37.2 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೆಕ್ಕಾರು: ಬಾಜಾರು ಓಂ ರಾಮ್ ಫ್ರೆಂಡ್ಸ್ ಆಶ್ರಯದಲ್ಲಿ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ

ತೆಕ್ಕಾರು: ಓಂ ರಾಮ್ ಫ್ರೆಂಡ್ಸ್ ಬಾಜಾರು ಆಶ್ರಯದಲ್ಲಿ ಶ್ರೀ ರಾಮ ದುರ್ಗಾ ಪರಮೇಶ್ವರಿ ಭಜನಾ ಮಂದಿರ ಬಾಜಾರು ಇವರ ಸಹಕಾರದಲ್ಲಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಇದರ ಸಹಭಾಗಿತ್ವದಲ್ಲಿ ಪ್ರಥಮ ವರ್ಷದ ಹೊನಲು ಬೆಳಕಿನ ಪುರುಷರ ಪ್ರೊ ಮಾದರಿಯ 60ಕೆಜಿ ವಿಭಾಗದ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟದ ಉದ್ಘಾಟನಾ ಕಾರ್ಯಕ್ರಮ ತೆಕ್ಕಾರು ಮರಮಗುತ್ತು ದಿವಂಗತ ಮರಮ ಲಿಂಗಪ್ಪ ಪೂಜಾರಿ ಸಭಾ ವೇದಿಕೆಯಲ್ಲಿ ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರು ಊರಿನ ಹಿರಿಯರಾದ ತುಕಾರಾಮ ನಾಯಕ್ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿದರು.

ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಗ್ರಾಮದ ಹಾಗೂ ನೆರೆಯ ಗ್ರಾಮದವರನ್ನ ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಓಂ ರಾಮ್ ಫ್ರೆಂಡ್ಸ್ ನ ಅಧ್ಯಕ್ಷ ಪ್ರಕಾಶ್ ಕುಮಾರ್ ವಂದಾಯ ವಹಿಸಿದ್ದರು,
ಮುಖ್ಯ ಅಭ್ಯಾಗತರಾಗಿ ಅಜಿಲಮೊಗರು ಮಸೀದಿಯ ಅಲ್ ಹಾಜಿ ಅಬ್ದುಲ್ ಹಮೀದ್ ಮದನಿ ಮಾಜಿ ಖತೀಬರು‌. ರೆಹಾನತ್, ಗ್ರಾಮ ಪಂಚಾಯತ್ ಅಧ್ಯಕ್ಷರು ತೆಕ್ಕಾರು, ಜನಾರ್ಧನ ಪೂಜಾರಿ ಮರಮ, ಪ್ರಶಾಂತ್ ವಕೀಲರು ಬಾಜಾರ, ಮಂಜುನಾಥ್ ಸಾಲ್ಯಾನ್, ಅಬ್ದುಲ್ ರಝಾಕ್, ಲಕ್ಷ್ಮಣ್ ಬಟ್ರೆಬೈಲು, ರಾಘವೇಂದ್ರ ಅಡಪ,ಸಂಪತ್ ಕುಮಾರ್ ಶೆಟ್ಟಿ ಶುಭಹಾರೈಸಿದರು, ಸಂಜೀವ ಪೂಜಾರಿ ನೇಲ್ಯಪಲ್ಕೆ, ಪ್ರಶಾಂತ್ ಮೈರ ‌, ತಿಮ್ಮಪ್ಪ ಪೂಜಾರಿ ಬಾಜಾರು, ಪುರುಷೋತ್ತಮ ಮಜಲು, ಸಾಂತಪ್ಪ ಹಟದಡ್ಕ, ಕೃಷ್ಣ ಐತಾಳ್, ಯಜ್ಞೆಶ್ವರ್ ಮತ್ತಿತರರು ಉಪಸ್ಥಿತರಿದ್ದರು.

ಬೆಳಿಗ್ಗೆ ಭಜನೆ, ಮಹಿಳೆಯರಿಗೆ , ಪುರುಷರ, ಮಕ್ಕಳಿಗೆ ವಿವಿಧ ಕ್ರೀಡೆ ನಡೆಯಿತು.ದೇವಿ ಪ್ರಸಾದ್ ನಿರೂಪಿಸಿ, ತಿಲಕ್ ರಾಜ್ ವಂದಿಸಿದರು. ಮರುದಿನ ಬೆಳಿಗ್ಗೆ ತನಕ ಕಬಡಿ ಪಂದ್ಯಾಟ ರೋಚಕವಾಗಿ ಜರಗಿತು

Related posts

ಎ.9: ಮಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ವಿರುದ್ಧ ಜನಕ್ರೋಶ ಯಾತ್ರೆ

Suddi Udaya

ದ.ಕ. ಜಿಲ್ಲೆಯಲ್ಲಿ ಗಣೇಶ ಚತುರ್ಥಿಗೆ ಸೆ.19 ರಂದು ಸರ್ಕಾರಿ ರಜೆ

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳ: ಸೇವೆ ಬಯಲಾಟ ಪ್ರದರ್ಶನ

Suddi Udaya

ಉಜಿರೆ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ವತಿಯಿಂದ ಅಂತರ್ ಜಿಲ್ಲಾ ಪುರುಷರ ವಾಲಿಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ

Suddi Udaya

ಮಿತ್ತಬಾಗಿಲು: ವಿಷಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya
error: Content is protected !!