22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಸೌತಡ್ಕ ಬಯಲು ಗಣಪನಿಗೆ ವಾರ್ಷಿಕ ಮೂಡಪ್ಪ ಸೇವೆಯ ಸಂಭ್ರಮ   

ಕೊಕ್ಕಡ: ಕೊಕ್ಕಡದ ಬಯಲು ಆಲಯ ಖ್ಯಾತಿಯ ಸೌತಡ್ಕ ಶ್ರೀ ಮಹಾಗಣಪತಿ  ಕ್ಷೇತ್ರದಲ್ಲಿ ಫೆ  2 ರಂದು  ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ ತಂತ್ರಿಗಳವರ ನೇತೃತ್ವದಲ್ಲಿ  ಬೆಳಿಗ್ಗೆ  108 ತೆಂಗಿನಕಾಯಿ ಗಣಪತಿ ಹವನ, ರಾತ್ರಿ  ವಾರ್ಷಿಕ ಮೂಡಪ್ಪ ಸೇವೆ  ಸಂಭ್ರಮ, ಸಡಗದಿಂದ ನಡೆಯಿತು.                                                             

ಮದ್ಯಾಹ್ನ  ಮಹಾಪೂಜೆ, ಪಲ್ಲಪೂಜೆ ನಡೆದು  ಅನ್ನಸಂತರ್ಪಣೆಯಲ್ಲಿ ಸಹಸ್ರಾರು ಭಕ್ತಾದಿಗಳು  ಭಾಗವಹಿಸಿ, ಪ್ರಸಾದ ಸ್ವೀಕರಿಸಿದರು.   ಶ್ರೀ ಮಹಾಗಣಪತಿ ಸನ್ನಿಧಿಯನ್ನು   ವಿಶೇಷವಾಗಿ ರಂಗೋಲಿ ಹಾಗು  ಪುಷ್ಪಾಲಂಕಾರದಿಂದ  ಸುಂದರವಾಗಿ   ಶೃಂಗರಿಸಲಾಗಿತ್ತು.  ಮಹಾಗಣಪತಿ ಹಿಂಭಾಗದಲ್ಲಿ ಕಬ್ಬಿನ  ಅಟ್ಟಳಿಗೆಯಲ್ಲಿ ಅಪ್ಪ ಪ್ರಸಾದ  ಸುರಿದು  ಪೇರಿಸಿ  ಮಹಾರಂಗಪೂಜೆ ಹಾಗು  ಮೂಡಪ್ಪ ಸೇವೆಯ  ಮಹಾಮಂಗಳಾರತಿ  ನೆರವೇರಿಸಲಾಯಿತು.  ಊರ ಪರವೂರ ಸಹಸ್ರಾರು ಭಕ್ತಾದಿಗಳು  ಸಂಭ್ರಮದ   ಮೂಡಪ್ಪ ಸೇವೆಯ ವಾರ್ಷಿಕ ಉತ್ಸವಕ್ಕೆ ಸಾಕ್ಷಿಯಾಗಿದ್ದರು.  ಬಳಿಕ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು. 

ಅರ್ಚಕರಾದ ಸತ್ಯಪ್ರಿಯ ಕಲ್ಲೂರಾಯ ಹಾಗು ತೊಡ್ತಿಲ್ಲಾಯ  ಮತ್ತು ಸಿಬ್ಬಂದಿವರ್ಗ ಉಪಸ್ಥಿತರಿದ್ದರು.  ಚೆಂಡೆ,ವಾದ್ಯಮೇಳ  ಮತ್ತು ಸುಡುಮದ್ದು ಪ್ರದರ್ಶನ  ವಿಶೇಷ  ಆಕರ್ಷಣೆಯಾಗಿತ್ತು. .   

ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ  ಉಪ್ಪಿನಂಗಡಿಯ  ವಾಮನ್ ನಾಯಕ್  ನೇತೃತ್ವದಲ್ಲಿ ಹಾಗು ವಿವಿಧ ಭಜನಾ  ತಂಡಗಳಿಂದ   ಭಜನಾ ಸೇವೆ, ಮಂಗಳೂರಿನ ಸುವರ್ಣ ನೃತ್ಯ ತಂಡದ ಸೇವಾರ್ಥ   ಭರತನಾಟ್ಯ,  ಸಂಜೆ ಶ್ರೀ ಕ್ಷೇತ್ರ ಸೌತಡ್ಕದ ಶಿಶುಮಂದಿರದ  ವಿದ್ಯಾರ್ಥಿಗಳಿಂದ ಚಿಣ್ಣರ ಚಿಲಿಪಿಲಿ ,  ಪುತ್ತೂರಿನ ಜಗದೀಶ್ ಆಚಾರ್ಯ ಮತ್ತು ಬಳಗದವರಿಂದ ಸಂಗೀತ ಗಾನ ಸಂಭ್ರಮ  ಭಕ್ತಿ ಗೀತೆಗಳ ಗಾಯನ ,ರಾತ್ರಿ ಮಂಜೇಶ್ವರ ಶಾರದಾ ಆರ್ಟ್ಸ್ ತಂಡದ ಐಸಿರಿ ಕಲಾವಿದರಿಂದ “ಕಲ್ಜಿಗದ ಮಾಯ್ಕಾರೆ ಪಂಜುರ್ಲಿ “ತುಳು  ಪೌರಾಣಿಕ ಹಾಗು ಭಕ್ತಿ ಪ್ರದಾನ  ನಾ ಟಕ  ಪ್ರದರ್ಶಿಸಲ್ಪಟ್ಟಿತು .

  ಬೆಳ್ತಂಗಡಿ ತಹಸೀಲ್ದಾರು, ಕ್ಷೇತ್ರದ ಆಡಳಿತಾಧಿಕಾರಿ  ಪೃಥ್ವಿ ಸಾನಿಕಮ್ ಹಾಗೂ ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್, ವ್ಯವಸ್ಥಾಪನಾ ಸಮಿತಿಯ ಮಾಜಿ ಪದಾಧಿಕಾರಿಗಳು ,  ತಾಲೂಕಿನ  ಸಹಸ್ರಾರು ಭಕ್ತಾದಿಗಳು ಭಕ್ತಿ,ಶ್ರದ್ಧೆಯಿಂದ  ಭಾಗವಹಿಸಿದ್ದರು.

Related posts

ಅರುಣಾಚಲ ಪ್ರದೇಶದಲ್ಲಿ ಐಟಿಬಿಪಿ ಸಬ್ ಇನ್ಸ್‌ಪೆಕ್ಟರ್ ಆಗಿ ಕಡಿರುದ್ಯಾವರ ಹರ್ಷಿತ್ ನೇಮಕ

Suddi Udaya

ಅಳದಂಗಡಿ ಬಡಗಕಾರಂದೂರು ಪ್ರಗತಿ ಬಂಧು ಎ’ಬಿ ಒಕ್ಕೂಟದ ಅಧ್ಯಕ್ಷರುಗಳಾಗಿ ಹರೀಶ್ ಸಾಲಿಯನ್, ಕೃಷ್ಣಪ್ಪ ಪೂಜಾರಿ ಹಾಗೂ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷರಾಗಿ ಆಶಾ ಹರೀಶ್ ಆಯ್ಕೆ

Suddi Udaya

ಕಳೆಂಜ ರಾಜೇಶ್ ಎಂ.ಕೆ ರವರ ಪೋಕ್ಸೋ ಪ್ರಕರಣ: ಅಪ್ರಾಪ್ತ ವಯಸ್ಕಳ ಮೂಲಕ ಸುಳ್ಳು ಪ್ರಕರಣ ದಾಖಲಿಸಿ ಕಾನೂನು ವ್ಯವಸ್ಥೆಯ ದುರ್ಬಳಕೆ ಮಾಡಿದ ಬಗ್ಗೆ ಮಂಗಳೂರು ವರಿಷ್ಠಾಧಿಕಾರಿ ಹಾಗೂ ಜಿಲ್ಲಾಧಿಕಾರಿಗೆ ಕಳೆಂಜ ಗ್ರಾಮಸ್ಥರಿಂದ ಮನವಿ

Suddi Udaya

ಎಸ್.ಡಿ.ಎಂ ಕಾಲೇಜಿನ ತಾಂತ್ರಿಕ ವಿದ್ಯಾಲಯದ ಗ್ರಂಥಪಾಲಕಿ ಡಾ. ರಜತಾ ಪಿ ಶೆಟ್ಟಿ ಪ್ರಬಂಧಕ್ಕೆ ಅಂತರಾಷ್ಟ ಮಟ್ಟದ ಅತ್ಯುತ್ತಮ ಪ್ರಬಂಧ ಪ್ರಶಸ್ತಿ

Suddi Udaya

ಜ.11: ಬಳಂಜದಲ್ಲಿ ನಾಲ್ಕೂರು ಶ್ರೀ ಮಾತಾ ಸಂಘಟನೆಯ ನೇತೃತ್ವದಲ್ಲಿ ತಾಲೂಕು ಮಟ್ಟದ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಬೆಳ್ತಂಗಡಿ: ಪವರ್ ಆನ್ ಸಂಸ್ಥೆಯಿಂದ ಉದ್ಯಮದೊಂದಿಗೆ ಸಮಾಜಮುಖಿ ಸೇವೆ:

Suddi Udaya
error: Content is protected !!