23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಲಂತಿಲ ಗ್ರಾ.ಪಂ. ನಲ್ಲಿ ವಿಕಲ ಚೇತನ ವಿಶೇಷ ಗ್ರಾಮ ಸಭೆ

ಇಲಂತಿಲ: 2024 -25ನೇ ಸಾಲಿನ ವಿಕಲ ಚೇತನ ವಿಶೇಷ ಗ್ರಾಮ ಸಭೆಯು ಸರ್ಕಾರದ ಆದೇಶದಂತೆ ಜ. 30 ರಂದು ಇಲಂತಿಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ಅಧ್ಯಕ್ಷ ತಿಮ್ಮಪ್ಪ ಗೌಡ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಪಂಚಾಯತ್ ಅಧ್ಯಕ್ಷರು ಹಾಗೂ ವೇದಿಕೆಯಲ್ಲಿರುವ ಎಲ್ಲಾ ಗಣ್ಯರುಗಳ ಸಮ್ಮುಖದಲ್ಲಿ ಸಭೆಯನ್ನು ದೀಪ ಬೆಳಗಿಸುವುದರ ಮೂಲಕ ಉದ್ಗಾಟಿಸಲಾಯಿತು. 2024-25ನೇ ಸಾಲಿನ ವಿಕಲಚೇತನರ ವಾರ್ಷಿಕ ವರದಿಯನ್ನು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ರಾಧಿಕಾ ವಾಚಿಸಿದರು.


ವಿಕಲಚೇತನರಿಗೆ ವಿಕಲಚೇತನ ಇಲಾಖೆ ಹಾಗೂ ಎಲ್ಲಾ ಇಲಾಖೆಗಳಿಂದ ಸಿಗುವ ಸರಕಾರದ ಸೌಲಭ್ಯದ ಸಮಗ್ರ ಮಾಹಿತಿಯನ್ನು ತಾಲೂಕು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತ ಜೋನ್‌ ಬ್ಯಾಪ್ಟಿಸ್ಟ್ ಡಿಸೋಜ‌ ನೀಡಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಪಂಚಾಯತಿಯಿಂದ ವಿಕಲಚೇತನರಿಗೆ ಸಿಗುವ ಸೌಲಭ್ಯಗಳ ಮಾಹಿತಿ ನೀಡಿದರು. ಪ್ರಸಕ್ತ ಸಾಲಿನಲ್ಲಿ ಐದು ಜನ ವಿಕಲಚೇತನರಿಗೆ ವೈದ್ಯಕೀಯ ವೆಚ್ಚದ ಸಹಾಯಧನದ ಚೆಕ್ಕನ್ನು ಹಸ್ತಂತರಿಸಲಾಯಿತು,


ಎರಡು ಜನ ವಿಕಲಚೇತನರಿಗೆ ಕುಡಿಯುವ ನೀರಿನ ಟ್ಯಾಂಕ್ ಖರೀದಿಗೆ ಸಹಾಯಧನದ ಚೆಕ್ ವಿತರಿಸಲಾಯಿತು ಹಾಗೂ ಒಬ್ಬರಿಗೆ ವಿಶೇಷ ಶೌಚಾಲಯ ನಿರ್ಮಾಣಕ್ಕೆ ಸಹಾಯಧನದ ಚೆಕ್‌ ಹಸ್ತಾಂತರಿಸಲಾಯಿತು.


ಪಂಚಾಯತ್ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿ ಹೆಚ್ ಒ ಶ್ರೀಮತಿ ಮಧುಶ್ರೀ ಇವರು ವಿಕಲಚೇತನರಿಗೆ ಹಾಗೂ ಎಂಡೋಪೀಡಿತರಿಗೆ ಆರೋಗ್ಯ ಇಲಾಖೆಯಲ್ಲಿ ಇರುವ ಸೇವೆಯ ಬಗ್ಗೆ ಮಾಹಿತಿಯನ್ನು ನೀಡಿದರು.


ಸಭೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಆರೋಗ್ಯ ಇಲಾಖೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ನಡೆಸಲಾಯಿತು.
ಪಂಚಾಯತ್ ಕಾರ್ಯದರ್ಶಿ ಸ್ವಾಗತಿಸಿ, ಧನ್ಯವಾದ ಸಲ್ಲಿಸಿದರು.

Related posts

ಪಡಂಗಡಿ: ಶ್ರೀ ಕ್ಷೇತ್ರ ಒಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಪತ್ತೇದಾರಿ ಕಾದಂಬರಿ ” ವಿಷ ವರ್ತುಲ” ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಸಾವ್ಯ ಬೆಸ್ಟ್ ಫೌಂಡೇಶನ್ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya

ನೆಟ್ ಬಾಲ್ ಸೀನಿಯರ್ ನ್ಯಾಷನಲ್ ಚಾಂಪಿಯನ್ ಶಿಪ್ ಪಂದ್ಯಾಟ: ಎಸ್ ಡಿ ಎಂ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ

Suddi Udaya

ಡೆಂಗ್ಯೂ ಜ್ವರದಿಂದ ಬಳಲಿ ವಿಶ್ರಾಂತಿಯಲ್ಲಿದ್ದ ಬದ್ಯಾರು ನಿವಾಸಿ ದಿವಾಕರ ಶೆಟ್ಟಿ ಅಸ್ವಸ್ಥಗೊಂಡು ನಿಧನ

Suddi Udaya

ಕಾಶಿಪಟ್ಣ: ಮಜಲಡ್ಡ ನಿವಾಸಿ ಮಣ್ಯಪ್ಪ ಪೂಜಾರಿ ನಿಧನ

Suddi Udaya
error: Content is protected !!