September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವ: ತೋರಣ ಮುಹೂರ್ತ, ಧ್ವಜಾರೋಹಣ

ಪಡಂಗಡಿ : ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವವು ಫೆ 3 ರಿoದ ಪ್ರಾರಂಭಗೊಂಡು 7 ರ ವರೆಗೆ ತಂತ್ರಿಗಳಾದ ಶ್ರೀ ಉದಯ ಪಾಂಗಣ್ಣಾಯ ನೇತೃತ್ವದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಎಂ ರಘುರಾಮ್ ಭಟ್ ಮಠ ಉಪಸ್ಥಿತಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಮದಿಗೆ ನಡೆಯಲಿದೆ.

ಇಂದು (ಫೆ.3) ದೇವತಾ ಪ್ರಾರ್ಥನಾ, ತೋರಣ ಮುಹೂರ್ತ, ದೇವರಿಗೆ ಪಂಚಾಮೃತ ಅಭಿಷೇಕ, ಗಣಹೋಮ, ನವ ಕಲಶಾಭಿಷೇಕ, ಅಲಂಕಾರ ಪೂಜೆ, ಧ್ವಜಾರೋಹಣ, ಮಧ್ಯಾಹ್ನ ಮಹಾಪೂಜೆ, ನಿತ್ಯಬಲಿ, ಪ್ರಸಾದ ವಿತರಣೆ , ಸಾರ್ವಜನಿಕ ಅನ್ನ ಸಂತರ್ಪಣೆ ಜರಗಿತು.

ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ದಿನೇಶ್ ಮೂಲ್ಯ ಕೊಂಡೆಮಾರು, ಸದಸ್ಯರಾದ ಗೋಪಿನಾಥ್ ನಾಯಕ್ ಗುರುವಾಯನಕೆರೆ, ಸತೀಶ್ ಬಂಗೇರ ಕುವೆಟ್ಟು, ಹರಿಪ್ರಸಾದ್ ಇರ್ವತ್ರಾಯ ಓಡಿಲ್ನಾಳ, ಧನಂಜಯ ರಾವ್ ಗುರುವಾಯನಕೆರೆ, ಕೆ ರಾಜು ಪಡoಗಡಿ, ಶಾoಭವಿ ಪಿ ಬoಗೇರ, ಸವಿತಾ ಆಚಾರ್ಯ ಮುoಡಾಡಿ, ಜಾತ್ರಾ ಸಮಿತಿಯ ಗೌರಾಧ್ಯಕ್ಷ ಮಧೂರು ಕಲ್ಲೂರಾಯ, ಅಧ್ಯಕ್ಷ ಚಂದ್ರಹಾಸ ಕೇದೆ. ಉಪಾಧ್ಯಕ್ಷ ದಾಮೋದರ್ ಕುoದರ್ ಸಬರಬೈಲು. ಪ್ರಧಾನ ಕಾರ್ಯದರ್ಶಿ ಸೋಮನಾಥ ಬಿ ಇಡ್ಯ, ಜೊತೆ ಕಾರ್ಯದರ್ಶಿ ರಾಕೇಶ್ ರೈ ಬಿಯಂತಿಮಾರು, ಕೋಶಾಧಿಕಾರಿ ಟಿ ಕೃಷ್ಣ ರೈ ಸಬರಬೈಲು, ಮಾಜಿ ಅಧ್ಯಕ್ಷ ಪ್ರಭಾಕರ್ ಶೆಟ್ಟಿ ಉಪ್ಪಡ್ಕ, ಪ್ರಮುಖರಾದ ರಾಜಪ್ರಕಾಶ್ ಶೆಟ್ಟಿ, ಲಕ್ಷ್ಮಿಶ, ಯೋಗೀಶ್ ಹಾಗೂ ಪಡಂಗಡಿ, ಕುವೆಟ್ಟು, ಓಡಿಲ್ನಾಳ, ಸೋಣಂದೂರು ಗ್ರಾಮದ ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಕರಾವಳಿಯ ಶ್ರೇಷ್ಠ ಶಾಸಕ ಗೌರವವನ್ನು ಪಡೆದ ಶಾಸಕ ಹರೀಶ್ ಪೂಂಜರಿಗೆ: ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಭಕ್ತರು, ಬಳಂಜ ನಾಲ್ಕೂರು ತೆಂಕಕಾರಂದೂರು ಗ್ರಾಮಸ್ಥರಿಂದ ಗೌರವಾರ್ಪಣೆ

Suddi Udaya

ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಸಮಿತಿಗಳ ರಾಜ್ಯಮಟ್ಟದ ಮಾಸ್ಟರ್ ಮತ್ತು ಕ್ಯಾಪ್ಟನ್ ತರಬೇತಿ ಕಾರ್ಯಾಗಾರ ಸಂಪನ್ನ

Suddi Udaya

ಪೆರ್ಲ ಸನ್ಯಾಸಿ ಗುಳಿಗ ಸನ್ನಿಧಿಯಲ್ಲಿ ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ಪಂಜಾಬ್ ನಲ್ಲಿ ಅಕಾಂಕ್ಷ ಆತ್ಮಹತ್ಯೆ ಪ್ರಕರಣ: ಧರ್ಮಸ್ಥಳದ ಬೋಳಿಯಾರು ಮನೆಗೆ ತಲುಪಿದ ಮೃತದೇಹ

Suddi Udaya

ಮಂಗಳೂರು ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಸ್ಮಾರ್ಟ್ ಸಿಟಿಯಿಂದ ಆದ ಹೊಸ ಶಸ್ತ್ರಚಿಕಿತ್ಸಾ ಕೊಠಡಿ ಪ್ರಾರಂಭ

Suddi Udaya

ಕರೆಮಾಡಿದ ತಕ್ಷಣ ರೈತರ ಮನೆಬಾಗಿಲಿಗೆ ಬರಲಿದೆ ಪಶು ಸಂಜೀವಿನಿ

Suddi Udaya
error: Content is protected !!