July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಬಗ್ಗೆ ಸಮಾಲೋಚನ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

ಸುಲ್ಕೇರಿ : ದೇಯಿ ಬೈದೆದಿ ಕೋಟಿ ಚೆನ್ನಯ ಮೂಲ ಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾ.1 ರಿಂದ ಮಾ. 5ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವವನ್ನು ಯಶಸ್ಸುಗೊಳಿಸುವ ಬಗ್ಗೆ ಸುಲ್ಕೇರಿ ಶ್ರೀ ಗುರು ನಾರಾಯಣ ಸೇವಾ ಸಂಘ ಇಲ್ಲಿ ಗೆಜ್ಜೆಗಿರಿಯ ಭಕ್ತಾಭಿಮಾನಿಗಳ ಸಮಾಲೋಚನ ಸಭೆಯನ್ನು ಆಯೋಜಿಸಲಾಗಿತ್ತು.


ಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಸುಲ್ಕೇರಿ ಶ್ರೀ ಗುರುನಾರಾಯಣ ಸೇವಾ ಸಂಘ ಅಧ್ಯಕ್ಷ ಕೊರಗಪ್ಪ ಪೂಜಾರಿ ಮಣಿಕಂಠರು ಇವರು ಕ್ಷೇತ್ರದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ದರು.
ಶ್ರೀ ಕ್ಷೇತ್ರ ಗೆಜ್ಜಗಿರಿ ಜಾತ್ರೆೋತ್ಸವ ಸಮಿತಿಯ ಬೆಳ್ತಂಗಡಿ ತಾಲೂಕಿನ ಪ್ರಧಾನ ಸಂಚಾಲಕ ನಿತ್ಯಾನಂದ ನಾವರ ರವರು ಶ್ರೀ ಕ್ಷೇತ್ರದಲ್ಲಿ ನಡೆಯುವ ಮಡಿಲು ಸೇವೆ ಹಾಗೂ ಉತ್ಸವದ ಮಾಹಿತಿಯನ್ನು ಸಭೆಗೆ ನೀಡಿ ತಾಲೂಕಿನ ಎಲ್ಲಾ ಭಕ್ತಾಭಿಮಾನಿಗಳನ್ನು ಜಾತ್ರೋತ್ಸವಕ್ಕೆ ಆಮಂತ್ರಿಸಿದರು.


ವೇದಿಕೆಯಲ್ಲಿ ಶ್ರೀ ಗುರು ನಾರಾಯಣ ಸೇವಾ ಸಂಘ ಸುಲ್ಕೇರಿ ಇದರ ಗೌರವಾಧ್ಯಕ್ಷ ಸುಧೀರ್ ಎಸ್‌ ಪಿ, ಗುತ್ತು ಬರ್ಕೆಯವರಾದ ನಾರಾಯಣ ಪೂಜಾರಿ ಬೋಳುವಾಲು, ಆನಂದ ಪೂಜಾರಿ ಕುತ್ಯಾರು , ಉಪಸ್ಥಿತರಿದ್ದರು.
ಶ್ರೀ ಮಹಾಮಾಯಿ ದೇವಸ್ಥಾನದ ಮಾಜಿ ಆಡಳಿತ ಸಮಿತಿಯ ಅಧ್ಯಕ್ಷ ವಸಂತ ಪೂಜಾರಿ ಕುತ್ಯಾರು ಯೋಗಿಶ್ ಪೂಜಾರಿ ಬೋಳುವಾಲು ಹಾಗೂ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಹಲವಾರು ಭಕ್ತಾಭಿಮಾನಿಗಳು ಸಭೆಯಲ್ಲಿ ಸೇರಿದ್ದರು.


ಶ್ರೀ ಗುರುನಾಥ್ ಸೇವಾ ಸಂಘ ಸುಲ್ಕೇರಿಯ ಪ್ರಧಾನ ಕಾರ್ಯದರ್ಶಿಯಾದ ಡೀಕಯ್ಯ ಪೂಜಾರಿಯವರು ಕಾರ್ಯಕ್ರಮವನ್ನು ನಿರ್ವಹಿಸಿ, ಧನ್ಯವಾದವನ್ನಿತ್ತರು.

Related posts

ಪುತ್ತೂರು ವಿವೇಕಾನಂದ ಕಾಲೇಜಿನ ಇಕೋ ಕ್ಲಬ್ ವಿದ್ಯಾರ್ಥಿಗಳಿಂದ ಗುರುವಾಯನಕೆರೆ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಉಜಿರೆ: ಹೊಳೆಯಂತಾದ ಉಜಿರೆ ಹಳೆಪೇಟೆ ರಸ್ತೆ, ಹಲವೆಡೆ ಅಂಗಡಿಗೆ ನುಗ್ಗಿದ ನೀರು, ಶಾಶ್ವತ ಪರಿಹಾರಕ್ಕೆ ಆಗ್ರಹ

Suddi Udaya

ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಕ್ರೀಡಾ ಶಿಬಿರದ ಸಮಾರೋಪ ಸಮಾರಂಭ

Suddi Udaya

ಜು.14: ಅಳದಂಗಡಿಯಲ್ಲಿ ಪ್ರಾರಂಭಗೊಳ್ಳುತ್ತಿದೆ “ನೊಚ್ಚ ಸೆರಾಮಿಕ್ಸ್”

Suddi Udaya

ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ರಾಮ ತಾರಕ ಮಂತ್ರ ಜಪಯಜ್ಞ ಹಾಗೂ ದೀಪೋತ್ಸವ

Suddi Udaya
error: Content is protected !!