23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಪ್ರೇರಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

ನಿಡ್ಲೆ: ನಿಡ್ಲೆ ಪ್ರೇರಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ, ಇದರ 2023-2024ನೇ ವಾರ್ಷಿಕ ಮಹಾಸಭೆಯನ್ನು ನಾಗವೇಣಿ ಅಮ್ಮ ಸಭಾಂಗಣ ಬರೆಂಗಾಯದಲ್ಲಿ ಜ.30ರಂದು ನಡೆಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಪ್ರೇಮ ವಹಿಸಿಕೊಂಡಿದ್ದರು. ಕುಮಾರಿ ಹೇಮಲತಾ ಹಾಗೂ ಶ್ರೀಮತಿ ಪ್ರೇಮ ಇವರ ಪ್ರಾರ್ಥನೆಯೊಂದಿಗೆ ಸಭೆಯನ್ನು ಪ್ರಾರಂಭಿಸಲಾಯಿತು. ಒಕ್ಕೂಟದ ಮಾಜಿ ಅಧ್ಯಕ್ಷೆ ಶ್ರೀಮತಿ ಹೇಮಾವತಿ ಪ್ರಾಸ್ತಾವಿಕ ಮಾತುಗಳನ್ನು ಆಡಿ ಸಭೆಗೆ ಶುಭ ಕೋರಿದರು. ಎಂ ಬಿ ಕೆ ಭವಾನಿ ವಾರ್ಷಿಕ ವರದಿಯನ್ನು ಹಾಗೂ ಜಮಾ ಖರ್ಚು ವರದಿಯನ್ನು ಓದಿ ಸಭೆಯಲ್ಲಿ ಮಂಡಿಸಲಾಯಿತು ಹಾಗೂ ಅನುಮೋದನೆಯನ್ನು ಪಡೆಯಲಾಯಿತು. ವಲಯ ಮೇಲ್ವಿಚಾರಕಿ ವೀಣಾಶ್ರೀ ವಾರ್ಷಿಕ ಮಹಾಸಭೆಯ ಉದ್ದೇಶ ಜವಾಬ್ದಾರಿ ಹಾಗೂ ಎನ್.ಆರ್.ಎಲ್.ಎಮ್ ನಿಂದ ಸದಸ್ಯರಿಗೆ ಸಿಗುವ ಸಾಲ ಸೌಲಭ್ಯಗಳ ಬಗ್ಗೆ ಉತ್ತಮ ಮಾಹಿತಿ ನೀಡಿದರು. ಉತ್ತಮ ಸಂಘ, ಸಿಐಎಫ್ ಪಡೆದು ಸ್ವಉದ್ಯೋಗ ಮಾಡುತ್ತಿರುವ ಸದಸ್ಯೆಗೆ ಉತ್ತಮ ಸಾಧಕಿ. ವಿಕಲ ಚೇತನರ ಸಂಘದ ಸದಸ್ಯ ಉತ್ತಮ ಭಾಗವಹಿಸುವಿಕೆ. ಇವರನ್ನು ಗುರುತಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಪದಾಧಿಕಾರಿಗಳ ಆಯ್ಕೆ ಮಾಡಿ ಪದಗ್ರಹಣವನ್ನು ಮಾಡಲಾಯಿತು. ಮಾಜಿ ಸದಸ್ಯರಿಗೆ ಸ್ಮರಣಿಕೆ ನೀಡಲಾಯಿತು. ಶ್ರೀಮತಿ ಹೇಮಾವತಿ ನಿರೂಪಿಸಿ, ಕೃಷಿ ಸಖಿ ಸುಮನ ಸ್ವಾಗತಿಸಿ, ಸುಜಾತಾ ಧನ್ಯವಾದವಿತ್ತರು.

Related posts

ಉಜಿರೆ ಗ್ರಾ.ಪಂ. ಗೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

Suddi Udaya

ರುಡ್ ಸೆಟ್ ಸಂಸ್ಥೆಯಲ್ಲಿ ಗೃಹೋಪಯೋಗಿ ವಿದ್ಯುತ್‌ ಉಪಕರಣ ಸೇವಾ ಉದ್ಯಮಿ ತರಬೇತಿಯ ಸಮಾರೋಪ

Suddi Udaya

ಉಜಿರೆ ಎಸ್. ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಡಿ.ಶ್ರೇಯಸ್ ಕುಮಾರ್ ಭೇಟಿ

Suddi Udaya

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಹೋಮಕುಂಡದ ಭೂಮಿ ಪೂಜೆ

Suddi Udaya

ಅವಳಿ ಸಹೋದರಿಯರ ವಿಶೇಷ ಸಾಧನೆ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಮಾನ ಅಂಕ

Suddi Udaya

ಧರ್ಮಸ್ಥಳ: ಜೋಡುಸ್ಥಾನ ನಿವಾಸಿ ಗೋವಿಂದ ಗೌಡರ ಪುತ್ರ ಪ್ರಥಮ್ ನಿಧನ

Suddi Udaya
error: Content is protected !!