34.3 C
ಪುತ್ತೂರು, ಬೆಳ್ತಂಗಡಿ
February 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನಲ್ಲಿ ‘ರಸ್ತೆ ಸುರಕ್ಷತೆ ಮತ್ತು ವೃತ್ತಿ ಮಾರ್ಗದರ್ಶನ’ ಬಗ್ಗೆ ಉಪನ್ಯಾಸ

ಬೆಳ್ತಂಗಡಿ: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಸರಕಾರಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿ ಇದರ ಸರೋಜಿನಿ ನಾಯ್ಡು ರೇಂಜರ್ಸ್ ಘಟಕ ಹಾಗೂ ಬೆಳ್ತಂಗಡಿ ಟ್ರಾಫಿಕ್ ಪೊಲೀಸ್ ಠಾಣೆ ಇವುಗಳ ಜಂಟಿ ಆಶ್ರಯದಲ್ಲಿ ‘ರಸ್ತೆ ಸುರಕ್ಷತೆ ಮತ್ತು ವೃತ್ತಿ ಮಾರ್ಗದರ್ಶನ’ ಎಂಬ ವಿಷಯದ ಕುರಿತು ಅರ್ಜುನ್ ಎಚ್. ಕೆ., ವೃತ್ತ ನಿರೀಕ್ಷಕರು, ಬೆಳ್ತಂಗಡಿ ಟ್ರಾಫಿಕ್ ಪೊಲೀಸ್ ಠಾಣೆ ಇವರು ಕಾರ್ಯಕ್ರಮ ಉದ್ಘಾಟಿಸಿ ಉಪನ್ಯಾಸ ನೀಡಿದರು.

ಹದಿಹರೆಯದ ವಯೋಮಾನದವರಲ್ಲಿ ರಸ್ತೆ ಸುರಕ್ಷತೆಯ ಅಗತ್ಯತೆ ಹಾಗೂ ಪೊಲೀಸ್ ನೇಮಕಾತಿಗಾಗಿ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಯ ಕುರಿತು ಮಾಹಿತಿ ನೀಡಿದರು. ಅಧ್ಯಕ್ಷಿಯ ಭಾಷಣ ಮಾಡಿದ ಪ್ರಾಂಶುಪಾಲರು ಸುಕುಮಾರ ಜೈನ್ ಇದೊಂದು ಉತ್ತಮ ಕಾರ್ಯಕ್ರಮವಾಗಿದ್ದು ವಿದ್ಯಾರ್ಥಿಗಳು ಜೀವನದಲ್ಲಿ ಮುಂದೆ ಬರಬೇಕು ಎಂಬ ಸಲಹೆಯನ್ನು ನೀಡಿದರು.

300 ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆದುಕೊಂಡರು. ರೇಂಜರ್ಸ್ ವಿದ್ಯಾರ್ಥಿನಿಯರಾದ ಚಿಂತನ ಸ್ವಾಗತಿಸಿ, ಪ್ರಜ್ಞ ವಂದಿಸಿದರು. ಕೀರ್ತನ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ: ಚಂಪಿ ಆಟೋ ರಿಕ್ಷಾ ಚಾಲಕ ಶೇಖರ ನಿಧನ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಬಳಕೆ ಮುಕ್ತ ಗ್ರಾಮ ಹಾಗೂ ಕೊಳಚೆ ನೀರು ನಿರ್ವಹಣೆ ಬಗ್ಗೆ ಸಮಾಲೋಚನೆ ಸಭೆ

Suddi Udaya

ಗುರುವಾಯನಕೆರೆ ಭೂಷಣ್ ಬಾರ್ ಮಾಲಕ ಭಾಸ್ಕರ್ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಜನುಮ ದಿನ: ಬೆಳ್ತಂಗಡಿ ವರ್ತಕರ ಸಂಘದಿಂದ ಭೇಟಿ, ಗೌರವಾರ್ಪಣೆ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ: ತೋರಣ ಮೂಹೂರ್ತ, ಹೊರೆಕಾಣಿಕೆ ಸಮರ್ಪಣೆ

Suddi Udaya

ನೆಟ್ ಬಾಲ್ ಕ್ರೀಡೆಯಲ್ಲಿ ಎಸ್.ಡಿ.ಯಂ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಸಾಧನೆ

Suddi Udaya
error: Content is protected !!