ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಆಡಳಿತ ಮಂಡಳಿಯ ಮುಂದಿನ ಐದು ವರ್ಷದ ಅವಧಿಯ ನಿರ್ದೇಶಕರ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ 12 ರಲ್ಲಿ 12 ಅಭ್ಯರ್ಥಿಗಳು ಜಯಶಾಲಿಯಾಗಿದ್ದಾರೆ.
ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ ಅಭ್ಯರ್ಥಿಗಳು ಸಾಮಾನ್ಯ ಕ್ಷೇತ್ರದಿಂದ ವಸಂತ ಪಿ., ಶ್ರೀರಾಮ, ಸದಾನಂದ ಶೆಟ್ಟಿ ಜಿ., ಸುಬ್ರಹ್ಮಣ್ಯ ಕುಮಾರ್ ಅಗರ್ತ, ಮಹಿಳಾ ಮೀಸಲು ಕ್ಷೇತ್ರದಿಂದ ಉಷಾ, ಸಂಧ್ಯಾ, ಹಿಂದುಳಿದ ವರ್ಗ ಎ ಕ್ಷೇತ್ರದಿಂದ ಸುನಿಲ್ ದಡ್ಡು, ದಯಾನಂದ ಎಸ್., ಪ.ಜಾತಿ ಮೀಸಲು ಕ್ಷೇತ್ರದಿಂದ ಸುಂದರ ಕೆ., ಪ. ಪಂಗಡ ಕ್ಷೇತ್ರದಿಂದ ರಾಘವ ನಾಯ್ಕ, ಸಾಲಗಾರರ ಕೃಷಿಯೇತರ ಸಾಮಾನ್ಯ ಕ್ಷೇತ್ರದಿಂದ ರಾಜೇಶ್ ಇವರುಗಳು ಜಯಭೇರಿ ಬಾರಿಸಿದ್ದಾರೆ.













