23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಬಗ್ಗೆ ಸಮಾಲೋಚನ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

ಸುಲ್ಕೇರಿ : ದೇಯಿ ಬೈದೆದಿ ಕೋಟಿ ಚೆನ್ನಯ ಮೂಲ ಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾ.1 ರಿಂದ ಮಾ. 5ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವವನ್ನು ಯಶಸ್ಸುಗೊಳಿಸುವ ಬಗ್ಗೆ ಸುಲ್ಕೇರಿ ಶ್ರೀ ಗುರು ನಾರಾಯಣ ಸೇವಾ ಸಂಘ ಇಲ್ಲಿ ಗೆಜ್ಜೆಗಿರಿಯ ಭಕ್ತಾಭಿಮಾನಿಗಳ ಸಮಾಲೋಚನ ಸಭೆಯನ್ನು ಆಯೋಜಿಸಲಾಗಿತ್ತು.


ಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಸುಲ್ಕೇರಿ ಶ್ರೀ ಗುರುನಾರಾಯಣ ಸೇವಾ ಸಂಘ ಅಧ್ಯಕ್ಷ ಕೊರಗಪ್ಪ ಪೂಜಾರಿ ಮಣಿಕಂಠರು ಇವರು ಕ್ಷೇತ್ರದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ದರು.
ಶ್ರೀ ಕ್ಷೇತ್ರ ಗೆಜ್ಜಗಿರಿ ಜಾತ್ರೆೋತ್ಸವ ಸಮಿತಿಯ ಬೆಳ್ತಂಗಡಿ ತಾಲೂಕಿನ ಪ್ರಧಾನ ಸಂಚಾಲಕ ನಿತ್ಯಾನಂದ ನಾವರ ರವರು ಶ್ರೀ ಕ್ಷೇತ್ರದಲ್ಲಿ ನಡೆಯುವ ಮಡಿಲು ಸೇವೆ ಹಾಗೂ ಉತ್ಸವದ ಮಾಹಿತಿಯನ್ನು ಸಭೆಗೆ ನೀಡಿ ತಾಲೂಕಿನ ಎಲ್ಲಾ ಭಕ್ತಾಭಿಮಾನಿಗಳನ್ನು ಜಾತ್ರೋತ್ಸವಕ್ಕೆ ಆಮಂತ್ರಿಸಿದರು.


ವೇದಿಕೆಯಲ್ಲಿ ಶ್ರೀ ಗುರು ನಾರಾಯಣ ಸೇವಾ ಸಂಘ ಸುಲ್ಕೇರಿ ಇದರ ಗೌರವಾಧ್ಯಕ್ಷ ಸುಧೀರ್ ಎಸ್‌ ಪಿ, ಗುತ್ತು ಬರ್ಕೆಯವರಾದ ನಾರಾಯಣ ಪೂಜಾರಿ ಬೋಳುವಾಲು, ಆನಂದ ಪೂಜಾರಿ ಕುತ್ಯಾರು , ಉಪಸ್ಥಿತರಿದ್ದರು.
ಶ್ರೀ ಮಹಾಮಾಯಿ ದೇವಸ್ಥಾನದ ಮಾಜಿ ಆಡಳಿತ ಸಮಿತಿಯ ಅಧ್ಯಕ್ಷ ವಸಂತ ಪೂಜಾರಿ ಕುತ್ಯಾರು ಯೋಗಿಶ್ ಪೂಜಾರಿ ಬೋಳುವಾಲು ಹಾಗೂ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಹಲವಾರು ಭಕ್ತಾಭಿಮಾನಿಗಳು ಸಭೆಯಲ್ಲಿ ಸೇರಿದ್ದರು.


ಶ್ರೀ ಗುರುನಾಥ್ ಸೇವಾ ಸಂಘ ಸುಲ್ಕೇರಿಯ ಪ್ರಧಾನ ಕಾರ್ಯದರ್ಶಿಯಾದ ಡೀಕಯ್ಯ ಪೂಜಾರಿಯವರು ಕಾರ್ಯಕ್ರಮವನ್ನು ನಿರ್ವಹಿಸಿ, ಧನ್ಯವಾದವನ್ನಿತ್ತರು.

Related posts

ಜಿಲ್ಲಾ ಮಟ್ಟದ ಭಾವೈಕ್ಯತೆ ಮಕ್ಕಳ ಮೇಳ: ಕುಂಭಶ್ರೀ ಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಕಲ್ಲೇರಿ ಎಟಿಎಂ ಕೇಂದ್ರಕ್ಕೆ ನುಗ್ಗಿದ ಖದೀಮರು, ಕಳ್ಳತನಕ್ಕೆ ಯತ್ನ ಸೊತ್ತುಗಳಿಗೆ ಹಾನಿ

Suddi Udaya

ಕನಾ೯ಟಕ ಯಕ್ಷಗಾನ ಅಕಾಡೆಮಿ ನೂತನ ಸದಸ್ಯರ ನೇಮಕ

Suddi Udaya

ಕಳೆಂಜ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಿಂದ ಕೊಲ್ಲಿ ಶ್ರೀ ದುರ್ಗಾದೇವಿ ಸನ್ನಿಧಿಯವರೆಗೆ ಶಿಲಾಮಯ ಧ್ವಜ ಸ್ತಂಭದ ವಿಜೃಂಭಣೆಯ ಮೆರವಣಿಗೆ

Suddi Udaya
error: Content is protected !!