22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನಲ್ಲಿ ‘ರಸ್ತೆ ಸುರಕ್ಷತೆ ಮತ್ತು ವೃತ್ತಿ ಮಾರ್ಗದರ್ಶನ’ ಬಗ್ಗೆ ಉಪನ್ಯಾಸ

ಬೆಳ್ತಂಗಡಿ: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಸರಕಾರಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿ ಇದರ ಸರೋಜಿನಿ ನಾಯ್ಡು ರೇಂಜರ್ಸ್ ಘಟಕ ಹಾಗೂ ಬೆಳ್ತಂಗಡಿ ಟ್ರಾಫಿಕ್ ಪೊಲೀಸ್ ಠಾಣೆ ಇವುಗಳ ಜಂಟಿ ಆಶ್ರಯದಲ್ಲಿ ‘ರಸ್ತೆ ಸುರಕ್ಷತೆ ಮತ್ತು ವೃತ್ತಿ ಮಾರ್ಗದರ್ಶನ’ ಎಂಬ ವಿಷಯದ ಕುರಿತು ಅರ್ಜುನ್ ಎಚ್. ಕೆ., ವೃತ್ತ ನಿರೀಕ್ಷಕರು, ಬೆಳ್ತಂಗಡಿ ಟ್ರಾಫಿಕ್ ಪೊಲೀಸ್ ಠಾಣೆ ಇವರು ಕಾರ್ಯಕ್ರಮ ಉದ್ಘಾಟಿಸಿ ಉಪನ್ಯಾಸ ನೀಡಿದರು.

ಹದಿಹರೆಯದ ವಯೋಮಾನದವರಲ್ಲಿ ರಸ್ತೆ ಸುರಕ್ಷತೆಯ ಅಗತ್ಯತೆ ಹಾಗೂ ಪೊಲೀಸ್ ನೇಮಕಾತಿಗಾಗಿ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಯ ಕುರಿತು ಮಾಹಿತಿ ನೀಡಿದರು. ಅಧ್ಯಕ್ಷಿಯ ಭಾಷಣ ಮಾಡಿದ ಪ್ರಾಂಶುಪಾಲರು ಸುಕುಮಾರ ಜೈನ್ ಇದೊಂದು ಉತ್ತಮ ಕಾರ್ಯಕ್ರಮವಾಗಿದ್ದು ವಿದ್ಯಾರ್ಥಿಗಳು ಜೀವನದಲ್ಲಿ ಮುಂದೆ ಬರಬೇಕು ಎಂಬ ಸಲಹೆಯನ್ನು ನೀಡಿದರು.

300 ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆದುಕೊಂಡರು. ರೇಂಜರ್ಸ್ ವಿದ್ಯಾರ್ಥಿನಿಯರಾದ ಚಿಂತನ ಸ್ವಾಗತಿಸಿ, ಪ್ರಜ್ಞ ವಂದಿಸಿದರು. ಕೀರ್ತನ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಎಂಟನೇ ಸುತ್ತಿನಲ್ಲಿ 7906 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಮೂಡುಕೋಡಿ ಶ್ರೀ ಸತ್ಯ ಸಾರಮಾನಿ ದೈವಸ್ಥಾನದ ಆಡಳಿತ ಸಮಿತಿಯಿಂದ ಡಾ| ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಕಳೆಂಜ ಗ್ರಾ.ಪಂ.ನಲ್ಲಿ 68 ಫಲಾನುಭವಿಗಳಿಗೆ ನೀರಿನ ಬ್ಯಾರಲ್ ವಿತರಣೆ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ದ.ಕ ಜಿಲ್ಲಾ ಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ಸ್ವಚ್ಚತಾ ಆಂದೋಲನ

Suddi Udaya

ಧರ್ಮಸ್ಥಳ ಪ್ರಕರಣದ ಬಗ್ಗೆ ಡಾ| ವೀರೇಂದ್ರ ಹೆಗ್ಗಡೆಯವರ ಮೊದಲ ಪ್ರತಿಕ್ರಿಯೆ: ಆರೋಪಗಳು ಆಧಾರ ರಹಿತ, ತನಿಖೆಯಿಂದ ಸತ್ಯ ಹೊರ ಬರಲಿದೆ: ಡಾ| ಹೆಗ್ಗಡೆ

Suddi Udaya

ಮಲವಂತಿಗೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya
error: Content is protected !!