25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

ಬಳಂಜ: ಬಳಂಜ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಶೋಭಾ ರವರ ಅಧ್ಯಕ್ಷತೆಯಲ್ಲಿ ಫೆ.1 ರಂದು ಪಂಚಾಯತ್ ಸಭಾಭವನದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಬೆಳ್ತಂಗಡಿ ಮುಖ್ಯ ಪಶು ವೈದ್ಯಾಧಿಕಾರಿ ಡಾ. ವಿಶ್ವನಾಥ್ ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಪಂಚಾಯತ್ ಉಪಾಧ್ಯಕ್ಷ ಶಶಿಧರ ಶೆಟ್ಟಿ, ಕಾರ್ಯದರ್ಶಿ, ಪಂಚಾಯತ್‌ ಸದಸ್ಯರಾದ ಶ್ರೀಮತಿ ಬೇಬಿ ಎನ್., ಶ್ರೀಮತಿ ಯಕ್ಷಿತಾ ಕೆ., ಶ್ರೀಮತಿ ಸುಚಿತ್ರ ಕೆ., ಜಯ ಶೆಟ್ಟಿ, ರವೀಂದ್ರ ಬಿ ಅಮೀನ್, ಬಾಲಕೃಷ್ಣ ಪೂಜಾರಿ, ಶ್ರೀಮತಿ ಪದ್ಮಾವತಿ, ಹೇಮಂತ್, ಶ್ರೀಮತಿ ಪ್ರಸನ್ನ ಕುಮಾರಿ, ನಿಜಾಂ, ಶ್ರೀಮತಿ ಲೀಲಾ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ ಸ್ವಾಗತಿಸಿ, ಧನ್ಯವಾದವಿತ್ತರು. ಶ್ರೀಮತಿ ಶಶಿಕಲಾ ಅನುಪಾಲನ ವರದಿಯನ್ನು ವಾಚಿಸಿದರು.

Related posts

ಕರ್ನಾಟಕ ದಲಿತ ಚಳುವಳಿ ಸಂಭ್ರಮಾಚರಣಾ ಸಮಿತಿ ಬೆಳ್ತಂಗಡಿ; ಡಿ. 16 : ಬೆಳ್ತಂಗಡಿಯಲ್ಲಿ ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮಾಚರಣೆ: ವಿಚಾರ ಸಂಕಿರಣ, ಬೃಹತ್ ಮೆರವಣಿಗೆ, ಸಮಾವೇಶ, ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ವೇಣೂರು: ಲಯನ್ಸ್ ಕ್ಲಬ್ ನ ಅಧ್ಯಕ್ಷರಾಗಿ ನಿರಂಜನ್ ಕೆ.ಎಸ್, ಕಾರ್ಯದರ್ಶಿಯಾಗಿ ದಯಾನಂದ ಭಂಡಾರಿ ಆಯ್ಕೆ

Suddi Udaya

ಮೊಗ್ರು: ಅಲೆಕ್ಕಿ-ಮುಗೇರಡ್ಕ ಶ್ರೀ ರಾಮ ಶಿಶು ಮಂದಿರದ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ ಹಾಗೂ ತುಳಸಿ ಪೂಜೆ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ನೀರು ನೈರ್ಮಲ್ಯ ಸ್ವಚ್ಛ ಗ್ರಾಮ ಚಿತ್ರ ಪ್ರದರ್ಶನ ಮತ್ತು ಮಾಹಿತಿ ಕಾರ್ಯಾಗಾರ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ಮೇಲಂತಬೆಟ್ಟು ಕಾರ್ಯಕ್ಷೇತ್ರದ ವಾತ್ಸಲ್ಯ ಸದಸ್ಯೆಗೆ ಮಕ್ಕಳ ವಿದ್ಯಾಭ್ಯಾಸಕ್ಕೆ ಶಾಲಾ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ಚಾರ್ಮಾಡಿ ಕುಂಜಿರ ಗುರುಸ್ವಾಮಿ ರವರಿಗೆ ಅಯ್ಯಪ್ಪ ಭಕ್ತಬೃಂದ ಸಮಿತಿಯಿಂದ ತಾಂಬೂಲ ಕಾಣಿಕೆ

Suddi Udaya
error: Content is protected !!