24.4 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೆಕ್ಕಾರು: ಬಾಜಾರು ಓಂ ರಾಮ್ ಫ್ರೆಂಡ್ಸ್ ಆಶ್ರಯದಲ್ಲಿ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ

ತೆಕ್ಕಾರು: ಓಂ ರಾಮ್ ಫ್ರೆಂಡ್ಸ್ ಬಾಜಾರು ಆಶ್ರಯದಲ್ಲಿ ಶ್ರೀ ರಾಮ ದುರ್ಗಾ ಪರಮೇಶ್ವರಿ ಭಜನಾ ಮಂದಿರ ಬಾಜಾರು ಇವರ ಸಹಕಾರದಲ್ಲಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಇದರ ಸಹಭಾಗಿತ್ವದಲ್ಲಿ ಪ್ರಥಮ ವರ್ಷದ ಹೊನಲು ಬೆಳಕಿನ ಪುರುಷರ ಪ್ರೊ ಮಾದರಿಯ 60ಕೆಜಿ ವಿಭಾಗದ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟದ ಉದ್ಘಾಟನಾ ಕಾರ್ಯಕ್ರಮ ತೆಕ್ಕಾರು ಮರಮಗುತ್ತು ದಿವಂಗತ ಮರಮ ಲಿಂಗಪ್ಪ ಪೂಜಾರಿ ಸಭಾ ವೇದಿಕೆಯಲ್ಲಿ ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರು ಊರಿನ ಹಿರಿಯರಾದ ತುಕಾರಾಮ ನಾಯಕ್ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿದರು.

ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಗ್ರಾಮದ ಹಾಗೂ ನೆರೆಯ ಗ್ರಾಮದವರನ್ನ ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಓಂ ರಾಮ್ ಫ್ರೆಂಡ್ಸ್ ನ ಅಧ್ಯಕ್ಷ ಪ್ರಕಾಶ್ ಕುಮಾರ್ ವಂದಾಯ ವಹಿಸಿದ್ದರು,
ಮುಖ್ಯ ಅಭ್ಯಾಗತರಾಗಿ ಅಜಿಲಮೊಗರು ಮಸೀದಿಯ ಅಲ್ ಹಾಜಿ ಅಬ್ದುಲ್ ಹಮೀದ್ ಮದನಿ ಮಾಜಿ ಖತೀಬರು‌. ರೆಹಾನತ್, ಗ್ರಾಮ ಪಂಚಾಯತ್ ಅಧ್ಯಕ್ಷರು ತೆಕ್ಕಾರು, ಜನಾರ್ಧನ ಪೂಜಾರಿ ಮರಮ, ಪ್ರಶಾಂತ್ ವಕೀಲರು ಬಾಜಾರ, ಮಂಜುನಾಥ್ ಸಾಲ್ಯಾನ್, ಅಬ್ದುಲ್ ರಝಾಕ್, ಲಕ್ಷ್ಮಣ್ ಬಟ್ರೆಬೈಲು, ರಾಘವೇಂದ್ರ ಅಡಪ,ಸಂಪತ್ ಕುಮಾರ್ ಶೆಟ್ಟಿ ಶುಭಹಾರೈಸಿದರು, ಸಂಜೀವ ಪೂಜಾರಿ ನೇಲ್ಯಪಲ್ಕೆ, ಪ್ರಶಾಂತ್ ಮೈರ ‌, ತಿಮ್ಮಪ್ಪ ಪೂಜಾರಿ ಬಾಜಾರು, ಪುರುಷೋತ್ತಮ ಮಜಲು, ಸಾಂತಪ್ಪ ಹಟದಡ್ಕ, ಕೃಷ್ಣ ಐತಾಳ್, ಯಜ್ಞೆಶ್ವರ್ ಮತ್ತಿತರರು ಉಪಸ್ಥಿತರಿದ್ದರು.

ಬೆಳಿಗ್ಗೆ ಭಜನೆ, ಮಹಿಳೆಯರಿಗೆ , ಪುರುಷರ, ಮಕ್ಕಳಿಗೆ ವಿವಿಧ ಕ್ರೀಡೆ ನಡೆಯಿತು.ದೇವಿ ಪ್ರಸಾದ್ ನಿರೂಪಿಸಿ, ತಿಲಕ್ ರಾಜ್ ವಂದಿಸಿದರು. ಮರುದಿನ ಬೆಳಿಗ್ಗೆ ತನಕ ಕಬಡಿ ಪಂದ್ಯಾಟ ರೋಚಕವಾಗಿ ಜರಗಿತು

Related posts

ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಶಾಂತಿವನ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳ, ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಆಶ್ರಯದಲ್ಲಿ, ನಡೆಯುವ ಯೋಗಾಸನ, ಪ್ರಾಣಾಯಾಮ ಧ್ಯಾನ ಶಿಬಿರದ ಪೂರ್ವಭಾವಿ ಸಭೆ

Suddi Udaya

ಮತ್ತೆ ಬಂದಿದೆ ಮುಳಿಯ ಜ್ಯುವೆಲ್ಸ್ ಚಿನ್ನೋತ್ಸವ, ನ.10ರಿಂದ 30ರ ವರೆಗೆ: ಪುತ್ತೂರು ಮತ್ತು ಬೆಳ್ತಂಗಡಿಯ ಮುಳಿಯ ಜ್ಯುವೆಲ್ಸ್‌ನಲ್ಲಿ ಮಳಿಗೆಗಳಲ್ಲಿ ಚಿನ್ನದ ಹಬ್ಬ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ : ಭಯ ಭೀತರಾದ ವಾಹನ ಸವಾರರು

Suddi Udaya

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ್ ಹೆಗ್ಡೆ ರವರಿಗೆ ಅಧ್ಯಾಪಕ ಭೂಷಣ ಪ್ರಶಸ್ತಿ

Suddi Udaya

ತಣ್ಣೀರುಪಂತ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಟೈಲರಿಂಗ್ ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya
error: Content is protected !!