February 28, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಲಂತಿಲ ಗ್ರಾ.ಪಂ. ನಲ್ಲಿ ವಿಕಲ ಚೇತನ ವಿಶೇಷ ಗ್ರಾಮ ಸಭೆ

ಇಲಂತಿಲ: 2024 -25ನೇ ಸಾಲಿನ ವಿಕಲ ಚೇತನ ವಿಶೇಷ ಗ್ರಾಮ ಸಭೆಯು ಸರ್ಕಾರದ ಆದೇಶದಂತೆ ಜ. 30 ರಂದು ಇಲಂತಿಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ಅಧ್ಯಕ್ಷ ತಿಮ್ಮಪ್ಪ ಗೌಡ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಪಂಚಾಯತ್ ಅಧ್ಯಕ್ಷರು ಹಾಗೂ ವೇದಿಕೆಯಲ್ಲಿರುವ ಎಲ್ಲಾ ಗಣ್ಯರುಗಳ ಸಮ್ಮುಖದಲ್ಲಿ ಸಭೆಯನ್ನು ದೀಪ ಬೆಳಗಿಸುವುದರ ಮೂಲಕ ಉದ್ಗಾಟಿಸಲಾಯಿತು. 2024-25ನೇ ಸಾಲಿನ ವಿಕಲಚೇತನರ ವಾರ್ಷಿಕ ವರದಿಯನ್ನು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ರಾಧಿಕಾ ವಾಚಿಸಿದರು.


ವಿಕಲಚೇತನರಿಗೆ ವಿಕಲಚೇತನ ಇಲಾಖೆ ಹಾಗೂ ಎಲ್ಲಾ ಇಲಾಖೆಗಳಿಂದ ಸಿಗುವ ಸರಕಾರದ ಸೌಲಭ್ಯದ ಸಮಗ್ರ ಮಾಹಿತಿಯನ್ನು ತಾಲೂಕು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತ ಜೋನ್‌ ಬ್ಯಾಪ್ಟಿಸ್ಟ್ ಡಿಸೋಜ‌ ನೀಡಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಪಂಚಾಯತಿಯಿಂದ ವಿಕಲಚೇತನರಿಗೆ ಸಿಗುವ ಸೌಲಭ್ಯಗಳ ಮಾಹಿತಿ ನೀಡಿದರು. ಪ್ರಸಕ್ತ ಸಾಲಿನಲ್ಲಿ ಐದು ಜನ ವಿಕಲಚೇತನರಿಗೆ ವೈದ್ಯಕೀಯ ವೆಚ್ಚದ ಸಹಾಯಧನದ ಚೆಕ್ಕನ್ನು ಹಸ್ತಂತರಿಸಲಾಯಿತು,


ಎರಡು ಜನ ವಿಕಲಚೇತನರಿಗೆ ಕುಡಿಯುವ ನೀರಿನ ಟ್ಯಾಂಕ್ ಖರೀದಿಗೆ ಸಹಾಯಧನದ ಚೆಕ್ ವಿತರಿಸಲಾಯಿತು ಹಾಗೂ ಒಬ್ಬರಿಗೆ ವಿಶೇಷ ಶೌಚಾಲಯ ನಿರ್ಮಾಣಕ್ಕೆ ಸಹಾಯಧನದ ಚೆಕ್‌ ಹಸ್ತಾಂತರಿಸಲಾಯಿತು.


ಪಂಚಾಯತ್ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿ ಹೆಚ್ ಒ ಶ್ರೀಮತಿ ಮಧುಶ್ರೀ ಇವರು ವಿಕಲಚೇತನರಿಗೆ ಹಾಗೂ ಎಂಡೋಪೀಡಿತರಿಗೆ ಆರೋಗ್ಯ ಇಲಾಖೆಯಲ್ಲಿ ಇರುವ ಸೇವೆಯ ಬಗ್ಗೆ ಮಾಹಿತಿಯನ್ನು ನೀಡಿದರು.


ಸಭೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಆರೋಗ್ಯ ಇಲಾಖೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ನಡೆಸಲಾಯಿತು.
ಪಂಚಾಯತ್ ಕಾರ್ಯದರ್ಶಿ ಸ್ವಾಗತಿಸಿ, ಧನ್ಯವಾದ ಸಲ್ಲಿಸಿದರು.

Related posts

ಕಲ್ಮಂಜ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಜಾತಿ ನಿಂದನೆ, ಹಲ್ಲೆ ಪ್ರಕರಣ : ಆರೋಪಿ ಕರುಣಾಕರ ಗೌಡನಿಗೆ ನ್ಯಾಯಾಂಗ ಬಂಧನ

Suddi Udaya

ಬೆಳ್ತಂಗಡಿ: ಸವಿತಾ ಸಮಾಜದ ವತಿಯಿಂದ ಪೂವಪ್ಪ ಭಂಡಾರಿ ಹಾಗೂ ಮೋಹನ್ ಭಂಡಾರಿ ರವರಿಗೆ ಸನ್ಮಾನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಒರಿಂಟೇಷನ್ ಕಾರ್ಯಕ್ರಮ

Suddi Udaya

ಶಿಶಿಲ: ನಾಗನಡ್ಕದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ: ಆಸ್ಪತ್ರೆಗೆ ದಾಖಲಿಸಿದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಪ್ರಕೃತಿ ವಿಸ್ಮಯ: ಒಂದೇ ಗೊನೆಯಲ್ಲಿ ಎರಡು ಬಾಳೆ ಹೂ(ಪೂಂಬೆ)

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ