23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಿತ್ತಬಾಗಿಲು : ಪೆರ್ದಾಡಿಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ

ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಿತ್ತಬಾಗಿಲು ಬ್ರಾಂಚ್ ಸಮಿತಿ ನೇತೃತ್ವದಲ್ಲಿ ದಾನಿಗಳ ಸಹಕಾರದೊಂದಿಗೆ ಮಿತ್ತಬಾಗಿಲು ಗ್ರಾಮದ ಪೆರ್ದಾಡಿಯಲ್ಲಿ ನಿರ್ಮಿಸಿದ ಮನೆಯನ್ನು ಬಡ ಮಹಿಳೆ ರಹಮತ್ ಪೆರ್ದಾಡಿ ಅವರಿಗೆ ಹಸ್ತಾಂತರ ಮಾಡಲಾಯಿತು.

ಅಸ್ಸಯ್ಯದ್ ಝೈನುಲ್ ಆಬಿದೀನ್ ಜಮಾಲುಲ್ಲೈಲಿ ತಂಙಳ್ ಕಾಜೂರು ಅವರು ದುವಾ ಆಶಿರ್ವಾದಗೈದರು. ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಮನೆ ಕೀ ಕುಟುಂಬ ಸದಸ್ಯರಿಗೆ ಹಸ್ತಾಂತರ ಮಾಡಿದರು.

ಮನೆ ನಿರ್ಮಾಣಕ್ಕೆ ಮುಂದಾಳತ್ವ ವಹಿಸಿದ ನಿಜಾಮ್ ಗೇರುಕಟ್ಟೆ, ಪಂಚಾಯತ್ ಸದಸ್ಯರಾದ ಅಹ್ಮದ್ ಕಬೀರ್ ಹಾಗೂ ಮುಸ್ತಾಫ ಜಿ. ಕೆರೆ ಇವರನ್ನು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಜುಮ್ಮಾ ಮಸೀದಿ ಪೆರ್ದಾಡಿ ಖತೀಬರಾದ ಶರೀಫ್ ಸಹದಿ, ಕಿಲ್ಲೂರು ಜುಮ್ಮಾ ಮಸೀದಿ ಅಧ್ಯಕ್ಷರಾದ ಅಝೀಝ್ ಝುಹ್ರಿ ಉಸ್ತಾದ್, ರಫೀಕ್ ಕನ್ನಡಿ ಕಟ್ಟೆ, ಅಶ್ರಫ್ ಕಾಜೂರು, ಎಸ್‌ಡಿಪಿಐ ಪಕ್ಷದ ಕಾರ್ಯಕರ್ತರು ಹಾಗೂ ಜಮಾತ್ ಬಾಂಧವರು ಉಪಸ್ಥಿತರಿದ್ದರು.

Related posts

ರಾಜ್ಯಮಟ್ಟದ ಶ್ರೀ ಭಗವದ್ಗೀತಾ ಸ್ಪರ್ಧೆ: ಉಜಿರೆಯ ಎಸ್ ಡಿಎಂ ಪ.ಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಕೆಂಪೇಗೌಡ ಜಯಂತಿ ಅಂಗವಾಗಿ ಚಿತ್ರಕಲಾ ಸ್ಪರ್ಧೆ: ಬೆಳ್ತಂಗಡಿ ಶ್ರೀ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ರಿತಿಕಾ ಶೆಣೈಗೆ ಪ್ರಶಸ್ತಿ

Suddi Udaya

ಚಾರಣಕ್ಕೆ ಮೊಬೈಲ್ ಆ್ಯಪ್, ಗೈಡ್ ಕಡ್ಡಾಯ-ಚಾರಣಿಗರ ಸುರಕ್ಷತೆಗೆ ಮಾರ್ಗದರ್ಶಿ ಬಿಡುಗಡೆ

Suddi Udaya

ತಣ್ಣೀರುಪಂತ: ಪಾಲೇದು ಪರಿಸರದಲ್ಲಿ ಕಾಡುಕೋಣ ಓಡಾಟ

Suddi Udaya

ಸಾಮಾಜಿಕ ಹೋರಾಟಗಾರ ಎಲ್ಯಣ್ಣ ಮಲೆಕುಡಿಯ ಹೃದಯಾಘಾತದಿಂದ ನಿಧನ

Suddi Udaya

ಮುಗೇರಡ್ಕ -ಅಲೆಕ್ಕಿ ಶ್ರೀ ರಾಮ ಶಿಶು ಮಂದಿರಕ್ಕೆ ಲಕ್ಮಿ ಇಂಡಸ್ಟ್ರಿಸ್ ಮಾಲಕ ಮೋಹನ್ ಕುಮಾರ್ ಭೇಟಿ ; ಸಂಘದ ಕಾರ್ಯ ಚಟುವಟಿಕೆ ಬಗ್ಗೆ ಮೆಚ್ಚುಗೆ

Suddi Udaya
error: Content is protected !!