September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಪ್ರೇರಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

ನಿಡ್ಲೆ: ನಿಡ್ಲೆ ಪ್ರೇರಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ, ಇದರ 2023-2024ನೇ ವಾರ್ಷಿಕ ಮಹಾಸಭೆಯನ್ನು ನಾಗವೇಣಿ ಅಮ್ಮ ಸಭಾಂಗಣ ಬರೆಂಗಾಯದಲ್ಲಿ ಜ.30ರಂದು ನಡೆಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಪ್ರೇಮ ವಹಿಸಿಕೊಂಡಿದ್ದರು. ಕುಮಾರಿ ಹೇಮಲತಾ ಹಾಗೂ ಶ್ರೀಮತಿ ಪ್ರೇಮ ಇವರ ಪ್ರಾರ್ಥನೆಯೊಂದಿಗೆ ಸಭೆಯನ್ನು ಪ್ರಾರಂಭಿಸಲಾಯಿತು. ಒಕ್ಕೂಟದ ಮಾಜಿ ಅಧ್ಯಕ್ಷೆ ಶ್ರೀಮತಿ ಹೇಮಾವತಿ ಪ್ರಾಸ್ತಾವಿಕ ಮಾತುಗಳನ್ನು ಆಡಿ ಸಭೆಗೆ ಶುಭ ಕೋರಿದರು. ಎಂ ಬಿ ಕೆ ಭವಾನಿ ವಾರ್ಷಿಕ ವರದಿಯನ್ನು ಹಾಗೂ ಜಮಾ ಖರ್ಚು ವರದಿಯನ್ನು ಓದಿ ಸಭೆಯಲ್ಲಿ ಮಂಡಿಸಲಾಯಿತು ಹಾಗೂ ಅನುಮೋದನೆಯನ್ನು ಪಡೆಯಲಾಯಿತು. ವಲಯ ಮೇಲ್ವಿಚಾರಕಿ ವೀಣಾಶ್ರೀ ವಾರ್ಷಿಕ ಮಹಾಸಭೆಯ ಉದ್ದೇಶ ಜವಾಬ್ದಾರಿ ಹಾಗೂ ಎನ್.ಆರ್.ಎಲ್.ಎಮ್ ನಿಂದ ಸದಸ್ಯರಿಗೆ ಸಿಗುವ ಸಾಲ ಸೌಲಭ್ಯಗಳ ಬಗ್ಗೆ ಉತ್ತಮ ಮಾಹಿತಿ ನೀಡಿದರು. ಉತ್ತಮ ಸಂಘ, ಸಿಐಎಫ್ ಪಡೆದು ಸ್ವಉದ್ಯೋಗ ಮಾಡುತ್ತಿರುವ ಸದಸ್ಯೆಗೆ ಉತ್ತಮ ಸಾಧಕಿ. ವಿಕಲ ಚೇತನರ ಸಂಘದ ಸದಸ್ಯ ಉತ್ತಮ ಭಾಗವಹಿಸುವಿಕೆ. ಇವರನ್ನು ಗುರುತಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಪದಾಧಿಕಾರಿಗಳ ಆಯ್ಕೆ ಮಾಡಿ ಪದಗ್ರಹಣವನ್ನು ಮಾಡಲಾಯಿತು. ಮಾಜಿ ಸದಸ್ಯರಿಗೆ ಸ್ಮರಣಿಕೆ ನೀಡಲಾಯಿತು. ಶ್ರೀಮತಿ ಹೇಮಾವತಿ ನಿರೂಪಿಸಿ, ಕೃಷಿ ಸಖಿ ಸುಮನ ಸ್ವಾಗತಿಸಿ, ಸುಜಾತಾ ಧನ್ಯವಾದವಿತ್ತರು.

Related posts

ಬದನಾಜೆ ಸ.ಉ.ಪ್ರಾ. ಶಾಲೆಯಲ್ಲಿ ವನಮಹೋತ್ಸವ

Suddi Udaya

ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜಿನ ಎನ್ನೆಸ್ಸೆಸ್ ವತಿಯಿಂದ ಪೆರಿಂಜೆ ಗ್ರಾಮ ಸಮೀಕ್ಷೆ

Suddi Udaya

ತುಳುನಾಡು ಒಕ್ಕೂಟ ಸಂಘಟನೆಯ ನೇತೃತ್ವದಲ್ಲಿ 5ನೇ ವರ್ಷದ ‘ಚೆನ್ನೆಮಣೆ ಗೊಬ್ಬು ಪಂಥೋ’ ಕಾರ್ಯಕ್ರಮ

Suddi Udaya

ಡಿಸಿ ಮನ್ನಾ ಜಮೀನು ಹಂಚಿಕೆ,: ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ ಹಾಗೂ ಸಚಿವ ಯು.ಟಿ ಖಾದರ್ ರವರನ್ನು ಭೇಟಿಯಾದ ದಲಿತ ನಾಯಕರು

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀರಾಮ ಪ್ರೌಢ ಶಾಲೆಯ ಬಾಲಕ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ನಾವೂರು ದುರ್ಗಾ ಮೆಲೋಡೀಸ್ ಫೇಸ್ಬುಕ್, ಲೈವ್ ಪೇಜ್ ನೂರರ ಸಂಭ್ರಮ

Suddi Udaya
error: Content is protected !!