ಬೆಳ್ತಂಗಡಿ: ಶ್ರೀ ನಾರಾಯಣ ಗುರು ವಾಣಿಜ್ಯ ಸಂಕೀರ್ಣದ ಮೊದಲ ಮಹಡಿಯಲ್ಲಿ ಕಾರ್ಯಾಚರಿಸುತ್ತಿದ್ದ ನ್ಯಾಯವಾದಿ ಭಗೀರಥ ಜಿ. ರವರ ನೋಟರಿ ಕಚೇರಿ ಸ್ಥಳಾಂತರಗೊಂಡು ಇದರ ಸ್ಥಳಾಂತರಿತ ನೂತನ ಕಛೇರಿಯು ಬೆಳ್ತಂಗಡಿ ಶ್ರೀ ಗುರು ಸಾನಿಧ್ಯ ವಾಣಿಜ್ಯ ಸಂಕೀರ್ಣದ ಮೊದಲನೇ ಮಹಡಿಯಲ್ಲಿ ಫೆ.3 ರಂದು ಉದ್ಘಾಟನೆಗೊಂಡಿತು.
ಕಛೇರಿಯನ್ನು ಶ್ರೀ ಕ್ಷೇತ್ರ ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದಧರ್ಮದರ್ಶಿ ಯೋಗೀಶ್ ಪೂಜಾರಿ ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ, ನ್ಯಾಯವಾದಿ ಬಿ. ಕೆ ಧನಂಜಯ ರಾವ್, ಪೆರಾಡಿ ಸಿ. ಎ ಬ್ಯಾಂಕಿನ ಅಧ್ಯಕ್ಷ ಸತೀಶ್ ಕಾಶಿಪಟ್ಣ,, ಗುರುದೇವ ಬ್ಯಾಂಕಿನ ಮ್ಯಾನೇಜರ್ ಅಶ್ವತ್ , ವಿಶೇಷ ಅಧಿಕಾರಿ ಮೋನಪ್ಪ ಪೂಜಾರಿ ಕಂಡೆತ್ಯಾರು, ಕೆ ಡಿ ಪಿ ಸದಸ್ಯ ಸಂತೋಷ್ ಕುಮಾರ್, ನಿವೃತ್ತ ಎಸ್ ಪಿ ಪೀತಾಂಬರ ಹೆರಾಜೆ, ಪೆರಾಡಿ ಸಿಎ ಬ್ಯಾಂಕಿನ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಶೇಕ್ ಲತೀಫ್, ಅಪರ ಸರ್ಕಾರಿ ವಕೀಲ ಮನೋಹರ್ ಕುಮಾರ್ ಇಳಂತಿಲ, ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು, ದಂತ ವೈದ್ಯ ಡಾ| ರಾಜಾರಾಮ ಕೆ ಬಿ, ಚಿದಾನಂದ ಎಲ್ಡಕ್ಕ, ಹರಿದಾಸ ಕೇದೆ, ಚಿದಾನಂದ ಇಡ್ಯಾ, ವಸಂತ ಶೆಟ್ಟಿ ಶ್ರದ್ಧಾ, ಪ.ಪಂ. ಸಂಯೋಜಕ ಜಯಾನಂದ ಲಾಯಿಲ, ರಮೇಶ್ ಪೂಜಾರಿ, ರವಿಚಂದ್ರ ಗುಂಪೋಲಿ ಮೊದಲಾದವರು ಉಪಸ್ಥಿತರಿದ್ದರು.
ಆಗಮಿಸಿದ ಅತಿಥಿ ಗಣ್ಯರನ್ನು ಭಗೀರಥ ಜಿ, ಸುಕನ್ಯಾ ಭಗೀರಥ, ಸುಜನ್, ಸುಧೀಕ್ಷಾ ಸ್ವಾಗತಿಸಿ, ಸತ್ಕರಿಸಿದರು.