23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

ಕಲ್ಮಂಜ : ಕಲ್ಮಂಜ ಪ್ರೌಢಶಾಲೆಯ ಹತ್ತನೆಯ ತರಗತಿಯ ಪೋಷಕರ ಸಭೆಯಲ್ಲಿ ವೇಣೂರು ಪ್ರೌಢಶಾಲೆಯ ಕನ್ನಡ ಅಧ್ಯಾಪಕರು ಹಾಗೂ ಸಂಪನ್ಮೂಲ ವ್ಯಕ್ತಿಗಳಾದ ರವೀಂದ್ರರವರು ಮಾತನಾಡುತ್ತಾ “ಆಸಕ್ತಿ ಮತ್ತು ಆತ್ಮವಿಶ್ವಾಸವಿದ್ದರೆ ಜಗತ್ತನ್ನೇ ಗೆಲ್ಲಬಹುದು” ಹಾಗೂ ಹಲವಾರು ಉದಾಹರಣೆಗಳ ಮೂಲಕ ಸಾಧಕರ ಕತೆಗಳನ್ನು ಹೇಳಿ ಆಸಕ್ತಿಯಿಂದ ಹಾಗೂ ಆತ್ಮವಿಶ್ವಾಸದಿಂದ ಪ್ರಯತ್ನಿಸಿ ಮಕ್ಕಳೆˌಖಂಡಿತಾ ನೀವು ಸಾಧಿಸಬಲ್ಲರಿ.ಹಲವಾರು ಕೊರತೆಗಳಿದ್ದರೂ ಲೆಕ್ಕಿಸದೆ ತನ್ನ ಪ್ರಯತ್ನದ ಮೂಲಕ ಸಾಧನೆ ಮಾಡಿದಂತಹ ವ್ಯಕ್ತಿಗಳು ನಮ್ಮ ಕಣ್ಣೆದುರೇ ಇರುವಾಗ ಎಲ್ಲಾ ರೀತೀಯ ಸೌಲಭ್ಯ ಹೊಂದಿರುವ ನೀವು ಯಶಸ್ಸನ್ನು ಪಡೆಯುವುದು ಕಷ್ಟವಲ್ಲ ಆದರೆ ನಿರಂತರ ಪ್ರಯತ್ನ ಅಗತ್ಯ ಎಂದು ಕಿವಿಮಾತು ಹೇಳಿದರು.


ಶಿಕ್ಷಕಿ ಸವಿತಾರವರು ನಿರೂಪಿಸಿದ ಕಾರ್ಯಕ್ರಮದಲ್ಲಿ ಸಾವಿತ್ರಿ ಸಿ ಡಿ ಸ್ವಾಗತಿಸಿ ಮುಖ್ಯ ಶಿಕ್ಷಕಿ ಪೂರ್ಣಿಮಾರವರು ಪ್ರಸ್ತಾವಿಸಿದರು.

ಈ ಸಂದರ್ಭದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು. ಎಸ್ ಡಿ ಎಂ ಸಿ ಕಾರ್ಯಾಧ್ಯಕ್ಷ ಮಂಜುನಾಥ ಶೆಟ್ಟರು ಉಪಸ್ಥಿತರಿದ್ದರು. ಶಿಕ್ಷಕಿಯರಾದ ಮಾಲಿನಿ ಹೆಗಡೆ ಹೇಮಲತಾ ˌಪ್ರೇಮಲತಾ ಸುಧೀಂದ್ರ ಹಾಗೂ ಪ್ರೇಮಾ ಯಚ್ ವಿ ಸಹಕರಿಸಿದರು

Related posts

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮತ್ತು ಗೆಳೆಯರ ಬಳಗ ಕಾಪಿನಡ್ಕ ರಜತ ಮಹೋತ್ಸವ ಸಂಭ್ರಮ

Suddi Udaya

ದ್ವಿಚಕ್ರ ವಾಹನದಿಂದ ರಸ್ತೆಗೆ ಎಸೆಯಲ್ಪಟ್ಟು ಮಹಿಳೆಗೆ ಗಂಭೀರ ಗಾಯ: ಮಂಗಳೂರು ಆಸ್ಪತ್ರೆಗೆ ದಾಖಲು

Suddi Udaya

ನಿಡ್ಲೆ : ಕೊಡಂಗೆಯಲ್ಲಿ ಗುಡ್ಡ ಕುಸಿತ: ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತುರ್ತು ಕಾರ್ಯಾಚರಣೆ

Suddi Udaya

ರಾಜಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ. ರವರಿಗೆ ಕರ್ನಾಟಕ ಜ್ಯೋತಿ ಅವಾರ್ಡ್

Suddi Udaya

ಕಲ್ಲೇರಿಯ ಪವರ್ ಮ್ಯಾನ್ ಸಂದೀಪ್ ಎಂ ರವರು ಮಂಗಳೂರಿನ ಮಲ್ಲಿಕಟ್ಟೆ ಕಾರ್ಯ ಮತ್ತು ಪಾಲನಾ ಶಾಖೆಗೆ ಪದೋನ್ನತಿ

Suddi Udaya

ಧರ್ಮಸ್ಥಳಕ್ಕೆ ನಂದಿ ರಥಯಾತ್ರೆ

Suddi Udaya
error: Content is protected !!