25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜನತೆಯ ನಾಡಿ ಮಿಡಿತ ಅರಿತು ವಿಕಸಿತ ಭಾರತದ ಬಜೆಟ್ ಮಂಡನೆ: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಫೆ.01- ಮಧ್ಯಮ ವರ್ಗದವರನ್ನು ಗಮನದಲ್ಲಿರಿಸಿಕೊಂಡು ಇಂದು ಕೇಂದ್ರ ವಿತ್ತ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಮಂಡಿಸಿದ 2025-26ನೇ ಸಾಲಿನ ಮುಂಗಡ ಪತ್ರ ನರೇಂದ್ರ ಮೋದಿ ನೇತೃತ್ವದ ಮೂರನೇ ಅವಧಿ ಸರ್ಕಾರ ಉತ್ತಮ ಆಡಳಿತ ಆರ್ಥಿಕ ಸುಧಾರಣೆ ನೀಡುವತ್ತ ದಿಟ್ಟ ಹೆಜ್ಜೆ ಇರಿಸುತ್ತಿರುವುದರ ದ್ಯೋತಕವಾಗಿದೆಯೆಂದು ಶಾಸಕ ಹರೀಶ್ ಪೂಂಜ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

ಪ್ರಧಾನಮಂತ್ರಿ ದನಧಾನ್ಯ ಕೃಷಿ ಯೋಜನೆ, ಕೃಷಿ ಹಾಗೂ ಉತ್ಪಾದನಾ ವಲಯದ ಪ್ರಗತಿಗೆ ಪೂರಕವಾಗಲಿದ್ದು ಮೀನುಗಾರಿಕಾ ವಲಯಕ್ಕೆ ಉತ್ತೇಜನ, ಸಣ್ಣ ಉದ್ಯಮಿಗಳಿಗೆ ಸರಳ ಸಾಲ ಪ್ರತ್ಯೇಕ ಕ್ರೆಡಿಟ್ ಕಾರ್ಡ್ ಯೋಜನೆ ಪ್ರೋತ್ಸಾಹದಾಯಕವಾಗಲಿದೆ. ಸರಕಾರಿ ಪ್ರೌಢಶಾಲೆಗಳಿಗೆ ಇಂಟರ್ನೆಟ್ ಸೌಲಭ್ಯ, ಐಐಟಿಗಳ ಮೂಲ ಸೌಕರ್ಯ ವೃದ್ಧಿ, ವೈದ್ಯಕೀಯ ಸೀಟುಗಳ ಹೆಚ್ಚಳ ಶಿಕ್ಷಣ ರಂಗದಲ್ಲಿ ಮಹತ್ತರ ಬದಲಾವಣೆಯಾಗಲಿದೆ. ಪ್ರತೀ ಜಿಲ್ಲಾಸ್ಪತ್ರೆಗಳಲ್ಲಿ ಕ್ಯಾನ್ಸರ್ ಚಿಕಿತ್ಸಾ ವಿಭಾಗ ತೆರೆಯುವುದು ಜೀವರಕ್ಷಕ ಔಷಧಿಗಳ ಆಮದು ಸುಂಕ ರದ್ದು ಬಡ ಜನತೆಗೆ ಉತ್ತಮ ಆರೋಗ್ಯ ಸೇವೆ ದೊರಕಲು ನೆರವಾಗಲಿದೆ.

ತೆರಿಗೆ ಯೋಜನೆಯಡಿ ಬಡ್ಡಿ ಹಾಗೂ ಬಾಡಿಗೆಗಳ ಟಿಡಿಎಸ್ ಮಿತಿ ಹೆಚ್ಚಳ, ಮೊಬೈಲ್ ಎಲ್ ಇ ಡಿ ಸೇವೆಗಳ ಅಗ್ಗ, ಮಧ್ಯಮ ಹಾಗೂ ಸಣ್ಣ ಕೈಗಾರಿಕೆಗಳಿಗೆ ನೀಡುವ ಬೆಂಬಲದಿಂದ ಉದ್ಯೋಗ ಸೃಷ್ಟಿಯಾಗಲಿದೆ. ಆದಾಯ ತೆರಿಗೆದಾರರಿಗೆ ಆದಾಯದ ಮಿತಿಯನ್ನು12 ಲಕ್ಷಕ್ಕೆ ಏರಿಸಿರುವುದು ಸ್ವಾಗತಾರ್ಹ. ಜನತೆಯ ನಾಡಿಮಿಡಿತ ಅರಿತು ವಿಕಸಿತ ಭಾರತದ ಅತ್ಯುತ್ತಮ ಬಜೆಟ್ ಮಂಡಿಸಿದ ಕೇಂದ್ರ ಹಣಕಾಸು ಸಚಿವರನ್ನು, ಪ್ರಧಾನಿ ನರೇಂದ್ರ ಮೋದಿಯವರನ್ನು ಶಾಸಕ ಹರೀಶ್ ಪೂಂಜ ಪತ್ರಿಕಾ ಪ್ರಕಟಣೆ ಮೂಲಕ ಅಭಿನಂದಿಸಿದ್ದಾರೆ.

Related posts

ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಪರಾಮರ್ಶೆ ಸಭೆಯಲ್ಲಿ ಭಿನ್ನಮತ ಸ್ಫೋಟ: ಎರಡು ಬಣಗಳ ನಡುವೆ ಮಾತಿನ ಚಕಮಕಿ: ಬೆಳ್ತಂಗಡಿ ಕಾಂಗ್ರೆಸ್ ಪಾಳಯದಲ್ಲಿ ಮತ್ತೆ ಬುಗಿಲೆದ್ದ ಭಿನ್ನಮತ

Suddi Udaya

ವಿದ್ವತ್ ಜೆಇಇ ಸಾಧಕರಿಗೆ ಕಾಲೇಜು ವತಿಯಿಂದ ಅಭಿನಂದನೆ: 35 ವಿದ್ಯಾರ್ಥಿಗಳ ಪೈಕಿ 21 ಮಂದಿ ಶೇ.90 ಅಧಿಕ ಪರ್ಸೆಂಟೈಲ್ ಪಡೆದ ದಾಖಲೆ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya

ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ ಶಿಕ್ಷಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿಯಲ್ಲಿ ಅಗ್ನಿ ಅನಾಹುತಗಳ ತಡೆಗಟ್ಟುವ ಕುರಿತು ಅಗ್ನಿಶಾಮಕ ದಳದಿಂದ ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ಸುದ್ದಿ ಉದಯ ವಾರಪತ್ರಿಕೆ’ ನೇತೃತ್ವ ‘ಮುಳಿಯ ಸಂಸ್ಥೆ’ಯ ಪ್ರಾಯೋಜಕತ್ವ – ‘ರಾಧೆ-ಕೃಷ್ಣ’ ಫೋಟೋ ಸ್ಪರ್ಧಾ ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ

Suddi Udaya
error: Content is protected !!