25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

 ನಕ್ಸಲ್ ಚಳವಳಿಯ ಕೊನೆಯ ವ್ಯಕ್ತಿ ನಕ್ಸಲ್ ರವೀಂದ್ರ ಶರಣಾಗತಿ

ಚಿಕ್ಕಮಗಳೂರು: ನಕ್ಸಲ್ ಶರಣಾಗತಿ ಹಿನ್ನೆಲೆ, ಚಿಕ್ಕಮಗಳೂರು ಎಸ್ಪಿ ಕಚೇರಿಗೆ ನಕ್ಸಲ್ ರವೀಂದ್ರ ಆಗಮಿಸಿದ್ದು, ಎಸ್ಪಿ ವಿಕ್ರಂ ಅಮಟೆ ಮುಂದೆ ಶರಣಾಗಿದ್ದಾರೆ.

ನಾಗರೀಕ ಶಾಂತಿಗಾಗಿ ವೇದಿಕೆ ಸದಸ್ಯರ ಜೊತೆ ಆಗಮಿಸಿದ ರವೀಂದ್ರ, ಎಸ್ಪಿ ವಿಕ್ರಂ ಅಮಟೆ ಮುಂದೆ ಹಾಜರಾಗಿದ್ದು, ಒಂದೂವರೆ ದಶಕದ ನಕ್ಸಲ್ ಹೋರಾಟಕ್ಕೆ ವಿದಾಯ ಹೇಳಿದ್ದು, ಮುಖ್ಯವಾಹಿನಿಗೆ ಆಗಮಿಸಿದ್ದಾರೆ.

ಜಿಲ್ಲೆಯಲ್ಲಿ ರವೀಂದ್ರ ಮೇಲೆ 20 ಕೇಸ್ ಗಳಿವೆ, ಒಂದೂವರೆ ದಶಕದಿಂದ ಭೂಗತರಾಗಿದ್ದ ರವೀಂದ್ರ ಇದೀಗ ನಕ್ಸಲ್ ಶರಣಾಗತಿಯ ಭಾಗವಾಗಿ ಪೊಲೀಸರಿಗೆ ಶರಣಾಗಿದ್ದಾರೆ.

ಲತಾ ಮುಂಡಗಾರು, ವನಜಾಕ್ಷಿ ಬಾಳೆಹೊಳೆ, ಸುಂದರಿ ಕುತ್ಲೂರು, ಮಾರೆಪ್ಪ ಅರೋಲಿ, ಕೆ.ವಸಂತ(ತಮಿಳುನಾಡು), ಟಿ.ಎನ್.ಜಿಷಾ(ಕೇರಳ) ಒಳಗೊಂಡ ತಂಡ ಜ.8ರಂದು ಮುಖ್ಯವಾಹಿನಿಗೆ ಬಂದಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲೇ ಎಲ್ಲರನ್ನು ಸ್ವಾಗತಿಸಲಾಗಿತ್ತು. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ತಂಡದಿಂದ ಬೇರ್ಪಟ್ಟಿದ್ದ ಕೋಟೆಹೊಂಡ ರವೀಂದ್ರ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಅವರನ್ನು ಸಂಪರ್ಕಿಸುವ ಪ್ರಯತ್ನವನ್ನು ಶಾಂತಿಗಾಗಿ ನಾಗರಿಕ ವೇದಿಕೆ ಮತ್ತು ನಕ್ಸಲ್ ಶರಣಾಗತಿ ಸಮಿತಿ ಮಾಡಿದೆ.

Related posts

ನಿಡ್ಲೆ ಸರ್ಕಾರಿ ಪ್ರೌಢಶಾಲೆಗೆ ಶೇ. 88.2 ಫಲಿತಾಂಶ

Suddi Udaya

ನಿಡ್ಲೆ : ಮರ ಕಡಿಯುವ ವೇಳೆ ಆಕಸ್ಮಿಕವಾಗಿ ಮರ ಬಿದ್ದು ವ್ಯಕ್ತಿ ಸಾವು

Suddi Udaya

ಚಲನಚಿತ್ರ ತಾರೆ ಡಿಂಪಲ್‌ ಕಪಾಡಿಯಾ ಧರ್ಮಸ್ಥಳ ಭೇಟಿ

Suddi Udaya

ಮುಂಡಾಜೆ: ಅಡುಗೆ ಕೋಣೆ ಸೇರಿಕೊಂಡಿದ್ದ ನಾಗರ ಹಾವು ರಕ್ಷಣೆ

Suddi Udaya

ಕುಂಟಿನಿ ಎಸ್.ಬಿ.ಎಸ್ ಚುನಾವಣೆ: ಅಧ್ಯಕ್ಷರಾಗಿ ಮುಹಮ್ಮದ್ ಉವೈಸ್ ಆಯ್ಕೆ

Suddi Udaya

ಧಮ೯ಸ್ಥಳ ಬುರುಡೆ ಷಡ್ಯಂತ್ರ ಪ್ರಕರಣ: ವರದಿಯ ಆದೇಶ ಡಿ.29ಕ್ಕೆ ಮುಂದೂಡಿದ ನ್ಯಾಯಾಲಯ

Suddi Udaya
error: Content is protected !!