23.5 C
ಪುತ್ತೂರು, ಬೆಳ್ತಂಗಡಿ
June 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಪ್ರೇರಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

ನಿಡ್ಲೆ: ನಿಡ್ಲೆ ಪ್ರೇರಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ, ಇದರ 2023-2024ನೇ ವಾರ್ಷಿಕ ಮಹಾಸಭೆಯನ್ನು ನಾಗವೇಣಿ ಅಮ್ಮ ಸಭಾಂಗಣ ಬರೆಂಗಾಯದಲ್ಲಿ ಜ.30ರಂದು ನಡೆಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಪ್ರೇಮ ವಹಿಸಿಕೊಂಡಿದ್ದರು. ಕುಮಾರಿ ಹೇಮಲತಾ ಹಾಗೂ ಶ್ರೀಮತಿ ಪ್ರೇಮ ಇವರ ಪ್ರಾರ್ಥನೆಯೊಂದಿಗೆ ಸಭೆಯನ್ನು ಪ್ರಾರಂಭಿಸಲಾಯಿತು. ಒಕ್ಕೂಟದ ಮಾಜಿ ಅಧ್ಯಕ್ಷೆ ಶ್ರೀಮತಿ ಹೇಮಾವತಿ ಪ್ರಾಸ್ತಾವಿಕ ಮಾತುಗಳನ್ನು ಆಡಿ ಸಭೆಗೆ ಶುಭ ಕೋರಿದರು. ಎಂ ಬಿ ಕೆ ಭವಾನಿ ವಾರ್ಷಿಕ ವರದಿಯನ್ನು ಹಾಗೂ ಜಮಾ ಖರ್ಚು ವರದಿಯನ್ನು ಓದಿ ಸಭೆಯಲ್ಲಿ ಮಂಡಿಸಲಾಯಿತು ಹಾಗೂ ಅನುಮೋದನೆಯನ್ನು ಪಡೆಯಲಾಯಿತು. ವಲಯ ಮೇಲ್ವಿಚಾರಕಿ ವೀಣಾಶ್ರೀ ವಾರ್ಷಿಕ ಮಹಾಸಭೆಯ ಉದ್ದೇಶ ಜವಾಬ್ದಾರಿ ಹಾಗೂ ಎನ್.ಆರ್.ಎಲ್.ಎಮ್ ನಿಂದ ಸದಸ್ಯರಿಗೆ ಸಿಗುವ ಸಾಲ ಸೌಲಭ್ಯಗಳ ಬಗ್ಗೆ ಉತ್ತಮ ಮಾಹಿತಿ ನೀಡಿದರು. ಉತ್ತಮ ಸಂಘ, ಸಿಐಎಫ್ ಪಡೆದು ಸ್ವಉದ್ಯೋಗ ಮಾಡುತ್ತಿರುವ ಸದಸ್ಯೆಗೆ ಉತ್ತಮ ಸಾಧಕಿ. ವಿಕಲ ಚೇತನರ ಸಂಘದ ಸದಸ್ಯ ಉತ್ತಮ ಭಾಗವಹಿಸುವಿಕೆ. ಇವರನ್ನು ಗುರುತಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಪದಾಧಿಕಾರಿಗಳ ಆಯ್ಕೆ ಮಾಡಿ ಪದಗ್ರಹಣವನ್ನು ಮಾಡಲಾಯಿತು. ಮಾಜಿ ಸದಸ್ಯರಿಗೆ ಸ್ಮರಣಿಕೆ ನೀಡಲಾಯಿತು. ಶ್ರೀಮತಿ ಹೇಮಾವತಿ ನಿರೂಪಿಸಿ, ಕೃಷಿ ಸಖಿ ಸುಮನ ಸ್ವಾಗತಿಸಿ, ಸುಜಾತಾ ಧನ್ಯವಾದವಿತ್ತರು.

Related posts

ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ‘ಕೈಗಾರಿಕಾ ಕೇಂದ್ರಗಳ ಭೇಟಿ

Suddi Udaya

ಜೆಇಇ ಅಡ್ವಾನ್ಸ್ ನಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ, ರಾಷ್ಟ್ರ ಮಟ್ಟದಲ್ಲಿ 45 ನೆಯ ರ‍್ಯಾಂಕ್ ಪಡೆದ ವೀರಭದ್ರೇಶ್ ಕಟಗೇರಿ: ಗಗನ ಕುಸುಮವೆನಿಸಿದ ಐಐಟಿ ಪ್ರವೇಶಾತಿ ಎಕ್ಸೆಲ್ ನಿಂದ ಸುಲಭ ಸಾಧ್ಯ : ರಾಷ್ಟ್ರದ ಅತ್ಯಂತ ಕಠಿಣ ಪರೀಕ್ಷೆ ಎಕ್ಸೆಲ್ ವಿದ್ಯಾರ್ಥಿಗಳಿಗೆ ಸಲೀಸು

Suddi Udaya

ಉಜಿರೆ : ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ ಒಂದು ದಿನದ ಪುನಶ್ಚೇತನ ಶಿಬಿರ

Suddi Udaya

ರಾಷ್ಟ್ರೀಯ ಟಾರ್ಗೆಟ್ ಬಾಲ್ ಫೆಡರೇಶನ್ ಕಪ್ ಪಂದ್ಯಾಟ: ರಾಷ್ಟ್ರಮಟ್ಟಕ್ಕೆ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನ ವಿದ್ಯಾರ್ಥಿ ಸಿದ್ದಾರ್ಥ್ ಎಂ. ಸಿ ಆಯ್ಕೆ

Suddi Udaya

ಮಚ್ಚಿನ: ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ: ಅಪಾರ ನಷ್ಟ

Suddi Udaya

ಕಾಂಗ್ರೆಸ್ ಸರಕಾರ ರಚನೆ ಹಿನ್ನೆಲೆ: ಕೊಕ್ಕಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮೋತ್ಸವ

Suddi Udaya
error: Content is protected !!