July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಿಲ್ಯ: ಎರಡು ಕಾರುಗಳ ನಡುವೆ ಅಪಘಾತ: ಮಗು ಸೇರಿದಂತೆ ನಾಲ್ವರಿಗೆ ಗಾಯ

ಬೆಳ್ತಂಗಡಿ: ಎರಡು ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಮಗು ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ಫೆ.2 ರಂದು ಸಂಜೆ ಅಳದಂಗಡಿ ಪಿಲ್ಯ ಸಮೀಪ ನಡೆದಿದೆ.

ಉಡುಪಿ ಕಡೆಯಿಂದ ಬರುತಿದ್ದ ಕಾರು ಬೆಳ್ತಂಗಡಿ ಕಡೆಯಿಂದ ಕಾರ್ಕಳ ಕಡೆಗೆ ಹೋಗುತ್ತಿದ್ದ ಕಾರಿನ ನಡುವೆ ಪಿಲ್ಯ ಸಮೀಪದ ಗೋಳಿ ಕಟ್ಟೆ ನಾವರ ಮಹಾಲಿಂಗೇಶ್ವರ ದೇವಸ್ಥಾನದ ದ್ವಾರದ ಬಳಿ ಅಪಘಾತ ನಡೆದಿದೆ.

ಅಪಘಾತದ ರಭಸಕ್ಕೆ ಇಕೋ ಕಾರಿನಲ್ಲಿದ್ದ ಮಗು ಸೇರಿದಂತೆ ನಾಲ್ವರಿಗೆ ಗಾಯಗಳಾಗಿದ್ದು ಇಬ್ಬರು ಗಂಭೀರ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಗಾಯಗೊಂಡವರನ್ನುಸ್ಥಳೀಯರ ಸಹಕಾರದೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ವೇಣೂರು ಪೊಲೀಸರು ಆಗಮಿಸಿ ಪರಿಶೀಲಿಸಿದ್ದಾರೆ. ಕಾರಿನಲ್ಲಿದ್ದವರ ಮಾಹಿತಿ ತಿಳಿದು ಬರಬೇಕಾಗಿದೆ.

Related posts

ಆ.15-16: ಗುರುವಾಯನಕೆರೆ ಎಕ್ಸೆಲ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ರಕ್ಷಕ ನಮನ 2025, ಶೈಕ್ಷಣಿಕ ಸಾಧಕರಿಗೆ ಅಭಿನಂದನೆ ಹಾಗೂ ವಿದ್ಯಾರ್ಥಿವೇತನ ವಿತರಣೆ

Suddi Udaya

ಕಡಿರುದ್ಯಾವರ ಜಿ. ಪಂ. ಹಿ. ಪ್ರಾ ಶಾಲಾ ಎಸ್.ಡಿ.ಎಮ್.ಸಿ ಹಾಗೂ ಪೋಷಕರ ಸಭೆ

Suddi Udaya

ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 11 ಜೋಡಿಗಳಿಗೆ ಸಾಮೂಹಿಕ ವಿವಾಹ ನಿಶ್ವಿತಾರ್ಥ,

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ವಿಷ್ಣುಪ್ರಕಾಶ್ ಅಧಿಕಾರ ಸ್ವೀಕಾರ

Suddi Udaya

ಮುಂಡಾಜೆ ಪ.ಪೂ. ಕಾಲೇಜು ಪ್ರಾರಂಭೋತ್ಸವ

Suddi Udaya

ಗಾಳಿ ಮಳೆ: ಲಾಯಿಲ ನಿನ್ನಿಕಲ್ಲುನಲ್ಲಿ ಮನೆಯ ಛಾವಣಿಗೆ ಹಾನಿ

Suddi Udaya
error: Content is protected !!