23.4 C
ಪುತ್ತೂರು, ಬೆಳ್ತಂಗಡಿ
May 30, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

ಲಾಯಿಲ: ದೇಯಿ ಬೈದೆದಿ ಕೋಟಿ ಚೆನ್ನಯ ಮೂಲ ಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾ. 1 ರಿಂದ ಮಾ. 5ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವವನ್ನು ಯಶಸ್ಸುಗೊಳಿಸುವ ಬಗ್ಗೆ ಬೆಳ್ತಂಗಡಿ ತಾಲೂಕಿನ ಶ್ರೀ ಗುರು ನಾರಾಯಣ ಸೇವಾ ಸಂಘ ಲಾಯಿಲ ಗ್ರಾಮದಲ್ಲಿ ಗೆಜ್ಜೆಗಿರಿಯ ಭಕ್ತಾಭಿಮಾನಿಗಳ ಸಮಾಲೋಚನ ಸಭೆಯನ್ನುಫೆ. 2 ರಂದು ಆಯೋಜಿಸಲಾಗಿತ್ತು.


ಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಶ್ರೀ ಗುರುನಾರಾಯಣ ಸೇವಾ ಸಂಘ ಲಾಯಿಲ ಇದರ ಅಧ್ಯಕ್ಷ ಲಾಯಿಲ ಜಿಲ್ಲಾ ಪಂಚಾಯತ್ ಕ್ಷೇತ್ರದ ವಲಯ ಸಂಚಾಲಕ ಲಕ್ಷ್ಮಣ ಪೂಜಾರಿಯವರು ಕ್ಷೇತ್ರದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು .


ಶ್ರೀ ಕ್ಷೇತ್ರ ಗೆಜ್ಜಗಿರಿ ಜಾತ್ರೆೋತ್ಸವ ಸಮಿತಿಯ ಬೆಳ್ತಂಗಡಿ ತಾಲೂಕಿನ ಪ್ರಧಾನ ಸಂಚಾಲಕ ನಿತ್ಯಾನಂದ ನಾವರ ರವರು ಶ್ರೀ ಕ್ಷೇತ್ರದಲ್ಲಿ ನಡೆಯುವ ಮಡಿಲು ಸೇವೆ ಹಾಗೂ ಉತ್ಸವದ ಮಾಹಿತಿಯನ್ನು ಸಭೆಗೆ ನೀಡಿ ತಾಲೂಕಿನ ಎಲ್ಲಾ ಭಕ್ತಾಭಿಮಾನಿಗಳನ್ನು ಜಾತ್ರೋತ್ಸವಕ್ಕೆ ಆಮಂತ್ರಿಸಿದರು.


ವೇದಿಕೆಯಲ್ಲಿ ಸಂಘ ದ ಗೌರವ ಸಲಹೆಗಾರರಾದ ಕೃಷ್ಣಪ್ಪ ಪೂಜಾರಿ, ಆನಂದ ಪೂಜಾರಿ ನಿನಿಕಲ್ಲು ಹಾಗೂ ಲಾಯಿಲ ಗ್ರಾಮದ ಹಲವಾರು ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.


ಗುರುನಾರಾಯಣ ಸೇವಾ ಸಂಘ ಲಾಯಿಲ ಇದರ ಗೌರವ ಸಲಹೆಗಾರರಾದ ಜಯಾನಂದ ಲಾಯಿಲ ಸ್ವಾಗತಿಸಿ, ಗುರು ನಾರಾಯಣ ಸೇವಾ ಸಂಘ ನಡ ಇದರ ಪ್ರಧಾನ ಕಾರ್ಯದರ್ಶಿ ಹಾಗೂ ಲಾಯಿಲ ಜಿಲ್ಲಾ ಪಂಚಾಯತ್ ವಲಯ ಸಂಚಾಲಕಿ ಶ್ರೀಮತಿ ಸೌಮ್ಯ ಲಾಯಿಲ ಧನ್ಯವಾದವಿತ್ತರು.

Related posts

ಇಂದಬೆಟ್ಟು: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಕಾರ್ಯಕರ್ತರೊಂದಿಗೆ ಸಮಾಲೋಚನೆ ಸಭೆ

Suddi Udaya

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದ ಯಾತ್ರಾರ್ಥಿ ಹೃದಯಾಘಾತದಿಂದ ಸಾವು

Suddi Udaya

ನಿಡ್ಲೆ: ಅಕ್ರಮ ವೈನ್ ದಾಸ್ತಾನು ಸ್ಟೋರ್ ಮೇಲೆ ಬೆಳ್ತಂಗಡಿ ಅಬಕಾರಿ ದಾಳಿ ರೂ.2 ಲಕ್ಷ ಮೌಲ್ಯದ ವೈನ್ ವಶ

Suddi Udaya

ನೆಲ್ಯಾಡಿ ಪೇಟೆಯಲ್ಲಿ ಪ್ಲೈ ಓವರ್ ನಿರ್ಮಾಣ: ಡಾ.ವೀರೇಂದ್ರ ಹೆಗ್ಗಡೆಯವರಿಗೆ ಹೋರಾಟ ಸಮಿತಿಯಿಂದ ಮನವಿ

Suddi Udaya

ಯೂಟ್ಯೂಬ್ ಚಾನಲ್ ನ ಸಂದರ್ಶನದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಜೈನ ಧರ್ಮದ ಜನರ ನಿಂದಿಸಿದ ಆರೋಪ : ಬೆಳ್ತಂಗಡಿ ಠಾಣೆಯಲ್ಲಿ ಗಿರೀಶ್ ಮಟ್ಟಣ್ಣವನವರ್ ಮತ್ತು ಶ್ರೀಮತಿ ರಾಧಿಕಾ ಕಾಸರಗೋಡು ಇವರ ಮೇಲೆ ಕೇಸು

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya
error: Content is protected !!