25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವ: ತೋರಣ ಮುಹೂರ್ತ, ಧ್ವಜಾರೋಹಣ

ಪಡಂಗಡಿ : ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವವು ಫೆ 3 ರಿoದ ಪ್ರಾರಂಭಗೊಂಡು 7 ರ ವರೆಗೆ ತಂತ್ರಿಗಳಾದ ಶ್ರೀ ಉದಯ ಪಾಂಗಣ್ಣಾಯ ನೇತೃತ್ವದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಎಂ ರಘುರಾಮ್ ಭಟ್ ಮಠ ಉಪಸ್ಥಿತಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಮದಿಗೆ ನಡೆಯಲಿದೆ.

ಇಂದು (ಫೆ.3) ದೇವತಾ ಪ್ರಾರ್ಥನಾ, ತೋರಣ ಮುಹೂರ್ತ, ದೇವರಿಗೆ ಪಂಚಾಮೃತ ಅಭಿಷೇಕ, ಗಣಹೋಮ, ನವ ಕಲಶಾಭಿಷೇಕ, ಅಲಂಕಾರ ಪೂಜೆ, ಧ್ವಜಾರೋಹಣ, ಮಧ್ಯಾಹ್ನ ಮಹಾಪೂಜೆ, ನಿತ್ಯಬಲಿ, ಪ್ರಸಾದ ವಿತರಣೆ , ಸಾರ್ವಜನಿಕ ಅನ್ನ ಸಂತರ್ಪಣೆ ಜರಗಿತು.

ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ದಿನೇಶ್ ಮೂಲ್ಯ ಕೊಂಡೆಮಾರು, ಸದಸ್ಯರಾದ ಗೋಪಿನಾಥ್ ನಾಯಕ್ ಗುರುವಾಯನಕೆರೆ, ಸತೀಶ್ ಬಂಗೇರ ಕುವೆಟ್ಟು, ಹರಿಪ್ರಸಾದ್ ಇರ್ವತ್ರಾಯ ಓಡಿಲ್ನಾಳ, ಧನಂಜಯ ರಾವ್ ಗುರುವಾಯನಕೆರೆ, ಕೆ ರಾಜು ಪಡoಗಡಿ, ಶಾoಭವಿ ಪಿ ಬoಗೇರ, ಸವಿತಾ ಆಚಾರ್ಯ ಮುoಡಾಡಿ, ಜಾತ್ರಾ ಸಮಿತಿಯ ಗೌರಾಧ್ಯಕ್ಷ ಮಧೂರು ಕಲ್ಲೂರಾಯ, ಅಧ್ಯಕ್ಷ ಚಂದ್ರಹಾಸ ಕೇದೆ. ಉಪಾಧ್ಯಕ್ಷ ದಾಮೋದರ್ ಕುoದರ್ ಸಬರಬೈಲು. ಪ್ರಧಾನ ಕಾರ್ಯದರ್ಶಿ ಸೋಮನಾಥ ಬಿ ಇಡ್ಯ, ಜೊತೆ ಕಾರ್ಯದರ್ಶಿ ರಾಕೇಶ್ ರೈ ಬಿಯಂತಿಮಾರು, ಕೋಶಾಧಿಕಾರಿ ಟಿ ಕೃಷ್ಣ ರೈ ಸಬರಬೈಲು, ಮಾಜಿ ಅಧ್ಯಕ್ಷ ಪ್ರಭಾಕರ್ ಶೆಟ್ಟಿ ಉಪ್ಪಡ್ಕ, ಪ್ರಮುಖರಾದ ರಾಜಪ್ರಕಾಶ್ ಶೆಟ್ಟಿ, ಲಕ್ಷ್ಮಿಶ, ಯೋಗೀಶ್ ಹಾಗೂ ಪಡಂಗಡಿ, ಕುವೆಟ್ಟು, ಓಡಿಲ್ನಾಳ, ಸೋಣಂದೂರು ಗ್ರಾಮದ ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಸುಲ್ಕೇರಿ ಶ್ರೀವಿದ್ಯಾ ಸಂಸ್ಥೆಯ ಶಾಲಾ ನೂತನ ಕಟ್ಟಡ ಹಾಗೂ ನೂತನ ಶಿಶುಮಂದಿರದ ಕುಟೀರ ಉದ್ಘಾಟನೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಪಾಲನಾ ಸಮಿತಿಯಿಂದ ನೂತನವಾಗಿ ಆಯ್ಕೆಗೊಂಡ ಧರ್ಮಾಧ್ಯಕ್ಷರಿಗೆ ಸ್ವಾಗತ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿಯಲ್ಲಿ ರಂಝಾನ್ ಆಚರಣೆ

Suddi Udaya

ಧರ್ಮಸ್ಥಳದಲ್ಲಿ ಅಹೋರಾತ್ರಿ ಸಾಮೂಹಿಕ ಶಿವಪಂಚಾಕ್ಷರಿ ಪಠಣಕ್ಕೆ ಚಾಲನೆ

Suddi Udaya

ಕುಕ್ಕೇಡಿ : ಪಡ್ಯೋಡಿ ಬೈಲು ನಿವಾಸಿ ಗೋಪಿ ನಿಧನ

Suddi Udaya

ಓಡಿಲ್ನಾಳ ಸ.ಉ. ಪ್ರಾ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲದ ಚುನಾವಣೆ

Suddi Udaya
error: Content is protected !!