34.1 C
ಪುತ್ತೂರು, ಬೆಳ್ತಂಗಡಿ
February 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

 ನಕ್ಸಲ್ ಚಳವಳಿಯ ಕೊನೆಯ ವ್ಯಕ್ತಿ ನಕ್ಸಲ್ ರವೀಂದ್ರ ಶರಣಾಗತಿ

ಚಿಕ್ಕಮಗಳೂರು: ನಕ್ಸಲ್ ಶರಣಾಗತಿ ಹಿನ್ನೆಲೆ, ಚಿಕ್ಕಮಗಳೂರು ಎಸ್ಪಿ ಕಚೇರಿಗೆ ನಕ್ಸಲ್ ರವೀಂದ್ರ ಆಗಮಿಸಿದ್ದು, ಎಸ್ಪಿ ವಿಕ್ರಂ ಅಮಟೆ ಮುಂದೆ ಶರಣಾಗಿದ್ದಾರೆ.

ನಾಗರೀಕ ಶಾಂತಿಗಾಗಿ ವೇದಿಕೆ ಸದಸ್ಯರ ಜೊತೆ ಆಗಮಿಸಿದ ರವೀಂದ್ರ, ಎಸ್ಪಿ ವಿಕ್ರಂ ಅಮಟೆ ಮುಂದೆ ಹಾಜರಾಗಿದ್ದು, ಒಂದೂವರೆ ದಶಕದ ನಕ್ಸಲ್ ಹೋರಾಟಕ್ಕೆ ವಿದಾಯ ಹೇಳಿದ್ದು, ಮುಖ್ಯವಾಹಿನಿಗೆ ಆಗಮಿಸಿದ್ದಾರೆ.

ಜಿಲ್ಲೆಯಲ್ಲಿ ರವೀಂದ್ರ ಮೇಲೆ 20 ಕೇಸ್ ಗಳಿವೆ, ಒಂದೂವರೆ ದಶಕದಿಂದ ಭೂಗತರಾಗಿದ್ದ ರವೀಂದ್ರ ಇದೀಗ ನಕ್ಸಲ್ ಶರಣಾಗತಿಯ ಭಾಗವಾಗಿ ಪೊಲೀಸರಿಗೆ ಶರಣಾಗಿದ್ದಾರೆ.

ಲತಾ ಮುಂಡಗಾರು, ವನಜಾಕ್ಷಿ ಬಾಳೆಹೊಳೆ, ಸುಂದರಿ ಕುತ್ಲೂರು, ಮಾರೆಪ್ಪ ಅರೋಲಿ, ಕೆ.ವಸಂತ(ತಮಿಳುನಾಡು), ಟಿ.ಎನ್.ಜಿಷಾ(ಕೇರಳ) ಒಳಗೊಂಡ ತಂಡ ಜ.8ರಂದು ಮುಖ್ಯವಾಹಿನಿಗೆ ಬಂದಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲೇ ಎಲ್ಲರನ್ನು ಸ್ವಾಗತಿಸಲಾಗಿತ್ತು. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ತಂಡದಿಂದ ಬೇರ್ಪಟ್ಟಿದ್ದ ಕೋಟೆಹೊಂಡ ರವೀಂದ್ರ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಅವರನ್ನು ಸಂಪರ್ಕಿಸುವ ಪ್ರಯತ್ನವನ್ನು ಶಾಂತಿಗಾಗಿ ನಾಗರಿಕ ವೇದಿಕೆ ಮತ್ತು ನಕ್ಸಲ್ ಶರಣಾಗತಿ ಸಮಿತಿ ಮಾಡಿದೆ.

Related posts

ನಂದಿಬೆಟ್ಟ ಬಳಿ ಬೈಕ್ ಮತ್ತು ಬಸ್ ನಡುವೆ ಭೀಕರ ರಸ್ತೆ ಅಪಘಾತ: ಹುಟ್ಟುಹಬ್ಬದ ದಿನದಂದೆ ಓಡೀಲುವಿನ ಯುವಕ ದೀಕ್ಷಿತ್ ಬಲಿ

Suddi Udaya

ಚಾರ್ಮಾಡಿಯಲ್ಲಿ ಕಾಡುಪ್ರಾಣಿ ಬೇಟೆ ಪ್ರಕರಣ: ಇಬ್ಬರು ಆರೋಪಿಗಳ ಮೇಲೆ ಪ್ರಕರಣ ದಾಖಲು

Suddi Udaya

ಪಂಚಾಯತ್‌ ನೌಕರರ ಮೂಲ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರುನಲ್ಲಿ ಗ್ರಾಮ ಪಂಚಾಯತ್ ನೌಕರರ ರಾಜ್ಯ ಮಟ್ಟದ ಬೃಹತ್ ಪ್ರತಿಭಟನೆ

Suddi Udaya

ಸುರ್ಯಗುತ್ತು ಡಾ. ಸತೀಶ್ಚಂದ್ರ ಅವರ ಹಿರಿಯ ಸಹೋದರಿ ಬಂಟ್ವಾಳ ಇರ್ವತ್ತೂರು ಗುತ್ತು ಶ್ರೀಮತಿ ವಿಜಯಮ್ಮ ನಿಧನ

Suddi Udaya

ಮೇ 18: ವಿದ್ಯುತ್ ನಿಲುಗಡೆ

Suddi Udaya

ಉಜಿರೆ: ಎಸ್.ಡಿ.ಎಂ ವಸತಿ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನ ಆಚರಣೆ

Suddi Udaya
error: Content is protected !!