July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬ್ರೈಟ್ ಇಂಡಿಯಾ, ಮದ್ದಡ್ಕ ವತಿಯಿಂದ ವಿಕಲಚೇತನರಿಗೆ ಸಾಧನಾ ಸಲಕರಣೆಗಳ ವಿತರಣೆ

ಉಜಿರೆ: ವಿಕಲಾಂಗರಲ್ಲಿ ವಿಶೇಷಚೇತನ ಮತ್ತು ಪ್ರತಿಭೆ ಇದ್ದು, ತಮಗೆ ಸಿಗುವ ಅವಕಾಶಗಳು ಮತ್ತು ಸೌಲಭ್ಯಗಳ ಸದುಪಯೋಗ ಪಡೆದು ಉನ್ನತ ಸಾಧನೆ ಮಾಡಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್‌ಕುಮಾರ್, ಎಸ್.ಎಸ್. ಹೇಳಿದರು.


ಅವರು ಫೆ.1 ರಂದು ಉಜಿರೆಯಲ್ಲಿ ಟಿ.ಬಿ. ಆಸ್ಪತ್ರೆ ಆವರಣದಲ್ಲಿರುವ ಜಾಗೃತಿಸೌಧದಲ್ಲಿ ಮದ್ದಡ್ಕದಲ್ಲಿರುವ ಬ್ರೈಟ್ ಇಂಡಿಯಾ ಸಂಸ್ಥೆಯ ಆಶ್ರಯದಲ್ಲಿ ವಿಕಲಚೇತನರಿಗೆ ಸಾಧನಾ ಸಲಕರಣೆಗಳನ್ನು ವಿತರಿಸಿ ಶುಭ ಹಾರೈಸಿದರು.


ವಿಕಲಚೇತನರು ಒಲಿಂಪಿಕ್ಸ್ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಉನ್ನತ ಸಾಧನೆ ಮಾಡಿದ್ದಾರೆ. ಕೀಳರಿಮೆ ತೊರೆದು ಬದುಕಿನಲ್ಲಿ ನವಚೈತನ್ಯದಿಂದ ಧೈರ್ಯ ಮತ್ತು ಆತ್ಮವಿಶ್ವಾಸದೊಂದಿಗೆ ಮನೆಯಲ್ಲಿ ಹಾಗೂ ಸಮಾಜದಲ್ಲಿ  ಸ್ವಾವಲಂಬಿ ಜೀವನ ನಡೆಸಬೇಕು ಎಂದು ಅವರು ಸಲಹೆ ನೀಡಿದರು.


ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ಹೆಗ್ಗಡೆಯವರ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ “ವಾತ್ಸಲ್ಯ”  ಕಾರ್ಯಕ್ರಮದಡಿಯಲ್ಲಿ ವಾತ್ಸಲ್ಯ ಕಿಟ್‌ಗಳ ಮೂಲಕ ಬಟ್ಟೆ, ಪೌಷ್ಠಿಕಆಹಾರ ಮೊದಲಾದ ಮೂಲಭೂತ ಸೌಲಭ್ಯಗನ್ನು ಒದಗಿಸಲಾಗಿದೆ. ಇಪ್ಪತ್ತು ಸಾವಿರ ನಿರ್ಗತಿಕರಿಗೆ ಮಾಸಾಶನ ನೀಡಲಾಗುತ್ತಿದೆ ಎಂದರು.
ಸಾಧನಾ ಸಲಕರಣೆಗಳ ವಿತರಣೆ: ಗಾಲಿಕುರ್ಚಿ: 8, ಊರುಗೋಲು: 6, ವಾಕರ್:6, ಎಲ್ಬೊ ಕ್ಲಚ್: 9 ವಾಟರ್‌ಬೆಡ್: 4, ಒಟ್ಟು 33 ಮಂದಿ ವಿಕಲಚೇತನರಿಗೆ ಸಾಧನಾಸಲಕರಣೆಗಳನ್ನು ವಿತರಿಸಲಾಯಿತು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಕಾರ್ಯದರ್ಶಿ ವಿವೇಕ್‌ ಪಾಯಸ್, ಬ್ರೈಟ್ ಇಂಡಿಯಾದ ಸದಸ್ಯ ಜಯಶಂಕರ ಶರ್ಮಾ ಉಪಸ್ಥಿತರಿದ್ದರು.


ಬ್ರೈಟ್ ಇಂಡಿಯಾದ ಕೋಶಾಧಿಕಾರಿ ಶಿಶುಪಾಲ ಪೂವಣಿ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ವಜ್ರನಾಭಯ್ಯ ಧನ್ಯವಾದವಿತ್ತರು.

Related posts

ಜೂ.7: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಉಚಿತ ವೈದ್ಯಕೀಯ, ನೇತ್ರ ತಪಾಸಣಾ, ದಂತಾ ಚಿಕಿತ್ಸಾ ಮತ್ತು ರಕ್ತದಾನ ಶಿಬಿರ

Suddi Udaya

ಗುರುವಾಯನಕೆರೆ: ಅಗಲಿದ ದಿ| ನಾರಾಯಣ ಆಚಾರ್ಯ ರವರ ಮನೆಗೆ ಶಾಸಕ ಹರೀಶ್ ಪೂಂಜ ಹಾಗೂ ಎಂಎಲ್ಸಿ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ, ಸಾಂತ್ವಾನ

Suddi Udaya

ರಾಷ್ಟ್ರ ಪ್ರಶಸ್ತಿ ವಿಜೇತ, ನಿರ್ದೇಶಕ ಚೇತನ್ ಮುಂಡಾಡಿ ರವರ ಬಹುಭಾಷಾ ಚಿತ್ರಕ್ಕೆ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಭವನದಲ್ಲಿ ಆಡಿಷನ್

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಐಸಿಯು ವೆಂಟಿಲೇಟರ್‌ಗಳ ಉದ್ಘಾಟನೆ

Suddi Udaya

ಜೈನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಜೈನ ಜಾತಿ ಮತ್ತು ಧರ್ಮಕ್ಕೆ ಅಪಮಾನ ಆರೋಪ ಮಹೇಶ್ ಶೆಟ್ಟಿ ತಿಮರೋಡಿ ಹಾಗೂರಾಜು ಶೆಟ್ಟಿ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಮೊಗ್ರು: ಯುವ ಕೃಷಿಕ ದೇವಿಪ್ರಸಾದ್ ಗೌಡ ಕಡಮ್ಮಾಜೆ ರವರಿಗೆ “ಉತ್ತಮ ಅಡಿಕೆ ಕೃಷಿಕ ಪ್ರಶಸ್ತಿ”

Suddi Udaya
error: Content is protected !!