28.3 C
ಪುತ್ತೂರು, ಬೆಳ್ತಂಗಡಿ
June 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಬಗ್ಗೆ ಸಮಾಲೋಚನ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

ಸುಲ್ಕೇರಿ : ದೇಯಿ ಬೈದೆದಿ ಕೋಟಿ ಚೆನ್ನಯ ಮೂಲ ಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾ.1 ರಿಂದ ಮಾ. 5ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವವನ್ನು ಯಶಸ್ಸುಗೊಳಿಸುವ ಬಗ್ಗೆ ಸುಲ್ಕೇರಿ ಶ್ರೀ ಗುರು ನಾರಾಯಣ ಸೇವಾ ಸಂಘ ಇಲ್ಲಿ ಗೆಜ್ಜೆಗಿರಿಯ ಭಕ್ತಾಭಿಮಾನಿಗಳ ಸಮಾಲೋಚನ ಸಭೆಯನ್ನು ಆಯೋಜಿಸಲಾಗಿತ್ತು.


ಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಸುಲ್ಕೇರಿ ಶ್ರೀ ಗುರುನಾರಾಯಣ ಸೇವಾ ಸಂಘ ಅಧ್ಯಕ್ಷ ಕೊರಗಪ್ಪ ಪೂಜಾರಿ ಮಣಿಕಂಠರು ಇವರು ಕ್ಷೇತ್ರದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ದರು.
ಶ್ರೀ ಕ್ಷೇತ್ರ ಗೆಜ್ಜಗಿರಿ ಜಾತ್ರೆೋತ್ಸವ ಸಮಿತಿಯ ಬೆಳ್ತಂಗಡಿ ತಾಲೂಕಿನ ಪ್ರಧಾನ ಸಂಚಾಲಕ ನಿತ್ಯಾನಂದ ನಾವರ ರವರು ಶ್ರೀ ಕ್ಷೇತ್ರದಲ್ಲಿ ನಡೆಯುವ ಮಡಿಲು ಸೇವೆ ಹಾಗೂ ಉತ್ಸವದ ಮಾಹಿತಿಯನ್ನು ಸಭೆಗೆ ನೀಡಿ ತಾಲೂಕಿನ ಎಲ್ಲಾ ಭಕ್ತಾಭಿಮಾನಿಗಳನ್ನು ಜಾತ್ರೋತ್ಸವಕ್ಕೆ ಆಮಂತ್ರಿಸಿದರು.


ವೇದಿಕೆಯಲ್ಲಿ ಶ್ರೀ ಗುರು ನಾರಾಯಣ ಸೇವಾ ಸಂಘ ಸುಲ್ಕೇರಿ ಇದರ ಗೌರವಾಧ್ಯಕ್ಷ ಸುಧೀರ್ ಎಸ್‌ ಪಿ, ಗುತ್ತು ಬರ್ಕೆಯವರಾದ ನಾರಾಯಣ ಪೂಜಾರಿ ಬೋಳುವಾಲು, ಆನಂದ ಪೂಜಾರಿ ಕುತ್ಯಾರು , ಉಪಸ್ಥಿತರಿದ್ದರು.
ಶ್ರೀ ಮಹಾಮಾಯಿ ದೇವಸ್ಥಾನದ ಮಾಜಿ ಆಡಳಿತ ಸಮಿತಿಯ ಅಧ್ಯಕ್ಷ ವಸಂತ ಪೂಜಾರಿ ಕುತ್ಯಾರು ಯೋಗಿಶ್ ಪೂಜಾರಿ ಬೋಳುವಾಲು ಹಾಗೂ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಹಲವಾರು ಭಕ್ತಾಭಿಮಾನಿಗಳು ಸಭೆಯಲ್ಲಿ ಸೇರಿದ್ದರು.


ಶ್ರೀ ಗುರುನಾಥ್ ಸೇವಾ ಸಂಘ ಸುಲ್ಕೇರಿಯ ಪ್ರಧಾನ ಕಾರ್ಯದರ್ಶಿಯಾದ ಡೀಕಯ್ಯ ಪೂಜಾರಿಯವರು ಕಾರ್ಯಕ್ರಮವನ್ನು ನಿರ್ವಹಿಸಿ, ಧನ್ಯವಾದವನ್ನಿತ್ತರು.

Related posts

ಬಸದಿಗಳಿಗೆ ಅನುದಾನ : ಸವಣಾಲು ಕ್ಷೇತ್ರದ ಬಸದಿಯ ಅಭಿವೃದ್ಧಿಗೆ ರೂ.9 ಲಕ್ಷ, ಪುದುವೆಟ್ಟು ಬಸದಿಗೆ ರೂ.50 ಲಕ್ಷ ಬಿಡುಗಡೆ

Suddi Udaya

ಮಾ.18: ಉಜಿರೆಗೆ ನಂದಿ ರಥಯಾತ್ರೆ

Suddi Udaya

ಅಳದಂಗಡಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಸರಸ್ವತಿ, ಉಪಾಧ್ಯಕ್ಷರಾಗಿ ಶಾಲಿನಿ ಅವಿರೋಧವಾಗಿ ಆಯ್ಕೆ

Suddi Udaya

ಶಿರ್ಲಾಲು ಶ್ರಿ ಮಹಾಲಿಂಗೇಶ್ವರ ದೇವರಿಗೆ ಬ್ರಹ್ಮ ಕಲಶಾಭಿಷೇಕ

Suddi Udaya

ಕಲ್ಮಂಜ ಗ್ರಾಮ ಪಂಚಾಯತಿನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಕ್ಯಾಂಪ್ಕೋ ಶಾಖೆಯಿಂದ ನಿವೃತ್ತಿ ಹೊಂದಿದ ಶ್ರೀಧರ ಕೆ. ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!