30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವ: ತೋರಣ ಮುಹೂರ್ತ, ಧ್ವಜಾರೋಹಣ

ಪಡಂಗಡಿ : ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವವು ಫೆ 3 ರಿoದ ಪ್ರಾರಂಭಗೊಂಡು 7 ರ ವರೆಗೆ ತಂತ್ರಿಗಳಾದ ಶ್ರೀ ಉದಯ ಪಾಂಗಣ್ಣಾಯ ನೇತೃತ್ವದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಎಂ ರಘುರಾಮ್ ಭಟ್ ಮಠ ಉಪಸ್ಥಿತಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಮದಿಗೆ ನಡೆಯಲಿದೆ.

ಇಂದು (ಫೆ.3) ದೇವತಾ ಪ್ರಾರ್ಥನಾ, ತೋರಣ ಮುಹೂರ್ತ, ದೇವರಿಗೆ ಪಂಚಾಮೃತ ಅಭಿಷೇಕ, ಗಣಹೋಮ, ನವ ಕಲಶಾಭಿಷೇಕ, ಅಲಂಕಾರ ಪೂಜೆ, ಧ್ವಜಾರೋಹಣ, ಮಧ್ಯಾಹ್ನ ಮಹಾಪೂಜೆ, ನಿತ್ಯಬಲಿ, ಪ್ರಸಾದ ವಿತರಣೆ , ಸಾರ್ವಜನಿಕ ಅನ್ನ ಸಂತರ್ಪಣೆ ಜರಗಿತು.

ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ದಿನೇಶ್ ಮೂಲ್ಯ ಕೊಂಡೆಮಾರು, ಸದಸ್ಯರಾದ ಗೋಪಿನಾಥ್ ನಾಯಕ್ ಗುರುವಾಯನಕೆರೆ, ಸತೀಶ್ ಬಂಗೇರ ಕುವೆಟ್ಟು, ಹರಿಪ್ರಸಾದ್ ಇರ್ವತ್ರಾಯ ಓಡಿಲ್ನಾಳ, ಧನಂಜಯ ರಾವ್ ಗುರುವಾಯನಕೆರೆ, ಕೆ ರಾಜು ಪಡoಗಡಿ, ಶಾoಭವಿ ಪಿ ಬoಗೇರ, ಸವಿತಾ ಆಚಾರ್ಯ ಮುoಡಾಡಿ, ಜಾತ್ರಾ ಸಮಿತಿಯ ಗೌರಾಧ್ಯಕ್ಷ ಮಧೂರು ಕಲ್ಲೂರಾಯ, ಅಧ್ಯಕ್ಷ ಚಂದ್ರಹಾಸ ಕೇದೆ. ಉಪಾಧ್ಯಕ್ಷ ದಾಮೋದರ್ ಕುoದರ್ ಸಬರಬೈಲು. ಪ್ರಧಾನ ಕಾರ್ಯದರ್ಶಿ ಸೋಮನಾಥ ಬಿ ಇಡ್ಯ, ಜೊತೆ ಕಾರ್ಯದರ್ಶಿ ರಾಕೇಶ್ ರೈ ಬಿಯಂತಿಮಾರು, ಕೋಶಾಧಿಕಾರಿ ಟಿ ಕೃಷ್ಣ ರೈ ಸಬರಬೈಲು, ಮಾಜಿ ಅಧ್ಯಕ್ಷ ಪ್ರಭಾಕರ್ ಶೆಟ್ಟಿ ಉಪ್ಪಡ್ಕ, ಪ್ರಮುಖರಾದ ರಾಜಪ್ರಕಾಶ್ ಶೆಟ್ಟಿ, ಲಕ್ಷ್ಮಿಶ, ಯೋಗೀಶ್ ಹಾಗೂ ಪಡಂಗಡಿ, ಕುವೆಟ್ಟು, ಓಡಿಲ್ನಾಳ, ಸೋಣಂದೂರು ಗ್ರಾಮದ ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಮಾ.27 ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆ

Suddi Udaya

ಜ.24: ನಾಲ್ಕೂರುನಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಸೇವಾ ಬಯಲಾಟ

Suddi Udaya

ನಿಡ್ಲೆ: ಕಳೆಂಜ ಶೌರ್ಯ ಘಟಕದಿಂದ ಮನೆಯ ಮೇಲೆ ಬಿದ್ದ ಮರ ತೆರವು

Suddi Udaya

ಬೆಳ್ತಂಗಡಿ ಪ.ಪಂ. ನಾಲ್ಕನೇ ವಾರ್ಡಿನ ಹಿಂದೂ ರುದ್ರ ಭೂಮಿಗೆ ರೂ 40 ಲಕ್ಷ ವೆಚ್ಚದಲ್ಲಿ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಕನ್ಯಾಡಿ ಗ್ರಾಮದ ಪಾರ್ನಡ್ಕ ದಲ್ಲಿ ದಿ| ರಾಜೇಂದ್ರ ಎಸ್ ಸುರಕ್ಕ್ಯೆಗುತ್ತು ಇವರ ಸ್ಮರಣಾರ್ಥ ಬಸ್ ತಂಗುದಾಣ ಉದ್ಘಾಟನೆ

Suddi Udaya

ಉಜಿರೆ ಗಾಂಧಿನಗರ ಅಂಗನವಾಡಿ ಶಾಲೆಗೆ ಎಸ್.ಕೆ ಸದ್ವಿಕ್ ಹುಟ್ಟುಹಬ್ಬದ ಪ್ರಯುಕ್ತ ಅಂಬೇಡ್ಕರ್ ಭಾವಚಿತ್ರ ಕೊಡುಗೆ

Suddi Udaya
error: Content is protected !!