25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು ಶಾಲೆಯ ಹಿರಿಯ ಸಹಶಿಕ್ಷಕಿ ನಿವೃತ್ತ ಶ್ರೀಮತಿ ರೆಜಿನಾ ಡಿಸಿಲ್ವ ರವರಿಗೆ ಬೀಳ್ಕೊಡುಗೆ ಸಮಾರಂಭ ಮತ್ತು ಗುರುವಂದನಾ ಕಾರ್ಯಕ್ರಮ

ಕೊಯ್ಯೂರು : ಕೊಯ್ಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 9ವರ್ಷ 3ತಿಂಗಳುಗಳ ಕಾಲ ಸಹಶಿಕ್ಷಕರಾಗಿ ಒಟ್ಟು 29 ವರ್ಷಗಳ ಕಾಲ ಶಿಕ್ಷಣ ಇಲಾಖೆಯಲ್ಲಿ ಸಹಶಿಕ್ಷಕಿಯಾಗಿ ಉತ್ತಮ ರೀತಿಯಲ್ಲಿ ಕರ್ತವ್ಯವನ್ನು ನಿರ್ವಹಿಸಿ ಜ.31ರಂದು ವೃತ್ತಿಯಿಂದ ನಿವೃತ್ತಿ ಹೊಂದಿದ ಶ್ರೀಮತಿ ರೆಜಿನಾ ಡಿಸಿಲ್ವ ಇವರಿಗೆ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಹಿರಿಯ ವಿದ್ಯಾರ್ಥಿ ಸಂಘ, ಪೋಷಕರು ಮತ್ತು ಶಾಲಾ ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ಪರವಾಗಿ ಬೀಳ್ಕೊಡುಗೆ ಸಮಾರಂಭ ಮತ್ತು ಗುರುವಂದನಾ ಕಾರ್ಯಕ್ರಮವು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಪುರಂದರ ಗೌಡ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ವಾರಿಜ ಸೋಮಶೇಖರ್, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಳ್ತಂಗಡಿ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಸುರೇಶ್ ಮಾಚಾರ್, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಶ್ಯಾಮಲಾ, ಶಾಲಾಭಿವೃದ್ಧಿ ಸಮಿತಿಯ ಮಾಜಿ ಅಧ್ಯಕ್ಷ ಡೀಕಯ್ಯ ಪೂಜಾರಿ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ನೋಣಯ್ಯ ಪೂಜಾರಿ, ಕಾರ್ಯದರ್ಶಿ ವಿನಾಯಕ ಬೆದ್ರಲ್ಕೆ, ಬೆಳ್ತಂಗಡಿ ಕ್ಲಸ್ಟರ್ ನ ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರುಗಳಾದ ಜಗನ್ನಾಥ, ಬಲಿರಾಮ ಲಮಾಣಿ, ಶ್ರೀಮತಿ ವಸಂತಿ, ಯೋಗೀಶ್ ಮತ್ತು ಶಾಲಾ ಸಹಶಿಕ್ಷಕರು, ಶಾಲಾ ಅಕ್ಷರ ದಾಸೋಹ ಸಿಬ್ಬಂದಿಗಳು, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಪೋಷಕರು ಉಪಸ್ಥಿತರಿದ್ದರು.

Related posts

ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಿಗೆ ಷೂ ಎಸೆದ ಪ್ರಕರಣ ತನಿಖೆ ನಡೆಸಿ ಆರೋಪಿಯ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಿ: ರಕ್ಷಿತ್ ಶಿವರಾಂ

Suddi Udaya

ಚಾರ್ಮಾಡಿ ಸಾರ್ವಜನಿಕ ಹಿಂದೂ ರುದ್ರ ಭೂಮಿಯ ಅಭಿವೃದ್ಧಿಗೆ ಸಹಕಾರ ನೀಡುವುದಾಗಿ ಶಾಸಕ ಹರೀಶ್ ಪೂಂಜರಿಂದ ಭರವಸೆ

Suddi Udaya

ನಾಲ್ಕೂರಿನಲ್ಲಿ ಹುಲ್ಲು ಕತ್ತರಿಸುವಾಗ ನಡೆದ ಆಕಸ್ಮಿಕ ಘಟನೆ ಯಂತ್ರಕ್ಕೆ ಸಿಲುಕಿದ ವ್ಯಕ್ತಿಯ ಎರಡು ಕೈಗಳುಒಂದು ಕೈಯ ಅಂಗೈ ತುಂಡು, ಇನ್ನೊಂದು ಕೈಯ ಬೆರಳು ಕಟ್

Suddi Udaya

ನಾರಾವಿ ವಲಯ ಶ್ರೀ ಕ್ಷೇ.ಧ. ಗ್ರಾ. ಯೋಜನೆಯಿಂದ ಜನಮಂಗಲ ಕಾರ್ಯಕ್ರಮದಡಿ ಔಟ್ ಸೈಡ್ ವೀಲ್ ಚೇರ್ ವಿತರಣೆ

Suddi Udaya

ದೆಹಲಿಯ ಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗ ಸದಸ್ಯ ಧನ್ಯ ಕುಮಾರ್ ಜಿನ್ನಪ್ಪ ಗುಂಡೆ ಭೇಟಿ: ಅಲ್ಪಸಂಖ್ಯಾತ ಜೈನ ಧರ್ಮಿಯರ ಅಭಿವೃದ್ಧಿಯ ಬಗ್ಗೆ ಹಾಗೂ ಜೈನ ಅಭಿವೃದ್ಧಿ ನಿಗಮ ರಚಿಸುವ ಬಗ್ಗೆ ಚರ್ಚೆ

Suddi Udaya

ನಂದಿನಿ ಹಾಲಿನ ದರ 4 ರೂ. ಏರಿಕೆ

Suddi Udaya
error: Content is protected !!