್ಬರಿ‌ ಎಣ್ಣೆಯನ್ನು ಲಾಂಚ್‌‌ ಮಾಡಲಾಯಿತು. ಒಕ್ಕೂಟದಿಂದ ಸಿಐಫ್ ಪಡೆದು ಉತ್ತಮ ಜೀವನನೋಪಾಯ ಚಟುವಟಿಕೆಯನ್ನು ನಡೆಸುವ ಸಂಘದ ಸದಸ್ಯೆ ವಿಜಯ ಹಾಗೂ ಉತ್ತಮ 2 ಸಂಘಗಳನ್ನು‌ ಗುರುತಿಸಿ ಒಕ್ಕೂಟದ ವತಿಯಿಂದ ಸ್ಮರಣಿಕೆ ನೀಡಲಾಯಿತು .

ಈ ಸಂದರ್ಭದಲ್ಲಿ ಸ್ವಚ್ಛತಾ ಸಿಬ್ಬಂದಿಗಳನ್ನು ಗೌರವಿಸಲಾಯಿತು. ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಬಳಿಕ‌ ಪದಗ್ರಹಣವನ್ನು ನಡೆಸಲಾಯಿತು. ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಜಯಾನಂದ್ ರವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಬೀಳ್ಕೊಟ್ಟ ಪದಾಧಿಕಾರಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಿ, ನೂತನ ಪದಾಧಿಕಾರಿಗಳಿಗೆ ಜವಾಬ್ದಾರಿಯನ್ನು ಹಸ್ತಾಂತರಿಸಲಾಯಿತು. ತರಕಾರಿಗಳು, ಅಕ್ಕಿರೊಟ್ಟಿ, ಚಕ್ಕುಲಿ, ಉಪ್ಪಿನಕಾಯಿ, ಕೊಬ್ಬರಿ‌ ಎಣ್ಣೆಯನ್ನು ಮಾರಾಟ ಮಾಡಲಾಯಿತು. ಶ್ರೀಮತಿ ಶ್ರುತಿ‌ ಸ್ವಾಗತಿಸಿ , ಧನಲಕ್ಷ್ಮಿ ಸಂಘದ ಸದಸ್ಯೆ ಗೀತಾ ಕಾರ್ಯಕ್ರಮ ನಿರೂಪಿಸಿದರು.

Related posts

ಕೊಕ್ಕಡ: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಪಿಟ್ ಇಂಡಿಯಾ ಕಾರ್ಯಕ್ರಮ

Suddi Udaya

ಫೆ.10-ಮಾರ್ಚ್ 10: ಎಸ್‌ಡಿಪಿಐ ಸದಸ್ಯತ್ವ ಅಭಿಯಾನ: ಜನಸಾಮಾನ್ಯರ ಧ್ವನಿಗೆ ಶಕ್ತಿ ನೀಡಲು ಎಸ್‌ಡಿಪಿಐ ಸೇರಿ: ನವಾಝ್ ಕಟ್ಟೆ ಕರೆ

Suddi Udaya

ನಡ: ಪಣಿಕ್ಕಲ ನಿವಾಸಿ ಧರ್ಣಪ್ಪ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಸೌತ್ ಕೆನರಾ ಪೋಟೋಗ್ರಾಫರ್ಸ್ ಅಸೋಸಿಯೇಶನ್ ದ.ಕ, ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವಾರ್ಷಿಕ ಸಭೆ

Suddi Udaya

ರಸ್ತೆಯಲ್ಲಿ ಸಿಕ್ಕಿದ ಲಕ್ಷಾಂತರ ರೂ. ಮೌಲ್ಯದ ಚಿನ್ನವನ್ನು ಹಿಂತಿರುಗಿಸಿ ಕೊಟ್ಟು ಪ್ರಾಮಾಣಿಕತೆ ಮೆರೆದ ಆಟೋ ಚಾಲಕ ಸುರೇಶ್ ಎಂ. ಬಿ

Suddi Udaya

ಉಜಿರೆ: ರಾಷ್ಟ್ರೀಯ ಸೇವಾ ಯೋಜನೆ ಗೀತೆಗಳ ಗಾಯನ ಕಾರ್ಯಾಗಾರ

Suddi Udaya
error: Content is protected !!