September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾಳ ವರ್ಷವಧಿ ಜಾತ್ರಾ ಮಹೋತ್ಸವ ಲೆಕ್ಕಪತ್ರ ಮಂಡನೆ, ಅಭಿನಂದನೆ ಹಾಗೂ ಅಧಿಕಾರ ಹಸ್ತಾಂತರ

ಗೇರುಕಟ್ಟೆ: ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾದ ವರ್ಷಾವಧಿ ಜಾತ್ರಾ ಮಹೋತ್ಸವ ಯಶಸ್ವಿಯಾಗಿ ನಡೆದಿರುವ ಪ್ರಯುಕ್ತ ಭಕ್ತಾದಿಗಳಿಗೆ ಅಭಿನಂದನೆ ಹಾಗೂ ಲೆಕ್ಕಪತ್ರಮಂಡನೆ ಮತ್ತು ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ, ಸದಸ್ಯರಿಗೆ ಅಧಿಕಾರ ಹಸ್ತಾಂತರ ಸಭೆ ಫೆ.2 ರಂದು ಕ್ಷೇತ್ರದ ಅನ್ನ ಪೂರ್ಣ ಭೋಜನಾಲಯದ ಸಭಾಂಗಣದಲ್ಲಿ ನಡೆಯಿತು.


ತಣ್ಣೀರುಪಂತ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ನಾಳ ದೇವಸ್ಥಾನದ ಆಡಳಿತಾಧಿಕಾರಿ ಶ್ರವಣ್ ಕುಮಾರ್ ಅಧ್ಯಕ್ಷತೆ ವಹಿಸಿ ಜಾತ್ರಾ ಮಹೋತ್ಸವವನ್ನು ಯಶಸ್ವಿಯಾಗಿ ನಡೆಸಿಕೊಂಡು ಬರಲು ಸಹಕರಿಸಿದ ಸಮಿತಿ ಸದಸ್ಯರು, ವಿವಿಧ ಸಂಘ ಸಂಸ್ಥೆಗಳು ಹಾಗೂ ಭಕ್ತರಿಗೆ ಅಭಿನಂದನೆ ಸಲ್ಲಿಸಿದ್ದರು.


ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಕಛೇರಿ ನಿರ್ವಾಹಕರಾದ ಗಿರೀಶ್ ಶೆಟ್ಟಿ ಜಿ.ಎಸ್.ಜಾತ್ರೋತ್ಸವ ಲೆಕ್ಕ ಪತ್ರ ಸಭೆಯಲ್ಲಿ ಮಂಡಿಸಿದರು.


ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಬಿ.,ಸದಸ್ಯರಾಗಿ ಹೇಮಂತ ಕುಮಾರ್ ,ರಾಘವ ಹೆಚ್.ಶರತ್ ಕುಮಾರ್ ಶೆಟ್ಟಿ,ಹರೀಶ್ ಗೌಡ ಕೆ.ಮೋಹಿನಿ ಬಿ.ಗೌಡ,ರೀತಾ ಚಂದ್ರಶೇಖರ, ನೀನಾ ಕುಮಾರ್, ಪ್ರಧಾನ ಅರ್ಚಕರಾದ ವೇ.ಮು.,ರಾಘವೇಂದ್ರ ಅಸ್ರಣ್ಣರು ನೂತನ ಸಮಿತಿಗೆ ಆಯ್ಕೆಯಾಗಿದ್ದಾರೆ.


ದೇವಸ್ಥಾನದಲ್ಲಿ ಮಧ್ಯಾಹ್ನದ ಮಹಾಪೂಜೆ ಬಳಿಕ ನೂತನ ವ್ಯವಸ್ಥಾಪನ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರನ್ನು ದೇವಸ್ಥಾನದ ವತಿಯಿಂದ ಗೌರವಿಸಿ, ದೇವಸ್ಥಾನದ ಅಧಿಕಾರ ಹಸ್ತಾಂತರ ಮಾಡಿದರು. ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಹರೀಶ್ ಕುಮಾರ್ ಬಿ, ಶರತ್ ಕುಮಾರ್ ಶೆಟ್ಟಿ, ಹರೀಶ್ ಗೌಡ ಕೆ, ನೀನಾ ಕುಮಾರ್, ಶ್ರೀಮತಿ ಮೋಹಿನಿ ಬಿ ಗೌಡ,ರೀತಾ ಚಂದ್ರಶೇಖರ ಉಪಸ್ಥಿತರಿದ್ದರು. ಅಭಿವೃದ್ಧಿ ಮಂಡಳಿ, ಜಾತ್ರೋತ್ಸವ ಸಮಿತಿ, ಭಜನಾ ಮಂಡಳಿ, ಶ್ರೀ ದುರ್ಗಾ ಮಾತೃ ಮಂಡಳಿ ಪದಾಧಿಕಾರಿಗಳು ಮತ್ತು ಭಕ್ತರು ಆಗಮಿಸಿದರು.

Related posts

ಜೇಸಿಐ ವಲಯ ಸಮ್ಮೇಳನ: ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಸಮಗ್ರ ಪ್ರಶಸ್ತಿ

Suddi Udaya

“ಬಂಟರ ಕ್ರೀಡಾಕೂಟ-2026” ಕ್ರಿಕೆಟ್ ಹಾಗೂ ತ್ರೋಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ

Suddi Udaya

ಕಣಿಯೂರು: ದೀಪಾ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ವಲಯ ಅಧ್ಯಕ್ಷರ ಭೇಟಿ

Suddi Udaya

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗೆ ‘ ಇನ್ಸ್ಟಿಟ್ಯೂಷನ್ಸ್ ಆಫ್ ಲೆಗಸಿ ‘ ಪ್ರಶಸ್ತಿ

Suddi Udaya

ನಡ – ಕನ್ಯಾಡಿ ಶಕ್ತಿ ಕೇಂದ್ರ ಕಾರ್ಯಾಗಾರ

Suddi Udaya
error: Content is protected !!