32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನಲ್ಲಿ ‘ರಸ್ತೆ ಸುರಕ್ಷತೆ ಮತ್ತು ವೃತ್ತಿ ಮಾರ್ಗದರ್ಶನ’ ಬಗ್ಗೆ ಉಪನ್ಯಾಸ

ಬೆಳ್ತಂಗಡಿ: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಸರಕಾರಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿ ಇದರ ಸರೋಜಿನಿ ನಾಯ್ಡು ರೇಂಜರ್ಸ್ ಘಟಕ ಹಾಗೂ ಬೆಳ್ತಂಗಡಿ ಟ್ರಾಫಿಕ್ ಪೊಲೀಸ್ ಠಾಣೆ ಇವುಗಳ ಜಂಟಿ ಆಶ್ರಯದಲ್ಲಿ ‘ರಸ್ತೆ ಸುರಕ್ಷತೆ ಮತ್ತು ವೃತ್ತಿ ಮಾರ್ಗದರ್ಶನ’ ಎಂಬ ವಿಷಯದ ಕುರಿತು ಅರ್ಜುನ್ ಎಚ್. ಕೆ., ವೃತ್ತ ನಿರೀಕ್ಷಕರು, ಬೆಳ್ತಂಗಡಿ ಟ್ರಾಫಿಕ್ ಪೊಲೀಸ್ ಠಾಣೆ ಇವರು ಕಾರ್ಯಕ್ರಮ ಉದ್ಘಾಟಿಸಿ ಉಪನ್ಯಾಸ ನೀಡಿದರು.

ಹದಿಹರೆಯದ ವಯೋಮಾನದವರಲ್ಲಿ ರಸ್ತೆ ಸುರಕ್ಷತೆಯ ಅಗತ್ಯತೆ ಹಾಗೂ ಪೊಲೀಸ್ ನೇಮಕಾತಿಗಾಗಿ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಯ ಕುರಿತು ಮಾಹಿತಿ ನೀಡಿದರು. ಅಧ್ಯಕ್ಷಿಯ ಭಾಷಣ ಮಾಡಿದ ಪ್ರಾಂಶುಪಾಲರು ಸುಕುಮಾರ ಜೈನ್ ಇದೊಂದು ಉತ್ತಮ ಕಾರ್ಯಕ್ರಮವಾಗಿದ್ದು ವಿದ್ಯಾರ್ಥಿಗಳು ಜೀವನದಲ್ಲಿ ಮುಂದೆ ಬರಬೇಕು ಎಂಬ ಸಲಹೆಯನ್ನು ನೀಡಿದರು.

300 ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆದುಕೊಂಡರು. ರೇಂಜರ್ಸ್ ವಿದ್ಯಾರ್ಥಿನಿಯರಾದ ಚಿಂತನ ಸ್ವಾಗತಿಸಿ, ಪ್ರಜ್ಞ ವಂದಿಸಿದರು. ಕೀರ್ತನ ಕಾರ್ಯಕ್ರಮ ನಿರೂಪಿಸಿದರು.

Related posts

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರ

Suddi Udaya

ವೇಣೂರು ಗ್ರಾಮ ಪಂಚಾಯತ್ ನ ಮೊದಲ ಹಂತದ ಗ್ರಾಮಸಭೆ

Suddi Udaya

ಬಳಂಜ: ಕರಿಯ ಪೂಜಾರಿ ಕೊಂಗುಳ ಅನಾರೋಗ್ಯದಿಂದ ನಿಧನ

Suddi Udaya

ಗೀತೆ ಜತೆ ಸಾಹಿತ್ಯ ಸಾಂಗತ್ಯ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಉಪನ್ಯಾಸ ಮಾಲಿಕೆಯ ಮೂರನೆಯ ಅಧ್ಯಾಯ

Suddi Udaya

ದೆಹಲಿಯಲ್ಲಿ ನಿರ್ಮಾಣಗೊಳ್ಳಲಿರುವ ಯೋಧರ ಉದ್ಯಾನವನಕ್ಕೆ ಬೆಳ್ತಂಗಡಿಯಿಂದ ಮಣ್ಣು ಸಮರ್ಪಣೆ

Suddi Udaya

ಉಜಿರೆ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ ( ಸಿ.ಬಿ.ಎಸ್‌.ಇ ) ಯಲ್ಲಿ ಶಿಕ್ಷಕರಿಗೆ ಯೋಗ ತರಬೇತಿ

Suddi Udaya
error: Content is protected !!