25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಪ್ರೇರಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

ನಿಡ್ಲೆ: ನಿಡ್ಲೆ ಪ್ರೇರಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ, ಇದರ 2023-2024ನೇ ವಾರ್ಷಿಕ ಮಹಾಸಭೆಯನ್ನು ನಾಗವೇಣಿ ಅಮ್ಮ ಸಭಾಂಗಣ ಬರೆಂಗಾಯದಲ್ಲಿ ಜ.30ರಂದು ನಡೆಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಪ್ರೇಮ ವಹಿಸಿಕೊಂಡಿದ್ದರು. ಕುಮಾರಿ ಹೇಮಲತಾ ಹಾಗೂ ಶ್ರೀಮತಿ ಪ್ರೇಮ ಇವರ ಪ್ರಾರ್ಥನೆಯೊಂದಿಗೆ ಸಭೆಯನ್ನು ಪ್ರಾರಂಭಿಸಲಾಯಿತು. ಒಕ್ಕೂಟದ ಮಾಜಿ ಅಧ್ಯಕ್ಷೆ ಶ್ರೀಮತಿ ಹೇಮಾವತಿ ಪ್ರಾಸ್ತಾವಿಕ ಮಾತುಗಳನ್ನು ಆಡಿ ಸಭೆಗೆ ಶುಭ ಕೋರಿದರು. ಎಂ ಬಿ ಕೆ ಭವಾನಿ ವಾರ್ಷಿಕ ವರದಿಯನ್ನು ಹಾಗೂ ಜಮಾ ಖರ್ಚು ವರದಿಯನ್ನು ಓದಿ ಸಭೆಯಲ್ಲಿ ಮಂಡಿಸಲಾಯಿತು ಹಾಗೂ ಅನುಮೋದನೆಯನ್ನು ಪಡೆಯಲಾಯಿತು. ವಲಯ ಮೇಲ್ವಿಚಾರಕಿ ವೀಣಾಶ್ರೀ ವಾರ್ಷಿಕ ಮಹಾಸಭೆಯ ಉದ್ದೇಶ ಜವಾಬ್ದಾರಿ ಹಾಗೂ ಎನ್.ಆರ್.ಎಲ್.ಎಮ್ ನಿಂದ ಸದಸ್ಯರಿಗೆ ಸಿಗುವ ಸಾಲ ಸೌಲಭ್ಯಗಳ ಬಗ್ಗೆ ಉತ್ತಮ ಮಾಹಿತಿ ನೀಡಿದರು. ಉತ್ತಮ ಸಂಘ, ಸಿಐಎಫ್ ಪಡೆದು ಸ್ವಉದ್ಯೋಗ ಮಾಡುತ್ತಿರುವ ಸದಸ್ಯೆಗೆ ಉತ್ತಮ ಸಾಧಕಿ. ವಿಕಲ ಚೇತನರ ಸಂಘದ ಸದಸ್ಯ ಉತ್ತಮ ಭಾಗವಹಿಸುವಿಕೆ. ಇವರನ್ನು ಗುರುತಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಪದಾಧಿಕಾರಿಗಳ ಆಯ್ಕೆ ಮಾಡಿ ಪದಗ್ರಹಣವನ್ನು ಮಾಡಲಾಯಿತು. ಮಾಜಿ ಸದಸ್ಯರಿಗೆ ಸ್ಮರಣಿಕೆ ನೀಡಲಾಯಿತು. ಶ್ರೀಮತಿ ಹೇಮಾವತಿ ನಿರೂಪಿಸಿ, ಕೃಷಿ ಸಖಿ ಸುಮನ ಸ್ವಾಗತಿಸಿ, ಸುಜಾತಾ ಧನ್ಯವಾದವಿತ್ತರು.

Related posts

ಮೊಗ್ರು: ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನ ವತಿಯಿಂದ ಅಂಗನವಾಡಿ ಕೇಂದ್ರಕ್ಕೆ ಗೋದ್ರೇಜ್ ಮತ್ತು ಕುರ್ಚಿ ಕೊಡುಗೆ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರೀದಮಿಕ್ ಯೋಗಾಸನದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಬಲ್ಯೋಟ್ಟು ಶ್ರೀ ವಿಖ್ಯಾತಾನಂದ ಸ್ವಾಮೀಜಿ

Suddi Udaya

ಉಜಿರೆ ವರ್ತಕರಿಂದ ಆಟೋ ಚಾಲಕ ರತ್ನಾಕರ ಗೌಡರ ಕಷ್ಟಕ್ಕೆ ಸಹಾಯ ಹಸ್ತ

Suddi Udaya

ಕೆಪಿಎಸ್ ಪುಂಜಾಲಕಟ್ಟೆ: ಶಾಲಾ ಪ್ರಾರಂಭೋತ್ಸವ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮಚಂದ್ರನ ಪ್ರತಿಷ್ಠಾಪನೆಗೆ ಮೂಹೂರ್ತ ನಿಗದಿ: ಜ.21ರಿಂದ 3 ದಿನ ಕಾರ್ಯಕ್ರಮ: ಪ್ರಧಾನಿ ನರೇಂದ್ರ ಮೋದಿ ಸಹಿತ ಅನೇಕ ನಾಯಕರು ಭಾಗಿ

Suddi Udaya
error: Content is protected !!