22.5 C
ಪುತ್ತೂರು, ಬೆಳ್ತಂಗಡಿ
June 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಡ ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಬಗ್ಗೆ ಸಮಾಲೋಚನ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

ನಡ : ದೇಯಿ ಬೈದೆದಿ ಕೋಟಿ ಚೆನ್ನಯ ಮೂಲ ಸ್ಥಾನ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯಲ್ಲಿ ಮಾ. 1 ರಿಂದ ಮಾರ್ಚ್ 5ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವವನ್ನು ಯಶಸ್ಸು ಗೊಳಿಸುವ ಬಗ್ಗೆ ನಡ ಶ್ರೀ ಗುರು ನಾರಾಯಣ ಸೇವಾ ಸಂಘದಲ್ಲಿ ಹಾಗೂ ನಾವೂರು ಗ್ರಾಮಗಳ ಗೆಜ್ಜೆ ಗಿರಿಯ ಭಕ್ತಾಭಿಮಾನಿಗಳ ಸಮಾಲೋಚನ ಸಭೆಯನ್ನು ಆಯೋಜಿಸಲಾಗಿತ್ತು.


ಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ನಡ ಶ್ರೀ ಗುರುನಾರಾಯಣ ಸೇವಾ ಸಂಘ ಅಧ್ಯಕ್ಷ ವೀರಪ್ಪ ಪೂಜಾರಿ ಕೊಟ್ಲಪ್ಪಾಡಿ ಇವರು ಕ್ಷೇತ್ರದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.
ಶ್ರೀ ಕ್ಷೇತ್ರ ಗೆಜ್ಜಗಿರಿ ಜಾತ್ರೆೋತ್ಸವ ಸಮಿತಿಯ ಬೆಳ್ತಂಗಡಿ ತಾಲೂಕಿನ ಪ್ರಧಾನ ಸಂಚಾಲಕ ನಿತ್ಯಾನಂದ ನಾವರ ರವರು ಶ್ರೀ ಕ್ಷೇತ್ರದಲ್ಲಿ ನಡೆಯುವ ಮಡಿಲು ಸೇವೆ ಹಾಗೂ ಉತ್ಸವದ ಮಾಹಿತಿಯನ್ನು ಸಭೆಗೆ ನೀಡಿ ತಾಲೂಕಿನ ಎಲ್ಲಾ ಭಕ್ತಾಭಿಮಾನಿಗಳನ್ನು ಜಾತ್ರೋತ್ಸವಕ್ಕೆ ಆಮಂತ್ರಿಸಿದರು.


ವೇದಿಕೆಯಲ್ಲಿ ಉಪಾಧ್ಯಕ್ಷ ದಿವಾಕರ ಸಾಲಿಯನ್ ಸುರ್ಯ ,ಮಹಿಳಾ ಕಾರ್ಯದರ್ಶಿಯಾದ ಚಿತ್ರಾವತಿ ಭಂಡಾರಿ ಕೋಡಿ, ಮಾಜಿ ಅಧ್ಯಕ್ಷರುಗಳಾದ ರಮೇಶ್ ಕೋಟ್ಯಾನ್ ಕುತ್ರೊಟ್ಟು, ಗುರುನಾರಾಯಣ ಸೇವಾ ಸಂಘ ಬೆಳ್ತಂಗಡಿ ಇದರ ನಿರ್ದೇಶಕರಾದ ಜಯಕುಮಾರ್ ಸುರ್ಯ, ನಾವೂರು ಬಿಲ್ಲವ ಸಂಘದ ಅಧ್ಯಕ್ಷ ಸುದರ್ಶನ ನಾವೂರು, ಕಾರ್ಯದರ್ಶಿ ಪ್ರಕಾಶ್ ಕಣಾಲು, ಗೌರವ ಸಲಹೆಗಾರರಾದ ಉಮೇಶ್ ಹೊಕ್ಕಿಲ ,ಕೃಷ್ಣಪ್ಪ ಪೂಜಾರಿ ಕುದುಪುಲ, ಶುಭಕರ ಕೆ ಎಂ ಕೂಡೇಲು , ಹಾಗೂ ಶ್ರೀ ಕ್ಷೇತ್ರದ ಗೆಜ್ಜೆಗಿರಿಯ ನಡ ಹಾಗೂ ನಾವೂರು ಗ್ರಾಮದ ಭಕ್ತಭಿಮಾನಿಗಳು ಉಪಸ್ಥಿತರಿದ್ದರು.


ಕಾರ್ಯಕ್ರಮವನ್ನು ಲಾಯಿಲ ಜಿಲ್ಲಾ ಪಂಚಾಯಿತ್ ಸಂಚಾಲಕಿ ಸೌಮ್ಯ ಲಾಯಿಲ ಸಂಘಟಿಸಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶ್ರೀ ಗುರುರಾಯಣ ಸೇವಾ ಸಂಘ ನಡ ಇಲ್ಲಿಗೆ ಗಾಡ್ರೇಜ್ ಅನ್ನು ಕೊಡುಗೆಯಾಗಿ ನೀಡಿರುವ ವೀಣಾ ಕೋಯಗುಡ್ಡೆ ನಡ ಇವರನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು.


ಶ್ರೀ ಗುರುನಾರಾಯಣ ಸೇವಾ ಸಂಘ ನಡ ಇದರ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಕೆ ಭಂಡಾರಿಕೋಡಿಯವರು ಧನ್ಯವಾದವಿತ್ತರು.

Related posts

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ: ಧ್ವಜಾರೋಹಣ

Suddi Udaya

ಚಾರ್ಮಾಡಿ ಘಾಟಿ: ಮರ ಧಾರಾಶಾಹಿ-ಸಂಚಾರ ಸ್ಥಗಿತ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಶ್ರೀ ರಾಮಕ್ಷೇತ್ರದಲ್ಲಿ 63ನೇ ವರ್ಷದ ಶ್ರೀರಾಮ ತಾರಕ ಮಂತ್ರ ಸಪ್ತಾಹಕ್ಕೆ ಚಾಲನೆ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನಂದಾದೀಪವನ್ನು ಬೆಳಗಿಸಿದ ಶಾಸಕ ಹರೀಶ್ ಪೂಂಜ

Suddi Udaya

ವೇಣೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಮೇ 16 ರಂದು ‘ಲೈಟ್ ಹೌಸ್’ ಮಕ್ಕಳ ಚಲನಚಿತ್ರ ಬಿಡುಗಡೆ: ನಾಯಕ ನಟನಾಗಿ ನಾವೂರಿನ ಅಚಲ್ ಜಿ. ಬಂಗೇರ- ನಾಯಕಿ ನಟಿ ಅಪೂರ್ವ ಮಾಳ

Suddi Udaya
error: Content is protected !!