26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

 ನಕ್ಸಲ್ ಚಳವಳಿಯ ಕೊನೆಯ ವ್ಯಕ್ತಿ ನಕ್ಸಲ್ ರವೀಂದ್ರ ಶರಣಾಗತಿ

ಚಿಕ್ಕಮಗಳೂರು: ನಕ್ಸಲ್ ಶರಣಾಗತಿ ಹಿನ್ನೆಲೆ, ಚಿಕ್ಕಮಗಳೂರು ಎಸ್ಪಿ ಕಚೇರಿಗೆ ನಕ್ಸಲ್ ರವೀಂದ್ರ ಆಗಮಿಸಿದ್ದು, ಎಸ್ಪಿ ವಿಕ್ರಂ ಅಮಟೆ ಮುಂದೆ ಶರಣಾಗಿದ್ದಾರೆ.

ನಾಗರೀಕ ಶಾಂತಿಗಾಗಿ ವೇದಿಕೆ ಸದಸ್ಯರ ಜೊತೆ ಆಗಮಿಸಿದ ರವೀಂದ್ರ, ಎಸ್ಪಿ ವಿಕ್ರಂ ಅಮಟೆ ಮುಂದೆ ಹಾಜರಾಗಿದ್ದು, ಒಂದೂವರೆ ದಶಕದ ನಕ್ಸಲ್ ಹೋರಾಟಕ್ಕೆ ವಿದಾಯ ಹೇಳಿದ್ದು, ಮುಖ್ಯವಾಹಿನಿಗೆ ಆಗಮಿಸಿದ್ದಾರೆ.

ಜಿಲ್ಲೆಯಲ್ಲಿ ರವೀಂದ್ರ ಮೇಲೆ 20 ಕೇಸ್ ಗಳಿವೆ, ಒಂದೂವರೆ ದಶಕದಿಂದ ಭೂಗತರಾಗಿದ್ದ ರವೀಂದ್ರ ಇದೀಗ ನಕ್ಸಲ್ ಶರಣಾಗತಿಯ ಭಾಗವಾಗಿ ಪೊಲೀಸರಿಗೆ ಶರಣಾಗಿದ್ದಾರೆ.

ಲತಾ ಮುಂಡಗಾರು, ವನಜಾಕ್ಷಿ ಬಾಳೆಹೊಳೆ, ಸುಂದರಿ ಕುತ್ಲೂರು, ಮಾರೆಪ್ಪ ಅರೋಲಿ, ಕೆ.ವಸಂತ(ತಮಿಳುನಾಡು), ಟಿ.ಎನ್.ಜಿಷಾ(ಕೇರಳ) ಒಳಗೊಂಡ ತಂಡ ಜ.8ರಂದು ಮುಖ್ಯವಾಹಿನಿಗೆ ಬಂದಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲೇ ಎಲ್ಲರನ್ನು ಸ್ವಾಗತಿಸಲಾಗಿತ್ತು. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ತಂಡದಿಂದ ಬೇರ್ಪಟ್ಟಿದ್ದ ಕೋಟೆಹೊಂಡ ರವೀಂದ್ರ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಅವರನ್ನು ಸಂಪರ್ಕಿಸುವ ಪ್ರಯತ್ನವನ್ನು ಶಾಂತಿಗಾಗಿ ನಾಗರಿಕ ವೇದಿಕೆ ಮತ್ತು ನಕ್ಸಲ್ ಶರಣಾಗತಿ ಸಮಿತಿ ಮಾಡಿದೆ.

Related posts

ಬಂಟರ ಯಾನೆನಾಡವರ ಸಂಘ ಬೆಳ್ತಂಗಡಿ ನೇತೃತ್ವದಲ್ಲಿ: ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ – ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ. ವಿಶ್ವ ಬಂಟರ ಮಾಹಿತಿ ಕೋಶ’ಕ್ಕಾಗಿ ಕುಟುಂಬದ ಸಮಗ್ರ ಮಾಹಿತಿ ಸಂಗ್ರಹ: ಅಜಿತ್ ಕುಮಾರ್ ರೈ ಮಾಲಾಡಿ

Suddi Udaya

ಬೆಳ್ತಂಗಡಿ ತಹಶೀಲ್ದಾರ್ ಆಗಿ ಮತ್ತೆ ಪೃಥ್ವಿ ಸಾನಿಕಂ ನೇಮಕ

Suddi Udaya

ಕಕ್ಯಪದವು ನಡುಕೇರ್ಯ ತರವಾಡು ಮನೆಯಲ್ಲಿ ನಾಗತಂಬಿಲ ದೈವಗಳಿಗೆ ಪರ್ವ ಸೇವೆ, ಅಗೇಲು ಸೇವೆ , ಸನ್ಮಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗೊರೂರು ರಾಮಸ್ವಾಮಿ ಅಯ್ಯಂಗಾರ್ ಸಂಸ್ಮರಣಾರ್ಥ ಗೊರೂರು ಕಂಡ ಗಾಂಧಿ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಕುಂಠಿನಿ ಮುಹಿಯ್ಯುದ್ಧೀನ್ ಅರಬಿಕ್ ಮದರಸಕ್ಕೆ ಪಬ್ಲಿಕ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಕನ್ನಡ ರಾಜ್ಯೋತ್ಸವದ ಅಂಗವಾಗಿ ಧರ್ಮಸ್ಥಳ ಕೆ.ಎಸ್.ಆರ್.ಟಿ.ಸಿ ಡಿಪ್ಪೊದಲ್ಲಿ ಉಚಿತ ರಕ್ತದೊತ್ತಡ , ಮಧುಮೇಹ ಪರೀಕ್ಷೆ

Suddi Udaya
error: Content is protected !!