September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಡಿ.ಪಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಹಾಗೂ ವಲಯ ಮಟ್ಟದ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಕಾರ್ಯಕ್ರಮ

ಬೆಳಾಲು : ಡಿ.ಪಿ ಸ್ಪೋರ್ಟ್ಸ್ ಕ್ಲಬ್ ಬೆಳಾಲು ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ವಾಲಿಬಾಲ್ ಅಸೋಶಿಯೇಶನ್ ಇದರ ಸಹಯೋಗದೊಂದಿಗೆ 10 ನೇ ವರ್ಷದ ತಾಲೂಕು ಮಟ್ಟದ ವಾಲಿಬಾಲ್ ಹಾಗೂ ವಲಯ ಮಟ್ಟದ ಪುರುಷರ ಹಾಗೂ ಮಹಿಳೆಯರ ವಿಭಾಗ ಹಗ್ಗಜಗ್ಗಾಟ ಕಾರ್ಯಕ್ರಮ ಫೆ. 01 ರಂದು ದೊಂಪದಪಲ್ಕೆ ಕ್ರೀಡಾಂಗಣದಲ್ಲಿ ನಡೆಯಿತು.


ಬೆಳಾಲು ಬುರಲ್ ಗುತ್ತು ಜೀವoದರ್ ಕುಮಾರ್ ಜೈನ್ ಸಭಾಧ್ಯಕ್ಷತೆ ವಹಿಸಿ ಸಂಘಟಕರಿಗೆ ಅಭಿನಂದನೆ ಸಲ್ಲಿಸಿ ಶುಭಹಾರೈಸಿದರು. ಬೆಳಾಲು ಶ್ರೀ ಕ್ಷೇತ್ರ ಆರಿಕೋಡಿ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿ ದೀಪೋಜ್ವಲನೆ ನೆರವೇರಿಸಿ ಸಂಘಟನೆಯಿಂದ ಇನ್ನಷ್ಟು ಸಮಾಜಮುಖಿ ಕೆಲಸಗಳಾಗಲಿ, ಯಶಸ್ವಿ ಕಾರ್ಯಕ್ರಮ ಮೂಡಿ ಬರಲೆಂದು ಶುಭ ಹಾರೈಸಿದರು. ಯುವ ಉದ್ಯಮಿಗಳಾದ ಕಿರಣ್ ಚಂದ್ರ. ಡಿ ಪುಷ್ಪಗಿರಿ ಕ್ರೀಡಾಂಗಣ ಉದ್ಘಾಟನೆ ನೆರವೇರಿಸಿ ಶುಭ ಹಾರೈಸಿದರು,

ಈ ಸಂದರ್ಭದಲ್ಲಿ ಸಂಚಾಲಕರು ಬದುಕು ಕಟ್ಟೋಣ ಬನ್ನಿ ಸೇವಾಟ್ರಸ್ಟ್ ಉಜಿರೆ, ಲಕ್ಷ್ಮೀ ಗ್ರೂಪ್ ಕನಸಿನ ಮನೆ ಉದ್ಯಮಿಗಳಾದ ಕೆ ಮೋಹನ್ ಕುಮಾರ್, ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜು ಅಧ್ಯಕ್ಷ ಬಿ. ಸುಮಂತ್ ಕುಮಾರ್ ಜೈನ್, ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿದ್ಯಾ ಶ್ರೀನಿವಾಸ್ ಗೌಡ, ಮೀನoದೇಲು ಜನರಲ್ ಸ್ಟೋರ್ ಉದ್ಯಮಿಗಳಾದ ಜಯಣ್ಣ ಗೌಡ, ಬೆಳಾಲು ಡಿ.ಪಿ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಯಶವಂತ್ ಗೌಡ, ಬೆಳಾಲು ಸಿ ಎ ಬ್ಯಾಂಕ್ ಉಪಾಧ್ಯಕ್ಷ ದಿನೇಶ್ ಕೋಟ್ಯಾನ್ ಉಪಸ್ಥಿತರಿದ್ದರು.


ವಾಲಿಬಾಲ್ ಆಟಗಾರರು, ನಿವೃತ್ತ ಸೇನಾನಿ ತೋಮಸ್. ಪಿ, ಶಿಲ್ಪಿಗಳಾದ ಶಶಿಧರ್ ಆಚಾರ್ಯ ಬೆಳಾಲು, ಕರಾಟೆ ಕ್ರೀಡಾಪಾಟು ಮಿಥುನ್ ಕಜೆ, ರಾಜ್ಯಮಟ್ಟದ ಕ್ರೀಡಾಪಟು ಜಾಹ್ನವಿ ಮಾಯಾ ಬೆಳಾಲು ಇವರನ್ನು ಸನ್ಮಾನಿಸಲಾಯಿತು. ಡಿಪಿ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾದ ಯಶವoತ್ ಗೌಡ ಸ್ವಾಗತಿಸಿ, ವಾಣಿ ಕಾಲೇಜು ಉಪನ್ಯಾಸಕರಾದ ಬೆಳಿಯಪ್ಪ ಗೌಡ ಹಾಗೂ ಎಸ್.ಕೆ.ಡಿ.ಆರ್. ಡಿ.ಪಿ ಯೋಜನಾಧಿಕಾರಿಗಳಾದ ಗಿರೀಶ್ ಕುಮಾರ್ ಮoಜೊತ್ತು ನಿರೂಪಿಸಿ, ಡಿ.ಪಿ ಸ್ಪೋರ್ಟ್ಸ್ ಕ್ಲಬ್ ಕಾರ್ಯದರ್ಶಿ ಲೋಹಿತ್ ಕುಮಾರ್ ಸುರುಳಿ ಧನ್ಯವಾದವಿತ್ತರು.

Related posts

ಇಂದಬೆಟ್ಟು ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

Suddi Udaya

ಕೊಕ್ಕಡ : ನಿವೃತ್ತ ಅಂಚೆ ಪಾಲಕ  ಬಾಲಕೃಷ್ಣ ನಿಧನ

Suddi Udaya

ಕೊಕ್ಕಡ ಹಳ್ಳಿಗೇರಿ ಕಾಮಧೇನು ಗೋಶಾಲೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ | ಡಿ. ವೀರೇಂದ್ರ ಹೆಗ್ಗಡೆ ಹಾಗೂ ಇಸ್ಕಾನ್ ನ ಹರೀಶ್ ಭೇಟಿ

Suddi Udaya

ಫೆ.10: ಪಡಂಗಡಿ ಮಲ್ಲಿಪ್ಪಾಡಿ ಶ್ರೀಸದಾಶಿವ ದೇವಸ್ಥಾನದ ಜಾತ್ರಾ ಮಹೋತ್ಸವ ಹಾಗೂ ಸಾಮೂಹಿಕ ಶನಿ ಪೂಜೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಡಿ.8-12: ಧರ್ಮಸ್ಥಳ ಲಕ್ಷದೀಪೋತ್ಸವ: ಸರ್ವಧರ್ಮ ಸಮ್ಮೇಳನ ಮತ್ತು ಸಾಹಿತ್ಯ ಸಮ್ಮೇಳನ

Suddi Udaya
error: Content is protected !!