23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಪ್ರೇರಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

ನಿಡ್ಲೆ: ನಿಡ್ಲೆ ಪ್ರೇರಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ, ಇದರ 2023-2024ನೇ ವಾರ್ಷಿಕ ಮಹಾಸಭೆಯನ್ನು ನಾಗವೇಣಿ ಅಮ್ಮ ಸಭಾಂಗಣ ಬರೆಂಗಾಯದಲ್ಲಿ ಜ.30ರಂದು ನಡೆಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಪ್ರೇಮ ವಹಿಸಿಕೊಂಡಿದ್ದರು. ಕುಮಾರಿ ಹೇಮಲತಾ ಹಾಗೂ ಶ್ರೀಮತಿ ಪ್ರೇಮ ಇವರ ಪ್ರಾರ್ಥನೆಯೊಂದಿಗೆ ಸಭೆಯನ್ನು ಪ್ರಾರಂಭಿಸಲಾಯಿತು. ಒಕ್ಕೂಟದ ಮಾಜಿ ಅಧ್ಯಕ್ಷೆ ಶ್ರೀಮತಿ ಹೇಮಾವತಿ ಪ್ರಾಸ್ತಾವಿಕ ಮಾತುಗಳನ್ನು ಆಡಿ ಸಭೆಗೆ ಶುಭ ಕೋರಿದರು. ಎಂ ಬಿ ಕೆ ಭವಾನಿ ವಾರ್ಷಿಕ ವರದಿಯನ್ನು ಹಾಗೂ ಜಮಾ ಖರ್ಚು ವರದಿಯನ್ನು ಓದಿ ಸಭೆಯಲ್ಲಿ ಮಂಡಿಸಲಾಯಿತು ಹಾಗೂ ಅನುಮೋದನೆಯನ್ನು ಪಡೆಯಲಾಯಿತು. ವಲಯ ಮೇಲ್ವಿಚಾರಕಿ ವೀಣಾಶ್ರೀ ವಾರ್ಷಿಕ ಮಹಾಸಭೆಯ ಉದ್ದೇಶ ಜವಾಬ್ದಾರಿ ಹಾಗೂ ಎನ್.ಆರ್.ಎಲ್.ಎಮ್ ನಿಂದ ಸದಸ್ಯರಿಗೆ ಸಿಗುವ ಸಾಲ ಸೌಲಭ್ಯಗಳ ಬಗ್ಗೆ ಉತ್ತಮ ಮಾಹಿತಿ ನೀಡಿದರು. ಉತ್ತಮ ಸಂಘ, ಸಿಐಎಫ್ ಪಡೆದು ಸ್ವಉದ್ಯೋಗ ಮಾಡುತ್ತಿರುವ ಸದಸ್ಯೆಗೆ ಉತ್ತಮ ಸಾಧಕಿ. ವಿಕಲ ಚೇತನರ ಸಂಘದ ಸದಸ್ಯ ಉತ್ತಮ ಭಾಗವಹಿಸುವಿಕೆ. ಇವರನ್ನು ಗುರುತಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಪದಾಧಿಕಾರಿಗಳ ಆಯ್ಕೆ ಮಾಡಿ ಪದಗ್ರಹಣವನ್ನು ಮಾಡಲಾಯಿತು. ಮಾಜಿ ಸದಸ್ಯರಿಗೆ ಸ್ಮರಣಿಕೆ ನೀಡಲಾಯಿತು. ಶ್ರೀಮತಿ ಹೇಮಾವತಿ ನಿರೂಪಿಸಿ, ಕೃಷಿ ಸಖಿ ಸುಮನ ಸ್ವಾಗತಿಸಿ, ಸುಜಾತಾ ಧನ್ಯವಾದವಿತ್ತರು.

Related posts

ಓಡಿಲ್ನಾಳ : ಭದ್ರಕಜೆ ಯುವಶಕ್ತಿ ಫ್ರೆಂಡ್ಸ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪೆರಿಂಜೆ : ಮಿಲಾದ್ ಆಚರಣೆಯ ಪ್ರಯುಕ್ತ ಮದ್ರಸ ವಿದ್ಯಾರ್ಥಿಗಳಿಂದ ‘ನೂರುನ್ ಆಲಾ ನೂರ್ ‘ಕಾರ್ಯಕ್ರಮ

Suddi Udaya

ಉಜಿರೆಯ ಮಾನಸ ಜಿ ಶೆಟ್ಟಿ ರವರಿಗೆ ಪಿಎಚ್‌ಡಿ ಪದವಿ ಪ್ರಧಾನ

Suddi Udaya

ಬೆಳ್ತಂಗಡಿ ದಾರುಸ್ಸಲಾಂ ದುಅ್’ವಾ ಕಾಲೇಜಿಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ

Suddi Udaya

2017ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಚಿವ ಮಧು ಬಂಗಾರಪ್ಪ ರವರಿಗೆ ಮನವಿ

Suddi Udaya

ಶಿಶಿಲ ಶಿವ ಸೇವಾ ಟ್ರಸ್ಟ್ ವತಿಯಿಂದ ಹೇವಾಜೆ ಶಾಲೆಯ ಆಯ್ದ ಮಕ್ಕಳಿಗೆ ಉಚಿತ ಬ್ಯಾಗ್, ಪುಸ್ತಕ ಮತ್ತು ಕಲಿಕಾ ಸಾಮಾಗ್ರಿ ವಿತರಣೆ

Suddi Udaya
error: Content is protected !!