26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾಜೂರು ಉರೂಸ್‌ ಸಮಾಪ್ತಿ : ಸಾವಿರಾರು ಮಂದಿಗೆ ಅನ್ನದಾನ

ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಸರ್ವಧರ್ಮೀಯ ಸಮನ್ವಯ ಕೇಂದ್ರ ಕಾಜೂರು ಮಖಾಂ ಶರೀಫ್ ನಲ್ಲಿ ಕಳೆದ 10 ದಿನಗಳಿಂದ ವೈವಿದ್ಯಮಯ ಕಾರ್ಯಕ್ರಮಗಳೊಂದಿಗೆ ನಡೆದ ಉರೂಸ್ ಮಹಾ ಸಂಭ್ರಮಕ್ಕೆ ಫೆ.2 ಎಂದು ತೆರೆಬಿತ್ತು.

ಸಯ್ಯಿದ್ ಕುಂಬೋಳ್ ತಂಙಳ್, ಸಯ್ಯಿದ್ ಕಾಜೂರು ತಂಙಳ್, ಸಯ್ಯಿದ್‌ ಹಾಮಿದ್ ಇಂಬಿಚ್ಚಿಕೋಯ ತಂಙಳ್, ಖಾಝಿ ಸುಲ್ತಾನುಲ್ ಉಲಮಾ ಎ‌.ಪಿ ಉಸ್ತಾದ್ ಮಾರ್ಗದರ್ಶನ ಮತ್ತು ಧಾರ್ಮಿಕ ನೇತೃತ್ವದಲ್ಲಿ ನಡೆದ ಉರೂಸ್ ಸಮಾರಂಭದಲ್ಲಿ ಕರ್ನಾಟಕ ಕೇರಳ ತಮಿಳುನಾಡು ಮೊದಲಾದ ರಾಜ್ಯ ಗಳಿಂದಲೂ ಸಾವಿರಾರು ಮಂದಿ ಆಗಮಿಸುವ ಮೂಲಕ ಗತಕಾಲದ ವೈಭವ ಮರುಕಳಿಸಿತು.


ಉರೂಸ್ ಸಮಾರೋಪದ ಪ್ರಯುಕ್ತ ಸಯ್ಯಿದ್ ಕುಂಬೋಳ್ ತಂಙಳ್ ನೇತೃತ್ವದಲ್ಲಿ ಖತ್ಮುಲ್ ಕುರ್‌ಆನ್, ಮುಂದಿನ ಉರೂಸ್‌ಗೆ ವಾಗ್ದಾನ ದುಆ ಕಾರ್ಯಕ್ರಮ ಫೆ.2 ರಂದು ಬೆಳಗ್ಗೆ ನಡೆಯಿತು.
ರಾತ್ರಿ ನಡೆದ ಸಮಾರೋಪದಲ್ಲಿ ಅಂತಾರಾಷ್ಟ್ರೀಯ ಮಾನ್ಯತೆ ಪಡೆದ ಕಾರಂದೂರು ಮರ್ಕಝ್ ಶಿಕ್ಷಣ ಮಹಾವಿದ್ಯಾಲಯದ ಉಪಾಧ್ಯಕ್ಷ, ಖ್ಯಾತ ವಾಗ್ಮಿ ಸಯ್ಯಿದ್ ಸಿಹಾಬುದ್ದೀನ್ ಅಹ್ದಲ್ ತಂಙಳ್ ಮುತ್ತನ್ನೂರು‌ ಕೇರಳ ಮತ್ತು ಕಾಜೂರು ತಂಙಳ್ ನೇತೃತ್ವದಲ್ಲಿ ಮೌಲೀದ್ ಪಾರಾಯಣ ನಡೆದು ಮಹಾ ಅನ್ನದಾನಕ್ಕೆ ಚಾಲನೆ ನೀಡಲಾಯಿತು.
ಉರೂಸ್ ಪ್ರಯುಕ್ತ ಫೆ.3 ರಂದು ಸಂಜೆಯವರೆಗೂ ಕ್ಷೇತ್ರಕ್ಕೆ ಆಗಮಿಸಿದ ಸರ್ವಧರ್ಮೀಯರಿಗೂ ಮಹಾ ಅನ್ನದಾನ ನಡೆಯಿತು.

ಕಾಜೂರು ಕಿಲ್ಲೂರು ಜಂಟಿ ಉರೂಸ್ ಸಮಿತಿ ಹಾಗೂ ನೂರಾರು ಸಂಖ್ಯೆಯ ಸ್ವಯಂ ಸೇವಕರು, ಕಾಜೂರು ಮತ್ತು ಅಂಗಸಂಸ್ಥೆಗಳ ಪ್ರತಿನಿಧಿಗಳು, ಉಸ್ತಾದರುಗಳು, ಸುನ್ನೀ ಸಮೂಹ ಸಂಘಟೆನೆಗಳಾದ ಎಸ್ಸೆಸ್ಸೆಫ್, ಎಸ್‌ವೈಎಸ್, ಕರ್ನಾಟಕ ಮುಸ್ಲಿಂ ಜಮಾಅತ್, ಎಸ್‌ಎಮ್, ಎಸ್‌ಜೆಯು ಇದರ ಪದಾಧಿಕಾರಿಗಳು ಆಹೋರಾತ್ರಿ ತಮ್ಮ ಶ್ರಮ ಸೇವೆ ನೀಡಿ ಕಾರ್ಯಕ್ರಮ ಯಶಸ್ವಿಗೆ ಸಹಕರಿಸಿದರು. ಅಗ್ನಿ ಶಾಮಕ ಇಲಾಖೆ, ಪೊಲೀಸ್ ಮತ್ತು ಗೃಹರಕ್ಷಕ ದಳ, ಆರೋಗ್ಯ ಇಲಾಖೆ, ಗ್ರಾ.ಪಂ ಮಿತ್ತಬಾಗಿಲು ಮತ್ತು ಮಲವಂತಿಗೆಯ ಪಿಡಿಒ ಮತ್ತು ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡಿದರು. ಆಗಮಿಸುವ ಸರ್ವರಿಗೂ ಸಮರ್ಪಕ ವಾಹನ ನಿಲುಗಡೆ, ದಿಡುಪೆ ಯಂಗ್‌ಮನ್ಸ್ ವತಿಯಿಂದ ತಂಪುಪಾನೀಯ ವ್ಯವಸ್ಥೆ ಅಚ್ಚುಕಟ್ಟಾಗಿ ನಡೆಯಿತು. ಆರ್‌ಡಿಸಿ ದಪ್ಪು ಸಮಿತಿ ವತಿಯಿಂದ ಪ್ರತಿದಿನ ದಫ್ಫು ಪ್ರದರ್ಶನ ಏರ್ಪಡಿಸಿ ಕಾರ್ಯಕ್ರಮಕ್ಕೆ ಇಸ್ಲಾಮಿಕ್ ಸಾಂಸ್ಕೃತಿಕ ಮೆರುಗು ನೀಡಿದರು.


ಒಟ್ಟಿನಲ್ಲಿ ಕಳೆದ 10 ದಿನಗಳಲ್ಲಿ ನಡೆದ ಉರೂಸ್ ಕಾರ್ಯಕ್ರಮ ಅತ್ಯಂತ ಭಕ್ತಿ ಭಾವ ಸಂಭ್ರಮ ಸಡಗರದಿಂದ ಸಮಾಪ್ತಿಗೊಂಡಿತು. ಭವಿಷ್ಯದ ಚಿಂತನೆ, ಅಭಿವೃದ್ಧಿಯ ದೀರ್ಘದೃಷ್ಟಿತ್ವ, ಶೈಕ್ಷಣಿಕ ಪ್ರಗತಿಯ ಗುರಿಯನ್ನು ನಿಗದಿಗೊಳಿಸುವಲ್ಲಿ ಈ ಉರೂಸ್ ಒಂದು ಐತಿಹಾಸಿಕ ಮಾದರಿ ಕಾರ್ಯಕ್ರಮವಾಗಿ ರೂಪುಪಡೆಯಿತು.

Related posts

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೈ‌ ಕೊಟ್ಟ ವಿದ್ಯುತ್: ವೈದ್ಯರಿಂದ ಕತ್ತಲಲ್ಲಿ ರೋಗಿಗಳ ಆರೋಗ್ಯ ತಪಾಸಣೆ: ಇನ್ವರ್ಟರ್ ವ್ಯವಸ್ಥೆಗಳು ಇಲ್ಲದೆ ಟಾರ್ಚ್ ಬೆಳಕಿನಿಂದ ಚಿಕಿತ್ಸೆ ನೀಡಬೇಕಾದ ಸ್ಥಿತಿ

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

Suddi Udaya

ಬೆಳ್ತಂಗಡಿ ಪಿ ಎಂ ಶ್ರೀ ಮಾದರಿ ಶಾಲೆಗೆ ನಾರಾಯಣ ಬೇಗೂರು ಭೇಟಿ, ಶಾಲೆಯ ಅಭಿವೃದ್ಧಿಗೆ ನೆರವು ನೀಡುವ ಭರವಸೆ

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಬಳಂಜ”ಮನಸ್ವಿನಿ” ಸಂಜೀವಿನಿ ಗ್ರಾ. ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಜಿ. ಕೃಷ್ಣ ಬೆಳ್ತಂಗಡಿ ನಿರ್ದೇಶನದ ” ಇದು ನಮ್ ಶಾಲೆ ” ಚಲನಚಿತ್ರದ ಪೋಸ್ಟರ್ ಹಾಗೂ ವಿಡಿಯೋ ಹಾಡುಗಳ” ಬಿಡುಗಡೆ

Suddi Udaya
error: Content is protected !!