ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

 ನಕ್ಸಲ್ ಚಳವಳಿಯ ಕೊನೆಯ ವ್ಯಕ್ತಿ ನಕ್ಸಲ್ ರವೀಂದ್ರ ಶರಣಾಗತಿ

ಚಿಕ್ಕಮಗಳೂರು: ನಕ್ಸಲ್ ಶರಣಾಗತಿ ಹಿನ್ನೆಲೆ, ಚಿಕ್ಕಮಗಳೂರು ಎಸ್ಪಿ ಕಚೇರಿಗೆ ನಕ್ಸಲ್ ರವೀಂದ್ರ ಆಗಮಿಸಿದ್ದು, ಎಸ್ಪಿ ವಿಕ್ರಂ ಅಮಟೆ ಮುಂದೆ ಶರಣಾಗಿದ್ದಾರೆ.

ನಾಗರೀಕ ಶಾಂತಿಗಾಗಿ ವೇದಿಕೆ ಸದಸ್ಯರ ಜೊತೆ ಆಗಮಿಸಿದ ರವೀಂದ್ರ, ಎಸ್ಪಿ ವಿಕ್ರಂ ಅಮಟೆ ಮುಂದೆ ಹಾಜರಾಗಿದ್ದು, ಒಂದೂವರೆ ದಶಕದ ನಕ್ಸಲ್ ಹೋರಾಟಕ್ಕೆ ವಿದಾಯ ಹೇಳಿದ್ದು, ಮುಖ್ಯವಾಹಿನಿಗೆ ಆಗಮಿಸಿದ್ದಾರೆ.

ಜಿಲ್ಲೆಯಲ್ಲಿ ರವೀಂದ್ರ ಮೇಲೆ 20 ಕೇಸ್ ಗಳಿವೆ, ಒಂದೂವರೆ ದಶಕದಿಂದ ಭೂಗತರಾಗಿದ್ದ ರವೀಂದ್ರ ಇದೀಗ ನಕ್ಸಲ್ ಶರಣಾಗತಿಯ ಭಾಗವಾಗಿ ಪೊಲೀಸರಿಗೆ ಶರಣಾಗಿದ್ದಾರೆ.

ಲತಾ ಮುಂಡಗಾರು, ವನಜಾಕ್ಷಿ ಬಾಳೆಹೊಳೆ, ಸುಂದರಿ ಕುತ್ಲೂರು, ಮಾರೆಪ್ಪ ಅರೋಲಿ, ಕೆ.ವಸಂತ(ತಮಿಳುನಾಡು), ಟಿ.ಎನ್.ಜಿಷಾ(ಕೇರಳ) ಒಳಗೊಂಡ ತಂಡ ಜ.8ರಂದು ಮುಖ್ಯವಾಹಿನಿಗೆ ಬಂದಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲೇ ಎಲ್ಲರನ್ನು ಸ್ವಾಗತಿಸಲಾಗಿತ್ತು. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ತಂಡದಿಂದ ಬೇರ್ಪಟ್ಟಿದ್ದ ಕೋಟೆಹೊಂಡ ರವೀಂದ್ರ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಅವರನ್ನು ಸಂಪರ್ಕಿಸುವ ಪ್ರಯತ್ನವನ್ನು ಶಾಂತಿಗಾಗಿ ನಾಗರಿಕ ವೇದಿಕೆ ಮತ್ತು ನಕ್ಸಲ್ ಶರಣಾಗತಿ ಸಮಿತಿ ಮಾಡಿದೆ.

Related posts

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಅ.29: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವಾಣಿ ಕಾಲೇಜಿಗೆ ಪ್ರಾಜೆಕ್ಟರ್ ಹಸ್ತಾಂತರ ಮತ್ತು ರಾಷ್ಟ್ರೀಯ ಅಧ್ಯಕ್ಷರ ಭೇಟಿ

Suddi Udaya

ಹದಗೆಟ್ಟ ರಸ್ತೆ: ಸಮಾಜಸೇವಕ ಕಲಾಯಿ ಗಣೇಶ್ ಗೌಡ ಹಾಗೂ ಊರವರ ಸಹಕಾರದೊಂದಿಗೆ ರಸ್ತೆ ದುರಸ್ತಿ

Suddi Udaya

ಕುತ್ಲೂರು ಅಂಗನವಾಡಿ ಕೇಂದ್ರಕ್ಕೆ ಟಿ.ವಿ. ಮತ್ತು ಇಂಟರ್ನೆಟ್ ಕೊಡುಗೆ

Suddi Udaya

ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಬೆಲೆ ಏರಿಕೆಯನ್ನು ವಿರೋಧಿಸಿ ಬೃಹತ್ ಪ್ರತಿಭಟನೆ: ಮಲ್ಲೇಶ್ವರದಿಂದ ಬಂದ ಪುಡಾರಿಯಿಂದ ದ್ವೇಷದ ರಾಜಕಾರಣ: ಹರೀಶ್ ಪೂಂಜ ಆರೋಪ

Suddi Udaya
error: Content is protected !!