24.4 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಪ್ರೇರಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

ನಿಡ್ಲೆ: ನಿಡ್ಲೆ ಪ್ರೇರಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ, ಇದರ 2023-2024ನೇ ವಾರ್ಷಿಕ ಮಹಾಸಭೆಯನ್ನು ನಾಗವೇಣಿ ಅಮ್ಮ ಸಭಾಂಗಣ ಬರೆಂಗಾಯದಲ್ಲಿ ಜ.30ರಂದು ನಡೆಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಪ್ರೇಮ ವಹಿಸಿಕೊಂಡಿದ್ದರು. ಕುಮಾರಿ ಹೇಮಲತಾ ಹಾಗೂ ಶ್ರೀಮತಿ ಪ್ರೇಮ ಇವರ ಪ್ರಾರ್ಥನೆಯೊಂದಿಗೆ ಸಭೆಯನ್ನು ಪ್ರಾರಂಭಿಸಲಾಯಿತು. ಒಕ್ಕೂಟದ ಮಾಜಿ ಅಧ್ಯಕ್ಷೆ ಶ್ರೀಮತಿ ಹೇಮಾವತಿ ಪ್ರಾಸ್ತಾವಿಕ ಮಾತುಗಳನ್ನು ಆಡಿ ಸಭೆಗೆ ಶುಭ ಕೋರಿದರು. ಎಂ ಬಿ ಕೆ ಭವಾನಿ ವಾರ್ಷಿಕ ವರದಿಯನ್ನು ಹಾಗೂ ಜಮಾ ಖರ್ಚು ವರದಿಯನ್ನು ಓದಿ ಸಭೆಯಲ್ಲಿ ಮಂಡಿಸಲಾಯಿತು ಹಾಗೂ ಅನುಮೋದನೆಯನ್ನು ಪಡೆಯಲಾಯಿತು. ವಲಯ ಮೇಲ್ವಿಚಾರಕಿ ವೀಣಾಶ್ರೀ ವಾರ್ಷಿಕ ಮಹಾಸಭೆಯ ಉದ್ದೇಶ ಜವಾಬ್ದಾರಿ ಹಾಗೂ ಎನ್.ಆರ್.ಎಲ್.ಎಮ್ ನಿಂದ ಸದಸ್ಯರಿಗೆ ಸಿಗುವ ಸಾಲ ಸೌಲಭ್ಯಗಳ ಬಗ್ಗೆ ಉತ್ತಮ ಮಾಹಿತಿ ನೀಡಿದರು. ಉತ್ತಮ ಸಂಘ, ಸಿಐಎಫ್ ಪಡೆದು ಸ್ವಉದ್ಯೋಗ ಮಾಡುತ್ತಿರುವ ಸದಸ್ಯೆಗೆ ಉತ್ತಮ ಸಾಧಕಿ. ವಿಕಲ ಚೇತನರ ಸಂಘದ ಸದಸ್ಯ ಉತ್ತಮ ಭಾಗವಹಿಸುವಿಕೆ. ಇವರನ್ನು ಗುರುತಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಪದಾಧಿಕಾರಿಗಳ ಆಯ್ಕೆ ಮಾಡಿ ಪದಗ್ರಹಣವನ್ನು ಮಾಡಲಾಯಿತು. ಮಾಜಿ ಸದಸ್ಯರಿಗೆ ಸ್ಮರಣಿಕೆ ನೀಡಲಾಯಿತು. ಶ್ರೀಮತಿ ಹೇಮಾವತಿ ನಿರೂಪಿಸಿ, ಕೃಷಿ ಸಖಿ ಸುಮನ ಸ್ವಾಗತಿಸಿ, ಸುಜಾತಾ ಧನ್ಯವಾದವಿತ್ತರು.

Related posts

ಕೆಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ ಬೆಳ್ತಂಗಡಿ ಘಟಕ ವತಿಯಿಂದ ಪರಿಸರ ಸ್ವಚ್ಚತಾ ಆಂದೋಲನ

Suddi Udaya

ಸವಣಾಲು ಉದ್ಯಮಿ ಅರುಣ್ ಕುಮಾರ್ ನಿಧನ

Suddi Udaya

ಬೆಳ್ತಂಗಡಿ ಸಂತೆ ಮಾರುಕಟ್ಟೆಯ ವಿದ್ಯುತ್ ಕಂಬಕ್ಕೆ ಸುತ್ತುವರಿದ ಮರದ ಕೊಂಬೆಗಳ ತೆರವು

Suddi Udaya

ಸೌಜನ್ಯ ಕೊಲೆ ಪ್ರಕರಣ: ಕೊಕ್ಕಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ಏಪ೯ಡಿಸಲಾದ ರಾಜ್ಯ ಮಟ್ಟದ ವಸ್ತು ಪ್ರದರ್ಶನದ ಉದ್ಘಾಟನೆ

Suddi Udaya

ಶಿಬರಾಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!