30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

 ನಕ್ಸಲ್ ಚಳವಳಿಯ ಕೊನೆಯ ವ್ಯಕ್ತಿ ನಕ್ಸಲ್ ರವೀಂದ್ರ ಶರಣಾಗತಿ

ಚಿಕ್ಕಮಗಳೂರು: ನಕ್ಸಲ್ ಶರಣಾಗತಿ ಹಿನ್ನೆಲೆ, ಚಿಕ್ಕಮಗಳೂರು ಎಸ್ಪಿ ಕಚೇರಿಗೆ ನಕ್ಸಲ್ ರವೀಂದ್ರ ಆಗಮಿಸಿದ್ದು, ಎಸ್ಪಿ ವಿಕ್ರಂ ಅಮಟೆ ಮುಂದೆ ಶರಣಾಗಿದ್ದಾರೆ.

ನಾಗರೀಕ ಶಾಂತಿಗಾಗಿ ವೇದಿಕೆ ಸದಸ್ಯರ ಜೊತೆ ಆಗಮಿಸಿದ ರವೀಂದ್ರ, ಎಸ್ಪಿ ವಿಕ್ರಂ ಅಮಟೆ ಮುಂದೆ ಹಾಜರಾಗಿದ್ದು, ಒಂದೂವರೆ ದಶಕದ ನಕ್ಸಲ್ ಹೋರಾಟಕ್ಕೆ ವಿದಾಯ ಹೇಳಿದ್ದು, ಮುಖ್ಯವಾಹಿನಿಗೆ ಆಗಮಿಸಿದ್ದಾರೆ.

ಜಿಲ್ಲೆಯಲ್ಲಿ ರವೀಂದ್ರ ಮೇಲೆ 20 ಕೇಸ್ ಗಳಿವೆ, ಒಂದೂವರೆ ದಶಕದಿಂದ ಭೂಗತರಾಗಿದ್ದ ರವೀಂದ್ರ ಇದೀಗ ನಕ್ಸಲ್ ಶರಣಾಗತಿಯ ಭಾಗವಾಗಿ ಪೊಲೀಸರಿಗೆ ಶರಣಾಗಿದ್ದಾರೆ.

ಲತಾ ಮುಂಡಗಾರು, ವನಜಾಕ್ಷಿ ಬಾಳೆಹೊಳೆ, ಸುಂದರಿ ಕುತ್ಲೂರು, ಮಾರೆಪ್ಪ ಅರೋಲಿ, ಕೆ.ವಸಂತ(ತಮಿಳುನಾಡು), ಟಿ.ಎನ್.ಜಿಷಾ(ಕೇರಳ) ಒಳಗೊಂಡ ತಂಡ ಜ.8ರಂದು ಮುಖ್ಯವಾಹಿನಿಗೆ ಬಂದಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲೇ ಎಲ್ಲರನ್ನು ಸ್ವಾಗತಿಸಲಾಗಿತ್ತು. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ತಂಡದಿಂದ ಬೇರ್ಪಟ್ಟಿದ್ದ ಕೋಟೆಹೊಂಡ ರವೀಂದ್ರ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಅವರನ್ನು ಸಂಪರ್ಕಿಸುವ ಪ್ರಯತ್ನವನ್ನು ಶಾಂತಿಗಾಗಿ ನಾಗರಿಕ ವೇದಿಕೆ ಮತ್ತು ನಕ್ಸಲ್ ಶರಣಾಗತಿ ಸಮಿತಿ ಮಾಡಿದೆ.

Related posts

ಮಚ್ಚಿನ ಬೂತ್ ಸಂಖ್ಯೆ 181, 182, 183ರ ಮತಗಟ್ಟೆಗೆ ಆರ್‌ಎಸ್‌ಎಸ್ ಮುಖಂಡ ಪ್ರಭಾಕರ್ ಭಟ್ ಕಲ್ಲಡ್ಕ ಭೇಟಿ

Suddi Udaya

ಬೆಳಾಲು ಪ್ರೌಢಶಾಲೆಯ ಮಕ್ಕಳಿಗೆ ಗದ್ದೆಯಲ್ಲಿ ಒಂದು ದಿನ ಕಾರ್ಯಕ್ರಮ:ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಬೇಸಾಯದ ಪಾಠ

Suddi Udaya

ತೆಕ್ಕಾರು: ಮನೆಯ ಪಕ್ಕದ ಬರೆ ಕುಸಿತ: ಮನೆಗೆ ಹಾನಿ

Suddi Udaya

ಕೊಕ್ಕಡ ಪರಿಸರದಲ್ಲಿಒಂಟಿ ಸಲಗ ದಾಳಿ: ಅಪಾರ ಕೃಷಿ ಹಾನಿ

Suddi Udaya

ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಾಲಯದ ಗೋಶಾಲೆಯಲ್ಲಿ ಗೋಪೂಜೆ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya
error: Content is protected !!