ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜನತೆಯ ನಾಡಿ ಮಿಡಿತ ಅರಿತು ವಿಕಸಿತ ಭಾರತದ ಬಜೆಟ್ ಮಂಡನೆ: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಫೆ.01- ಮಧ್ಯಮ ವರ್ಗದವರನ್ನು ಗಮನದಲ್ಲಿರಿಸಿಕೊಂಡು ಇಂದು ಕೇಂದ್ರ ವಿತ್ತ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಮಂಡಿಸಿದ 2025-26ನೇ ಸಾಲಿನ ಮುಂಗಡ ಪತ್ರ ನರೇಂದ್ರ ಮೋದಿ ನೇತೃತ್ವದ ಮೂರನೇ ಅವಧಿ ಸರ್ಕಾರ ಉತ್ತಮ ಆಡಳಿತ ಆರ್ಥಿಕ ಸುಧಾರಣೆ ನೀಡುವತ್ತ ದಿಟ್ಟ ಹೆಜ್ಜೆ ಇರಿಸುತ್ತಿರುವುದರ ದ್ಯೋತಕವಾಗಿದೆಯೆಂದು ಶಾಸಕ ಹರೀಶ್ ಪೂಂಜ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

ಪ್ರಧಾನಮಂತ್ರಿ ದನಧಾನ್ಯ ಕೃಷಿ ಯೋಜನೆ, ಕೃಷಿ ಹಾಗೂ ಉತ್ಪಾದನಾ ವಲಯದ ಪ್ರಗತಿಗೆ ಪೂರಕವಾಗಲಿದ್ದು ಮೀನುಗಾರಿಕಾ ವಲಯಕ್ಕೆ ಉತ್ತೇಜನ, ಸಣ್ಣ ಉದ್ಯಮಿಗಳಿಗೆ ಸರಳ ಸಾಲ ಪ್ರತ್ಯೇಕ ಕ್ರೆಡಿಟ್ ಕಾರ್ಡ್ ಯೋಜನೆ ಪ್ರೋತ್ಸಾಹದಾಯಕವಾಗಲಿದೆ. ಸರಕಾರಿ ಪ್ರೌಢಶಾಲೆಗಳಿಗೆ ಇಂಟರ್ನೆಟ್ ಸೌಲಭ್ಯ, ಐಐಟಿಗಳ ಮೂಲ ಸೌಕರ್ಯ ವೃದ್ಧಿ, ವೈದ್ಯಕೀಯ ಸೀಟುಗಳ ಹೆಚ್ಚಳ ಶಿಕ್ಷಣ ರಂಗದಲ್ಲಿ ಮಹತ್ತರ ಬದಲಾವಣೆಯಾಗಲಿದೆ. ಪ್ರತೀ ಜಿಲ್ಲಾಸ್ಪತ್ರೆಗಳಲ್ಲಿ ಕ್ಯಾನ್ಸರ್ ಚಿಕಿತ್ಸಾ ವಿಭಾಗ ತೆರೆಯುವುದು ಜೀವರಕ್ಷಕ ಔಷಧಿಗಳ ಆಮದು ಸುಂಕ ರದ್ದು ಬಡ ಜನತೆಗೆ ಉತ್ತಮ ಆರೋಗ್ಯ ಸೇವೆ ದೊರಕಲು ನೆರವಾಗಲಿದೆ.

ತೆರಿಗೆ ಯೋಜನೆಯಡಿ ಬಡ್ಡಿ ಹಾಗೂ ಬಾಡಿಗೆಗಳ ಟಿಡಿಎಸ್ ಮಿತಿ ಹೆಚ್ಚಳ, ಮೊಬೈಲ್ ಎಲ್ ಇ ಡಿ ಸೇವೆಗಳ ಅಗ್ಗ, ಮಧ್ಯಮ ಹಾಗೂ ಸಣ್ಣ ಕೈಗಾರಿಕೆಗಳಿಗೆ ನೀಡುವ ಬೆಂಬಲದಿಂದ ಉದ್ಯೋಗ ಸೃಷ್ಟಿಯಾಗಲಿದೆ. ಆದಾಯ ತೆರಿಗೆದಾರರಿಗೆ ಆದಾಯದ ಮಿತಿಯನ್ನು12 ಲಕ್ಷಕ್ಕೆ ಏರಿಸಿರುವುದು ಸ್ವಾಗತಾರ್ಹ. ಜನತೆಯ ನಾಡಿಮಿಡಿತ ಅರಿತು ವಿಕಸಿತ ಭಾರತದ ಅತ್ಯುತ್ತಮ ಬಜೆಟ್ ಮಂಡಿಸಿದ ಕೇಂದ್ರ ಹಣಕಾಸು ಸಚಿವರನ್ನು, ಪ್ರಧಾನಿ ನರೇಂದ್ರ ಮೋದಿಯವರನ್ನು ಶಾಸಕ ಹರೀಶ್ ಪೂಂಜ ಪತ್ರಿಕಾ ಪ್ರಕಟಣೆ ಮೂಲಕ ಅಭಿನಂದಿಸಿದ್ದಾರೆ.

Related posts

ನಾಲ್ಕೂರು: ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ

Suddi Udaya

ನಾಳೆ(ಜ.11): ಗುರುವಾಯನಕೆರೆ ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಪರೀಕ್ಷಾ ನಿಮಿತ್ತ ವಿಶೇಷ ಕಾರ್ಯಾಗಾರ:ಎಕ್ಸೆಲ್ ಬೆಳಕು ಫೌಂಡೇಶನ್ಉಚಿತ ಶಿಕ್ಷಣ ಯೋಜನೆ ಬಗ್ಗೆ ವಿಸ್ಕೃತ ಮಾಹಿತಿ ನೀಡಲಿದ್ದೇವೆ: ಸುಮಂತ್ ಕುಮಾರ್ ಜೈನ್:ಬರುವ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ,ಕಾರ್ಯಾಗಾರವೂ ಮಧ್ಯಾಹ್ನ 2:00 ರಿಂದ ಸಂಜೆ 4:30 ರ ವರೆಗೆ ಜರುಗಲಿದೆ

Suddi Udaya

ನ.5: ಬೆಳ್ತಂಗಡಿ ಧರ್ಮಪ್ರಾಂತ್ಯದ ಎರಡನೆಯ ಧರ್ಮಾಧ್ಯಕ್ಷರಾದ ಅತೀ ವಂದನೀಯ ಜೇಮ್ಸ್ ಪಟ್ಟೇರಿಲ್ ಪಟ್ಟಾಭಿಷೇಕ

Suddi Udaya

ಎಸ್ ಡಿ ಎಂ ಬೆಳ್ತಂಗಡಿ: ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ

Suddi Udaya

ಕಲಾಕುಂಚ ಆರ್ಟ್ಸ್ ನಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya

ಆಲ್ ಇಂಡಿಯಾ ಅಂತರ್ ವಿಶ್ವವಿದ್ಯಾಲಯ ಪಂದ್ಯಾಟಕ್ಕೆ ಎಸ್.ಡಿ.ಎಂ ಕಾಲೇಜಿನ 9 ವಿದ್ಯಾರ್ಥಿಗಳು ಆಯ್ಕೆ

Suddi Udaya
error: Content is protected !!