22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬ್ರೈಟ್ ಇಂಡಿಯಾ, ಮದ್ದಡ್ಕ ವತಿಯಿಂದ ವಿಕಲಚೇತನರಿಗೆ ಸಾಧನಾ ಸಲಕರಣೆಗಳ ವಿತರಣೆ

ಉಜಿರೆ: ವಿಕಲಾಂಗರಲ್ಲಿ ವಿಶೇಷಚೇತನ ಮತ್ತು ಪ್ರತಿಭೆ ಇದ್ದು, ತಮಗೆ ಸಿಗುವ ಅವಕಾಶಗಳು ಮತ್ತು ಸೌಲಭ್ಯಗಳ ಸದುಪಯೋಗ ಪಡೆದು ಉನ್ನತ ಸಾಧನೆ ಮಾಡಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್‌ಕುಮಾರ್, ಎಸ್.ಎಸ್. ಹೇಳಿದರು.


ಅವರು ಫೆ.1 ರಂದು ಉಜಿರೆಯಲ್ಲಿ ಟಿ.ಬಿ. ಆಸ್ಪತ್ರೆ ಆವರಣದಲ್ಲಿರುವ ಜಾಗೃತಿಸೌಧದಲ್ಲಿ ಮದ್ದಡ್ಕದಲ್ಲಿರುವ ಬ್ರೈಟ್ ಇಂಡಿಯಾ ಸಂಸ್ಥೆಯ ಆಶ್ರಯದಲ್ಲಿ ವಿಕಲಚೇತನರಿಗೆ ಸಾಧನಾ ಸಲಕರಣೆಗಳನ್ನು ವಿತರಿಸಿ ಶುಭ ಹಾರೈಸಿದರು.


ವಿಕಲಚೇತನರು ಒಲಿಂಪಿಕ್ಸ್ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಉನ್ನತ ಸಾಧನೆ ಮಾಡಿದ್ದಾರೆ. ಕೀಳರಿಮೆ ತೊರೆದು ಬದುಕಿನಲ್ಲಿ ನವಚೈತನ್ಯದಿಂದ ಧೈರ್ಯ ಮತ್ತು ಆತ್ಮವಿಶ್ವಾಸದೊಂದಿಗೆ ಮನೆಯಲ್ಲಿ ಹಾಗೂ ಸಮಾಜದಲ್ಲಿ  ಸ್ವಾವಲಂಬಿ ಜೀವನ ನಡೆಸಬೇಕು ಎಂದು ಅವರು ಸಲಹೆ ನೀಡಿದರು.


ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ಹೆಗ್ಗಡೆಯವರ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ “ವಾತ್ಸಲ್ಯ”  ಕಾರ್ಯಕ್ರಮದಡಿಯಲ್ಲಿ ವಾತ್ಸಲ್ಯ ಕಿಟ್‌ಗಳ ಮೂಲಕ ಬಟ್ಟೆ, ಪೌಷ್ಠಿಕಆಹಾರ ಮೊದಲಾದ ಮೂಲಭೂತ ಸೌಲಭ್ಯಗನ್ನು ಒದಗಿಸಲಾಗಿದೆ. ಇಪ್ಪತ್ತು ಸಾವಿರ ನಿರ್ಗತಿಕರಿಗೆ ಮಾಸಾಶನ ನೀಡಲಾಗುತ್ತಿದೆ ಎಂದರು.
ಸಾಧನಾ ಸಲಕರಣೆಗಳ ವಿತರಣೆ: ಗಾಲಿಕುರ್ಚಿ: 8, ಊರುಗೋಲು: 6, ವಾಕರ್:6, ಎಲ್ಬೊ ಕ್ಲಚ್: 9 ವಾಟರ್‌ಬೆಡ್: 4, ಒಟ್ಟು 33 ಮಂದಿ ವಿಕಲಚೇತನರಿಗೆ ಸಾಧನಾಸಲಕರಣೆಗಳನ್ನು ವಿತರಿಸಲಾಯಿತು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಕಾರ್ಯದರ್ಶಿ ವಿವೇಕ್‌ ಪಾಯಸ್, ಬ್ರೈಟ್ ಇಂಡಿಯಾದ ಸದಸ್ಯ ಜಯಶಂಕರ ಶರ್ಮಾ ಉಪಸ್ಥಿತರಿದ್ದರು.


ಬ್ರೈಟ್ ಇಂಡಿಯಾದ ಕೋಶಾಧಿಕಾರಿ ಶಿಶುಪಾಲ ಪೂವಣಿ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ವಜ್ರನಾಭಯ್ಯ ಧನ್ಯವಾದವಿತ್ತರು.

Related posts

ತೆಕ್ಕಾರು ಶ್ರೀ ಕ್ಷೇತ್ರ ದೇವರಗುಡ್ಡೆ ಗೋಪಾಲಕೃಷ್ಣನಿಗೆ ಬ್ರಹ್ಮಕಲಶೋತ್ಸವ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಹುಟ್ಟುಹಬ್ಬ ಹಿನ್ನಲೆ ಬಂದಾರು ಶಾಲೆಯ ವಿದ್ಯಾರ್ಥಿಗಳಿಂದ ಲಕ್ಷ್ಮೀ ಗ್ರೂಪ್ಸ್ ಕಂಪನಿಯಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ

Suddi Udaya

ಸುರತ್ಕಲ್: ಶ್ರೀನಿವಾಸ ಆಸ್ಪತ್ರೆಯಲ್ಲಿ ಪತ್ರಕರ್ತರಿಗೆ ಹಾಗೂ ಕುಟುಂಬ ಸದಸ್ಯರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರ

Suddi Udaya

ಶರತ್ ಮಡಿವಾಳ ಸ್ಮಾರಕಕ್ಕೆ ಪುಷ್ಪ ನಮನ

Suddi Udaya

ನಡ ಸರಕಾರಿ ಪ್ರೌಢಶಾಲೆ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!