34.1 C
ಪುತ್ತೂರು, ಬೆಳ್ತಂಗಡಿ
February 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು ಶಾಲೆಯ ಹಿರಿಯ ಸಹಶಿಕ್ಷಕಿ ನಿವೃತ್ತ ಶ್ರೀಮತಿ ರೆಜಿನಾ ಡಿಸಿಲ್ವ ರವರಿಗೆ ಬೀಳ್ಕೊಡುಗೆ ಸಮಾರಂಭ ಮತ್ತು ಗುರುವಂದನಾ ಕಾರ್ಯಕ್ರಮ

ಕೊಯ್ಯೂರು : ಕೊಯ್ಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 9ವರ್ಷ 3ತಿಂಗಳುಗಳ ಕಾಲ ಸಹಶಿಕ್ಷಕರಾಗಿ ಒಟ್ಟು 29 ವರ್ಷಗಳ ಕಾಲ ಶಿಕ್ಷಣ ಇಲಾಖೆಯಲ್ಲಿ ಸಹಶಿಕ್ಷಕಿಯಾಗಿ ಉತ್ತಮ ರೀತಿಯಲ್ಲಿ ಕರ್ತವ್ಯವನ್ನು ನಿರ್ವಹಿಸಿ ಜ.31ರಂದು ವೃತ್ತಿಯಿಂದ ನಿವೃತ್ತಿ ಹೊಂದಿದ ಶ್ರೀಮತಿ ರೆಜಿನಾ ಡಿಸಿಲ್ವ ಇವರಿಗೆ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಹಿರಿಯ ವಿದ್ಯಾರ್ಥಿ ಸಂಘ, ಪೋಷಕರು ಮತ್ತು ಶಾಲಾ ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ಪರವಾಗಿ ಬೀಳ್ಕೊಡುಗೆ ಸಮಾರಂಭ ಮತ್ತು ಗುರುವಂದನಾ ಕಾರ್ಯಕ್ರಮವು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಪುರಂದರ ಗೌಡ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ವಾರಿಜ ಸೋಮಶೇಖರ್, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಳ್ತಂಗಡಿ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಸುರೇಶ್ ಮಾಚಾರ್, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಶ್ಯಾಮಲಾ, ಶಾಲಾಭಿವೃದ್ಧಿ ಸಮಿತಿಯ ಮಾಜಿ ಅಧ್ಯಕ್ಷ ಡೀಕಯ್ಯ ಪೂಜಾರಿ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ನೋಣಯ್ಯ ಪೂಜಾರಿ, ಕಾರ್ಯದರ್ಶಿ ವಿನಾಯಕ ಬೆದ್ರಲ್ಕೆ, ಬೆಳ್ತಂಗಡಿ ಕ್ಲಸ್ಟರ್ ನ ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರುಗಳಾದ ಜಗನ್ನಾಥ, ಬಲಿರಾಮ ಲಮಾಣಿ, ಶ್ರೀಮತಿ ವಸಂತಿ, ಯೋಗೀಶ್ ಮತ್ತು ಶಾಲಾ ಸಹಶಿಕ್ಷಕರು, ಶಾಲಾ ಅಕ್ಷರ ದಾಸೋಹ ಸಿಬ್ಬಂದಿಗಳು, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಪೋಷಕರು ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ.ಮಂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ಪ್ರಮುಖ 2025: ಜಿಲ್ಲಾಮಟ್ಟದ ವಸ್ತುಪ್ರದರ್ಶನ ಹಾಗೂ ಅಂತರ ಕಾಲೇಜು ಉತ್ಸವ

Suddi Udaya

ಶ್ರೀ ಸದಾಶಿವೇಶ್ವರ ಭಜನಾ ಮಂಡಳಿಯಲ್ಲಿ ಭಜನಾ ಪರಿಷತ್ತು ಕಾರ್ಯದರ್ಶಿಯಿಂದ ಅಹವಾಲು ಸ್ವೀಕಾರ

Suddi Udaya

ಭಾರತೀಯ ವಿಜ್ಞಾನ ಮತ್ತು ಎಂಜಿನಿಯರಿಂಗ್ ಮೇಳ (ಐಎನ್‌ಎಸ್‌ಇಎಫ್) 2024-25″ – ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ಅಧೀಶ್ ಬಿ.ಸಿ ಮತ್ತು ಆಲಾಪ್.ಎಂ ಗೆ ಚಿನ್ನದ ಪದಕ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ.

Suddi Udaya

ಪಡಂಗಡಿ:ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕರೆ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶ

Suddi Udaya

ಮರೋಡಿ ಗ್ರಾ.ಪಂನಿಂದ ಪೆರಾಡಿಯಲ್ಲಿ ನಿರ್ಮಿಸಲಾದ ರೂ.5.60 ಲಕ್ಷ ವೆಚ್ಚದ ಸೋಲಾರ್ ದೀಪ ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಸಿರುವಾಣಿ ಹೊರೆಕಾಣಿಕೆ ಮತ್ತು ದೈವ-ದೇವರ ಆಭರಣಗಳ ವೈಭವಯುತ ಮೆರವಣಿಗೆ ಶಾಸಕ ಹರೀಶ್ ಪೂಂಜರವರಿಂದ ಹಾಗೂ ಮುಂಬೈ ಉದ್ಯಮಿ ಸುರೇಶ್ ಪೂಜಾರಿಯವರಿಂದ ಚಾಲನೆ

Suddi Udaya
error: Content is protected !!