24.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

ಕಲ್ಮಂಜ : ಕಲ್ಮಂಜ ಪ್ರೌಢಶಾಲೆಯ ಹತ್ತನೆಯ ತರಗತಿಯ ಪೋಷಕರ ಸಭೆಯಲ್ಲಿ ವೇಣೂರು ಪ್ರೌಢಶಾಲೆಯ ಕನ್ನಡ ಅಧ್ಯಾಪಕರು ಹಾಗೂ ಸಂಪನ್ಮೂಲ ವ್ಯಕ್ತಿಗಳಾದ ರವೀಂದ್ರರವರು ಮಾತನಾಡುತ್ತಾ “ಆಸಕ್ತಿ ಮತ್ತು ಆತ್ಮವಿಶ್ವಾಸವಿದ್ದರೆ ಜಗತ್ತನ್ನೇ ಗೆಲ್ಲಬಹುದು” ಹಾಗೂ ಹಲವಾರು ಉದಾಹರಣೆಗಳ ಮೂಲಕ ಸಾಧಕರ ಕತೆಗಳನ್ನು ಹೇಳಿ ಆಸಕ್ತಿಯಿಂದ ಹಾಗೂ ಆತ್ಮವಿಶ್ವಾಸದಿಂದ ಪ್ರಯತ್ನಿಸಿ ಮಕ್ಕಳೆˌಖಂಡಿತಾ ನೀವು ಸಾಧಿಸಬಲ್ಲರಿ.ಹಲವಾರು ಕೊರತೆಗಳಿದ್ದರೂ ಲೆಕ್ಕಿಸದೆ ತನ್ನ ಪ್ರಯತ್ನದ ಮೂಲಕ ಸಾಧನೆ ಮಾಡಿದಂತಹ ವ್ಯಕ್ತಿಗಳು ನಮ್ಮ ಕಣ್ಣೆದುರೇ ಇರುವಾಗ ಎಲ್ಲಾ ರೀತೀಯ ಸೌಲಭ್ಯ ಹೊಂದಿರುವ ನೀವು ಯಶಸ್ಸನ್ನು ಪಡೆಯುವುದು ಕಷ್ಟವಲ್ಲ ಆದರೆ ನಿರಂತರ ಪ್ರಯತ್ನ ಅಗತ್ಯ ಎಂದು ಕಿವಿಮಾತು ಹೇಳಿದರು.


ಶಿಕ್ಷಕಿ ಸವಿತಾರವರು ನಿರೂಪಿಸಿದ ಕಾರ್ಯಕ್ರಮದಲ್ಲಿ ಸಾವಿತ್ರಿ ಸಿ ಡಿ ಸ್ವಾಗತಿಸಿ ಮುಖ್ಯ ಶಿಕ್ಷಕಿ ಪೂರ್ಣಿಮಾರವರು ಪ್ರಸ್ತಾವಿಸಿದರು.

ಈ ಸಂದರ್ಭದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು. ಎಸ್ ಡಿ ಎಂ ಸಿ ಕಾರ್ಯಾಧ್ಯಕ್ಷ ಮಂಜುನಾಥ ಶೆಟ್ಟರು ಉಪಸ್ಥಿತರಿದ್ದರು. ಶಿಕ್ಷಕಿಯರಾದ ಮಾಲಿನಿ ಹೆಗಡೆ ಹೇಮಲತಾ ˌಪ್ರೇಮಲತಾ ಸುಧೀಂದ್ರ ಹಾಗೂ ಪ್ರೇಮಾ ಯಚ್ ವಿ ಸಹಕರಿಸಿದರು

Related posts

ಕೊಕ್ಕಡ ಗ್ರಾ.ಪಂ. ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಉಜಿರೆ 45ನೇ ವರ್ಷದ ಶಾರದಾ ಪೂಜಾ ಸಮಿತಿ ನೂತನ ಸಮಿತಿ ರಚನೆ

Suddi Udaya

ಸುಲ್ಕೇರಿಮೊಗ್ರುವಿನಲ್ಲಿ ಮನೆಗೆ ಗುಡ್ಡ ಕುಸಿತ, ಮನೆ ಭಾಗಶಃ ಹಾನಿ, ಮನೆಯೊಳಗೆ ತುಂಬಿದ ಮಣ್ಣಿನ ರಾಶಿ

Suddi Udaya

ಹರೀಶ್ ಪೂಂಜ ಗೆಲುವು: ಮುಗೇರಡ್ಕದಲ್ಲಿ ಸಂಭ್ರಮಾಚರಣೆ

Suddi Udaya

ಕಲ್ಮಂಜ ಹಾಗೂ ಮುಂಡಾಜೆ ಗ್ರಾಮದಲ್ಲಿ ಗುಡ್ಡ ಕುಸಿದು ರಸ್ತೆಗೆ ಹಾನಿ

Suddi Udaya

ಮಾ.9: ಬಜಿರೆಯಲ್ಲಿ 60 ಕೆ.ಜಿ ವಿಭಾಗದ ಪುರುಷರ ಹೊನಲು ಬೆಳಕಿನ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಯಂಗ್ ಬಾಯ್ಸ್ ಟ್ರೋಫಿ

Suddi Udaya
error: Content is protected !!